ಹೊಸಪೇಟೆ: 19 ವರ್ಷದ ಯುವತಿಯೊಬ್ಬಳು ಹೊಸಪೇಟೆಯಲ್ಲಿ ಸನ್ಯಾಸತ್ವವನ್ನು ಸ್ವೀಕರಿಸಿದ್ದಾಳೆ.


COMMERCIAL BREAK
SCROLL TO CONTINUE READING

ಮುಮುಕ್ಷು ವಿಧಿ ಕುಮಾರಿ ಎನ್ನುವ ಯುವತಿಯು ಹೊಸಪೇಟೆ ಉದ್ಯಮಿಯೊಬ್ಬರ ಪುತ್ರಿಯಾಗಿದ್ದು, ಈಗ ನಗರದ ಮಲ್ಲಿಗೆ ಹೋಟೆಲ್ ನಲ್ಲಿ ಸನ್ಯಾಸತ್ವವನ್ನು ಸ್ವೀಕರಿಸಿದ್ದಾಳೆ.ಪಿಯುಸಿಯನ್ನು ಮುಗಿಸಿರುವ ಈ ಯುವತಿ ಆಧ್ಯಾತ್ಮದತ್ತ ಮುಖ ಮಾಡಿದ್ದರಿಂದಾಗಿ ಈಗ ಜೈನ ದಿಕ್ಷೆಯನ್ನು ಪಡೆದುಕೊಂಡಿದ್ದಾಳೆ.


ಇದನ್ನೂ ಓದಿ: Suttur Jatra Mahotsav: ಇಂದಿನಿಂದ 6 ದಿನಗಳ ಕಾಲ ಅದ್ದೂರಿ ಸುತ್ತೂರು ಜಾತ್ರಾ ಮಹೋತ್ಸವ


ದೀಕ್ಷಾ ಕಾರ್ಯಕ್ರಮವು ಆದಿನಾಥ ಜೈನ ಶ್ವೇತಾಂಬರ ಮುನಿಗಳ ನೇತೃತ್ವದಲ್ಲಿ ನಡೆಯಿತು.ಆಕೆ ದೀಕ್ಷೆ ಹಿನ್ನೆಲೆಯಲ್ಲಿ ನಗರದಲ್ಲಿ ಅದ್ದೂರಿ ಶೋಭಾಯಾತ್ರೆ ನಡೆಸಲಾಯಿತು.ಈ ಯುವತಿ ಎಸ್ಸೆಸ್ಸೆಲ್ಸಿ ಪಿಯುಸಿಯಲ್ಲಿ ಶೇ.94, ಪಿಯುಸಿಯಲ್ಲಿ 99 ರಷ್ಟು ಅಂಕ ಗಳಿಸಿದ್ದಾರೆ.ಈ ಯುವತಿಯು ರೇಖಾ ದೇವಿ, ದಿ.ಕಾಂತಿಲಾಲ್ ಅವರ ಮೂರನೇ ಮಗಳು ಮುಮುಕ್ಷು ವಿಧಿ ಕುಮಾರಿ ಎನ್ನಲಾಗಿದೆ.


ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್, ಮಾಜಿ ಶಾಸಕ ಎಚ್. ಆರ್. ಗವಿಯಪ್ಪ, ಕಾಂಗ್ರೆಸ್ ಮುಖಂಡ ಇಮಾಜ್ ನಿಯಾಜಿ, ಬಿಜೆಪಿಯ ಸಿದ್ದಾರ್ಥ್ ಸಿಂಗ್ ಅವರು ದೀಕ್ಷಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.