ಬೆಂಗಳೂರು : ಕ್ಯಾಲಿಫೋರ್ನಿಯಾದಲ್ಲಿ ಮೈಸೂರಿನ 25 ವರ್ಷದ ವಿದ್ಯಾರ್ಥಿಯನ್ನು ಅಪರಿಚಿತ ಬಂದೂಕುಧಾರಿ ಗುಂಡಿಕ್ಕಿ ಕೊಂದಿದ್ದಾನೆ.


COMMERCIAL BREAK
SCROLL TO CONTINUE READING

ಸ್ಯಾನ್ ಬರ್ನಾರ್ಡಿನೊದ ಕ್ಯಾಲಿಫೋರ್ನಿಯಾ ಸ್ಟೇಟ್ ಯೂನಿವರ್ಸಿಟಿಯಲ್ಲಿ ಕಂಪ್ಯೂಟರ್ ಸೈನ್ಸ್ ಕಲಿಯುತ್ತಿದ್ದ ಅಭಿಷೇಕ್ ಸುಧೇಶ್ ಭಟ್ ಅವರು ಅರೆಕಾಲಿಕ ಕೆಲಸ ಮಾಡುತ್ತಿದ್ದ ಹೋಟೆಲ್ ಒಳಗೆ ಕೊಲ್ಲಲ್ಪಟ್ಟರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.ಮೈಸೂರಿನ ಕುವೆಂಪುನಗರ ನಿವಾಸಿ ಅಭಿಷೇಕ್ ಸುಮಾರು ಎರಡು ವರ್ಷಗಳ ಹಿಂದೆ ಪದವಿಪೂರ್ವ ಕೋರ್ಸ್‌ಗಾಗಿ ಕ್ಯಾಲಿಫೋರ್ನಿಯಾಗೆ ತೆರಳಿದ್ದರು. ಸ್ನಾತಕೋತ್ತರ ಪದವಿ ಪೂರ್ಣಗೊಳಿಸಲು ಅವರಿಗೆ ನಾಲ್ಕು ತಿಂಗಳು ಬಾಕಿ ಉಳಿದಿದೆ.


ವರದಿಗಳ ಪ್ರಕಾರ ಗುರುವಾರ ರಾತ್ರಿ 11:30 ರ ಸುಮಾರಿಗೆ ಘಟನೆ ಬಗ್ಗೆ ಮಾಹಿತಿ ನೀಡಿದಾಗ ಅಭಿಷೇಕ್ ಕುಟುಂಬ ದಿಗ್ಭ್ರಮೆಗೊಂಡಿದೆ ಎನ್ನಲಾಗಿದೆ. ಅಭಿಷೇಕ್ ಅವರನ್ನು ಹೋಟೆಲ್ ಒಳಗೆ ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಕರೆ ಮಾಡಿದವರು ಹೇಳಿದರು. ಆದರೆ ಬೇರೆ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಿಲ್ಲ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಲಾಸ್ ಏಂಜಲೀಸ್‌ನಿಂದ ಪೂರ್ವಕ್ಕೆ 100 ಕಿ.ಮೀ ದೂರದಲ್ಲಿರುವ ಸ್ಯಾನ್ ಬರ್ನಾಂಡಿನೊದಲ್ಲಿ ತೀವ್ರವಾದ ಚಂಡಮಾರುತದಿಂದಾಗಿ ಅಭಿಸ್ಕೇಕ್ ಅವರ ದೇಹವನ್ನು ಮರಳಿ ತರುವಲ್ಲಿ ಅವರ ಕುಟುಂಬ ಸಮಸ್ಯೆಗಳನ್ನು ಎದುರಿಸುತ್ತಿದೆ ಎನ್ನಲಾಗಿದೆ.


ಈ ಕುರಿತಾಗಿ ಪ್ರತಿಕ್ರಿಯಿಸಿರುವ ಕುಟುಂಬ ಸದಸ್ಯರೊಬ್ಬರು 'ಹೆಚ್ಚಿನ ವಿವರಗಳಿಗಾಗಿ ನಾವು ಯುಎಸ್ ಕಾನ್ಸುಲೇಟ್ ಮತ್ತು ಭಾರತೀಯ ಹೈಕಮಿಷನ್ ಅನ್ನು ಸಂಪರ್ಕಿಸಿದ್ದೇವೆ ಮತ್ತು ಈ ಘಟನೆಯ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ ಮತ್ತು ಅಭಿಷೇಕ್ ಅವರನ್ನು ಏಕೆ ಗುಂಡಿಕ್ಕಿ ಕೊಲ್ಲಲಾಯಿತು ಎನ್ನುವ ಬಗ್ಗೆ ತಿಳಿದಿಲ್ಲ ಎನ್ನಲಾಗಿದೆ. ಪೋಷಕರು ಮತ್ತು ಅಭಿಷೇಕ್ ಅವರ ಕಿರಿಯ ಸಹೋದರ ಸ್ಯಾನ್ ಬರ್ನಾರ್ಡಿನೊಗೆ ಪ್ರಯಾಣಿಸಲು ವಿಧಾನಗಳನ್ನು ರೂಪಿಸಲಾಗುತ್ತಿದೆ 'ಎಂದು ಸ್ಥಳೀಯ ಪತ್ರಿಕೆಗೆ ತಿಳಿಸಿದ್ದಾರೆ.