ಠೇವಣಿ ಹಣ ಹಿಂದಿರುಗಿಸದ ಕೋ ಆಪ್‍ರೇಟಿವ್ ಸೊಸೈಟಿಗೆ ರೂ.11 ಲಕ್ಷ 76 ಸಾವಿರ ದಂಡ

ಹುಬ್ಬಳ್ಳಿಯ ವಿಕಾಸ ನಗರದ ನಿವಾಸಿಗಳಾದ ಸುಲೋಚನಾ ಪೈ ಮತ್ತು ಶಾರದಾ ಪೈ ಅನ್ನುವವರು ಹುಬ್ಬಳ್ಳಿಯ ಕ್ವಾಯನ್ ರಸ್ತೆಯಲ್ಲಿರುವ ಸರಸ್ವತಿ ಕೋ ಆಪರೇಟಿವ್ ಕ್ರೇಡಿಟ್ ಸೊಸೈಟಿಯ ಸದಸ್ಯರಾಗಿ ಖಾಯಂ ಠೇವಣಿ ಇಟ್ಟು ಉಳಿತಾಯ ಖಾತೆ ಹೊಂದಿದ್ದರು.

Written by - Manjunath N | Last Updated : Sep 2, 2023, 06:32 PM IST
  • ಅವರಿಬ್ಬರೂ ಸದರಿ ಸೊಸೈಟಿಯಲ್ಲಿ ಒಟ್ಟು ರೂ.10,50,756/- ಮೊತ್ತದ ವಿವಿಧ ಠೇವಣಿ ಒಂದು ವರ್ಷದ ಅವಧಿಗೆ ಇಟ್ಟಿದ್ದರು.
  • ಜೊತೆಗೆ ಅವರ ಉಳಿತಾಯ ಖಾತೆಯಲ್ಲಿ ರೂ.1,35,320/- ಹಣ ಇತ್ತು.
  • ಸದರಿ ಸೊಸೈಟಿಯವರು ಅವರ ಹಣ ಅಥವಾ ಬಡ್ಡಿಯನ್ನು ಅವರಿಗೆ ಕೊಟ್ಟಿರಲಿಲ್ಲ.
ಠೇವಣಿ ಹಣ ಹಿಂದಿರುಗಿಸದ ಕೋ ಆಪ್‍ರೇಟಿವ್ ಸೊಸೈಟಿಗೆ ರೂ.11 ಲಕ್ಷ 76 ಸಾವಿರ ದಂಡ  title=
file photo

ಧಾರವಾಡ : ಹುಬ್ಬಳ್ಳಿಯ ವಿಕಾಸ ನಗರದ ನಿವಾಸಿಗಳಾದ ಸುಲೋಚನಾ ಪೈ ಮತ್ತು ಶಾರದಾ ಪೈ ಅನ್ನುವವರು ಹುಬ್ಬಳ್ಳಿಯ ಕ್ವಾಯನ್ ರಸ್ತೆಯಲ್ಲಿರುವ ಸರಸ್ವತಿ ಕೋ ಆಪರೇಟಿವ್ ಕ್ರೇಡಿಟ್ ಸೊಸೈಟಿಯ ಸದಸ್ಯರಾಗಿ ಖಾಯಂ ಠೇವಣಿ ಇಟ್ಟು ಉಳಿತಾಯ ಖಾತೆ ಹೊಂದಿದ್ದರು.

ಇದನ್ನೂ ಓದಿ: ADITYA L1 LAUNCH: ಆದಿತ್ಯ ಉಪಗ್ರಹ ಯಶಸ್ಸಿಗೆ ಹಾರೈಸಿ ಯೋಗಪಟುಗಳಿಂದ ಸೂರ್ಯ ನಮಸ್ಕಾರ

ಅವರಿಬ್ಬರೂ ಸದರಿ ಸೊಸೈಟಿಯಲ್ಲಿ ಒಟ್ಟು ರೂ.10,50,756/- ಮೊತ್ತದ ವಿವಿಧ ಠೇವಣಿ ಒಂದು ವರ್ಷದ ಅವಧಿಗೆ ಇಟ್ಟಿದ್ದರು. ಜೊತೆಗೆ ಅವರ ಉಳಿತಾಯ ಖಾತೆಯಲ್ಲಿ ರೂ.1,35,320/- ಹಣ ಇತ್ತು. ಠೇವಣಿ ಅವಧಿ ಮುಗಿದಿದ್ದರಿಂದ ಠೇವಣಿ ಹಣ ಮತ್ತು ತಮ್ಮ ಉಳಿತಾಯ ಖಾತೆಯಲ್ಲಿರುವ ಹಣ ಕೊಡುವಂತೆ ದೂರುದಾರರು ಹಲವು ಬಾರಿ ವಿನಂತಿಸಿದರೂ ಸದರಿ ಸೊಸೈಟಿಯವರು ಅವರ ಹಣ ಅಥವಾ ಬಡ್ಡಿಯನ್ನು ಅವರಿಗೆ ಕೊಟ್ಟಿರಲಿಲ್ಲ.

ಅಂತಹ ಎದುರುದಾರರ ನಡಾವಳಿಕೆಯಿಂದ ತನಗೆ ಮೋಸವಾಗಿದೆ ಮತ್ತು ಎದುರುದಾರ ಸೊಸೈಟಿಯವರು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಎಸಗಿದ್ದಾರೆಂದು ಹೇಳಿ ಎದುರುದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಇಬ್ಬರೂ ದೂರುದಾರರು ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ಫಿರ್ಯಾದಿ ಸಲ್ಲಿಸಿದ್ದರು.

ಇದನ್ನೂ ಓದಿ: "ಏಷ್ಯಾದಲ್ಲಿ ಕರ್ನಾಟಕವನ್ನು ಉತ್ತುಂಗಕ್ಕೆ ಕೊಂಡೊಯ್ಯುವುದು ನಮ್ಮ ಸರ್ಕಾರದ ಗುರಿ"

ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ.ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ.ಅ. ಬೋಳಶೆಟ್ಟಿ ಮತ್ತು ಪ್ರಭು.ಸಿ. ಹಿರೇಮಠ ಅವರು ಠೇವಣಿ ಅವಧಿ ಮುಗಿದರೂ ದೂರುದಾರರ ಹಣ ಹಿಂದಿರುಗಿಸದೇ ಇರುವುದು ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.

ದೂರುದಾರರಿಗೆ ಅವರ ಠೇವಣಿ ಹಣ ರೂ.10,50,756/- ಮತ್ತು ಉಳಿತಾಯ ಖಾತೆಯಲ್ಲಿರುವ ಹಣ ರೂ.1,35,320/- ಹಣವನ್ನು ಅದರ ಮೇಲೆ ಶೇ.9 ರಂತೆ ಠೇವಣಿ ಇಟ್ಟ ದಿನಾಂಕದಿಂದ ಲೆಕ್ಕ ಹಾಕಿ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಹಿಂದಿರುಗಿಸುವಂತೆ ಆಯೋಗ ನಿರ್ದೇಶನ ನೀಡಿದೆ, ಜೊತೆಗೆ ದೂರುದಾರರು ಅನುಭವಿಸಿದ ಮಾನಸಿಕ ಹಿಂಸೆಗೆ ರೂ.50 ಸಾವಿರ ಪರಿಹಾರ ಮತ್ತು ಪ್ರಕರಣ ಖರ್ಚು ಅಂತಾ ರೂ.10 ಸಾವಿರ ಈ ತೀರ್ಪು ನೀಡಿದ ಒಂದು ತಿಂಗಳೊಳಗಾಗಿ ಎದುರುದಾರರಿಗೆ ಕೊಡುವಂತೆ ಆಯೋಗ ಆದೇಶಿಸಿದೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

Trending News