ಮಂಗಳೂರು: ಸಹಪಾಠಿ ವಿದ್ಯಾರ್ಥಿನಿ ಜೊತೆಯಾಗಿ ಜ್ಯೂಸ್ ಕುಡಿಯುತ್ತಿದ್ದ ಸಹಪಾಠಿ ವಿದ್ಯಾರ್ಥಿಯನ್ನು ಅಡ್ಡಗಟ್ಟಿ ಕರೆದೊಯ್ದು ಹಲ್ಲೆ ನಡೆಸಿದ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಮಹಮ್ಮದ್ ಫಾರಿಸ್  ಹಲ್ಲೆಗೊಳಗಾದ ವಿದ್ಯಾರ್ಥಿ.ಈತ ತನ್ನ ಸಹಪಾಠಿ ವಿದ್ಯಾರ್ಥಿನಿಯ ಜೊತೆಗೆ  ಜ್ಯೂಸ್ ಕುಡಿಯುತ್ತಿದ್ದ ವೇಳೆ  ಸುಮಾರು 15 ಮಂದಿಯ ತಂಡ ಅಲ್ಲಿಗೆ ಆಗಮಿಸಿ ಆತನ ಹೆಸರು ಕೇಳಿ ಬಳಿಕ ಬಲವಂತವಾಗಿ ಕರೆದೊಯ್ದು ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ.


ಇದನ್ನೂ ಓದಿ: ರಾಜ್ಯದಲ್ಲಿ ರಂಗೇರಿದ ಅಸೆಂಬ್ಲಿ ಎಲೆಕ್ಷನ್ ಕ್ಯಾಂಪೇನ್'ಗೆ ಅಡ್ಡಿಯಾಗ್ತಾನಾ ವರುಣ!


ಹಲ್ಲೆಗೊಳಗಾಗಿರುವ ಮಹಮ್ಮದ್ ಫಾರಿಸ್ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಮಾತಾನಾಡಿರುವ ಫಾರಿಸ್,  ನಾನು ಮತ್ತು ನನ್ನ ತರಗತಿಯ ವಿದ್ಯಾರ್ಥಿನಿ ಜ್ಯೂಸ್ ಕುಡಿಯುತ್ತಿದ್ದವೆ. ಆ  ವೇಳೆ ಅಲ್ಲಿಗೆ ಬಂದ ಸುಮಾರು 15 ಮಂದಿ ಪುತ್ತೂರಿನ ಐಟಿಐ ಕಾಲೇಜ್ ವಿದ್ಯಾರ್ಥಿಗಳು ನನ್ನ ಹೆಸರು ಕೇಳಿದರು ಎಂದಿದ್ದಾರೆ.  


ಇದನ್ನೂ ಓದಿ: ಬಿಜೆಪಿ ಪಕ್ಷ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲ್ಲ : ಡಿ.ಕೆ.ಶಿವಕುಮಾರ್‌


ಫಾರಿಸ್ ಹೆಸರು ಹೇಳಿದ ಬಳಿಕ ನಿನ್ನಲ್ಲಿ ಮಾತನಾಡಲಿದೆ ಎಂದು ವಿದ್ಯಾರ್ಥಿಯನ್ನು ರೂಂ ಒಂದಕ್ಕೆ ಕರೆದೊಯ್ದರು ಎನ್ನಲಾಗಿದೆ.  ಅಲ್ಲಿ ಸುಮಾರು 50 ಮಂದಿ ಸೇರಿಕೊಂಡು ವಿದ್ಯಾರ್ಥಿ ಮೇಲೆ ವೈರ್ ಮತ್ತು ಲಾಠಿಯಿಂದ ಹೊಡೆದಿದ್ದಾರೆಂದು ಆರೋಪಿಸಿದ್ದಾರೆ.  


ಕಬ್ಬಿಣ ಬಿಸಿ ಮಾಡಿ ಮೈಮೇಲಿಟ್ಟು ಹಲ್ಲೆ ನಡೆಸಿದರು ಎಂದು ವಿದ್ಯಾರ್ಥಿ ಹೇಳಿದ್ದಾನೆ.  ಬಳಿಕ ನೀನು ಪೊಲೀಸರಿಗೆ ದೂರು ನೀಡಿದರೆ ನಿನ್ನನ್ನು ಕೊಲೆ ಮಾಡುತ್ತೇವೆ. ನಿನ್ನ ಮೇಲೆ ಪೋಕ್ಸೋ ಕಾಯ್ದೆ ದಾಖಲಾಗುವಂತೆ ಮಾಡುತ್ತೇವೆ ಎಂದು ಹೆದರಿಸಿದ್ದಾರೆಂದು  ಗಾಯಾಳು ಫಾರಿಸ್ ತಿಳಿಸಿದ್ದಾರೆ. ಸದ್ಯ ಈ ಬಗ್ಗೆ ಪುತ್ತೂರು ನಗರ ಠಾಣೆಗೆ ದೂರು ದಾಖಲಾಗಿದೆ. https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.