ಚಾಮರಾಜನಗರ:  ಖಾಸಗಿ ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿಯೊರ್ವನ ಬಲಗಾಲು ನಜ್ಜುಗುಜ್ಜಾಗಿರುವ ಘಟನೆ ಗೋಪಾಲಪುರ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.


COMMERCIAL BREAK
SCROLL TO CONTINUE READING

ಗೋಪಾಲಪುರ ಗ್ರಾಮದ ಸಿದ್ದಪ್ಪ ಎಂಬುವರ ಮಗ ಕನ್ನೇಗಾಲ ಗ್ರಾಮದಲ್ಲಿರುವ ವಿದ್ಯಾ ಅಮೃತ ಖಾಸಗಿ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿ ಹೃತ್ವಿಕ್( 8) ಎಂಬಾತನ ಕಾಲಿಗೆ ತೀವ್ರ ಪೆಟ್ಟಾಗಿದೆ.


ಇದನ್ನೂ ಓದಿ- ಭಾರತದಲ್ಲಿ ಮೊಟ್ಟ ಮೊದಲು ಸ್ವಾತಂತ್ರ‍ ಘೋಷಿಸಿಕೊಂಡ ಈ ಹಳ್ಳಿಯ ಬಗ್ಗೆ ನಿಮಗೆಷ್ಟು ಗೊತ್ತು?


ಗೋಪಾಲಪುರ ಗ್ರಾಮದಲ್ಲಿ ಶನಿವಾರ ಬೆಳಗಿನ ತರಗತಿಗೆ ತೆರಳಲು ತನ್ನ ಶಾಲಾ ವಾಹನಕ್ಕಾಗಿ ಕಾಯುತ್ತಾ ಸೇತುವೆ ಮೇಲೆ ಕುಳಿತಿದ್ದ, ಈ ವೇಳೆ ಸೆಂಟ್ ಜಾನ್ ಖಾಸಗಿ ಶಾಲಾ ವಾಹನದ ಚಾಲಕ‌ ಗಾಡಿಯನ್ನು ರಿವರ್ಸ್ ತೆಗೆಯುತಿದ್ದ ವೇಳೆ ರಸ್ತೆ ಕಿರಿದಾದ ಕಾರಣ ವಾಹನದ ಹಿಂಬದಿ ಚಕ್ರವು ವಿದ್ಯಾರ್ಥಿಯ ಬಲಗಾಲಿನ ಮೇಲೆ ಹರಿದಿದೆ, ಘಟನೆಯಲ್ಲಿ ಬಾಲಕನ‌ ಕಾಲು ನಜ್ಜುಗುಜ್ಜಾಗಿದೆ,ಕೂಡಲೇ ಸ್ಥಳೀಯರು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ವಿದ್ಯಾರ್ಥಿಯನ್ನು ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಿದ್ದಾರೆ.


ಘಟನಾ ಸ್ಥಳಕ್ಕೆ ಸಬ್ ಇನ್ಸ್ ಪೆಕ್ಟರ್ ಸಾಹೇಬಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿ ಶಾಲಾ ವಾಹನವನ್ನು ‌ವಶಕ್ಕೆ ಪಡೆದುಕೊಂಡಿದ್ದು ಗುಂಡ್ಲುಪೇಟೆ ಪೊಲೀಸ್ ‌ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ‌ಕ್ರಮ ಕೈಗೊಂಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.