ಬೆಂಗಳೂರು: ಸರಣಿ ಅಪಘಾತದಿಂದ 8 ವಾಹನಗಳು ಜಖಂಗೊಂಡಿರುವ ಘಟನೆ ಹೊಸಕೋಟೆಯ ಟೋಲ್ ಪ್ಲಾಜಾ ಬಳಿ ನಡೆದಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಬಿಬಿಎಂಪಿ ವಾರ್ಡ್ ವಿಂಗಡಣೆ ಅಧಿಕಾರ ಪಿಪಾಸು ಬಿಜೆಪಿಯ ವಿಕೃತಿ: ಎಚ್‌ಡಿಕೆ ಆಕ್ರೋಶ


ಲಾರಿ‌ ಚಾಲಕನ ನಿರ್ಲಕ್ಷ್ಯದಿಂದ ಈ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾಣಿ ಸಂಭವಿಸಿಲ್ಲ. ಎರಡು ಬಸ್, ಒಂದು ಲಾರಿ, ಒಂದು ಗೂಡ್ಸ್ ವಾಹನ ಮತ್ತು ಮೂರು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ. 


ಹೆದ್ದಾರಿಯಲ್ಲಿ ಲಾರಿ‌ ಚಾಲಕ ಅಡ್ಡಾದಿಡ್ಡಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿದೆ ಎಂದು ಆರೋಪಿಸಲಾಗಿದೆ. ಹೊಸಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಇದನ್ನೂ ಓದಿ: WATCH: ವಾಹನಗಳ ಮೇಲೆ ಆನೆ ದಾಳಿ, ಆತಂಕಗೊಂಡ ವಾಹನ ಸವಾರರು


ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ನಗರದ ಟೋಲ್ ಪ್ಲಾಜಾ ಬಳಿ ಈ ಅಪಘಾತ ಸಂಭವಿಸಿದೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.