ಬೆಂಗಳೂರು: ಬೆಂಗಳೂರು ನಗರಾಭಿವೃದ್ಧಿ ಸಚಿವರು ಪ್ರತಿನಿಧಿಸುವ ಕ್ಷೇತ್ರದಲ್ಲೇ ಪಾತ್ ಹೋಲ್ ನಿಂದಾಗಿ ಒಬ್ಬ ಬೈಕ್ ಸವಾರ ಪ್ರಜ್ಞೆ ತಪ್ಪಿರುವ ಘಟನೆ ನಡೆದಿದೆ.


COMMERCIAL BREAK
SCROLL TO CONTINUE READING

ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಪ್ರತಿನಿಧಿಸುವ ಹೆಣ್ಣೂರು ಕ್ಷೇತ್ರದ ಮುಖ್ಯ ರಸ್ತೆಯ ಮೂರನೇ ಕ್ರಾಸ್ ನಲ್ಲಿ ಪಾತ್ ಹೋಲ್ ಗೆ ಬಿದ್ದ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿವೆ. ಸುಮಾರು ಎರಡು ಅಡಿ ಆಳವಿರುವ ಪಾತ್ ಹೋಲ್ ನಲ್ಲಿ ಬಿದ್ದ ಬೈಕ್ ಸವಾರ ಸಂಪೂರ್ಣ ಪ್ರಜ್ಞೆ ತಪ್ಪಿದ್ದರು. ಸ್ಥಳೀಯರು 108 ತುರ್ತು ವಾಹನಕ್ಕೆ ಕರೆ ಮಾಡಿ ವ್ಯಕ್ತಿಯನ್ನು ಖಾಸಗಿ ಆಸ್ಪತ್ರೆಗೆ ಸೇರಿಸಿದ್ದಾರೆ ಎಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ.


ಇದೇ ರಸ್ತೆಯಲ್ಲಿ ಶಾಲಾ-ಕಾಲೇಜುಗಳಿದ್ದು, ಪ್ರತಿದಿನ ಐದಾರು ಜನ ಬಿಲುತ್ತಿರುತ್ತಾರೆ. ನಗರಾಭಿವೃದ್ಧಿ ಸಚಿವರಿಗೆ ದೂರು ಕೊಟ್ಟಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.