ಬೆಂಗಳೂರು : ವೇಶ್ಯಾವಾಟಿಕೆಯ ಮಧ್ಯವರ್ತಿ ಸ್ಯಾಂಟ್ರೋ ರವಿ ಹಾಗೂ ಆತನೊಂದಿಗೆ ಸಂಬಂಧ ಹೊಂದಿದ್ದ ಜನಪ್ರತಿನಿಧಿಗಳನ್ನು ಶೀಘ್ರವೇ ಬಂಧಿಸಬೇಕೆಂದು ಆಗ್ರಹಿಸಿ ಆಮ್‌ ಆದ್ಮಿ ಪಾರ್ಟಿಯ ಮಹಿಳಾ ಘಟಕವು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರದಂದು ಪ್ರತಿಭಟನೆ ನಡೆಸಿತು.


COMMERCIAL BREAK
SCROLL TO CONTINUE READING

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಎಎಪಿ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ, ರಾಜ್ಯವನ್ನು ಲೂಟಿ ಮಾಡುವ ಉದ್ದೇಶದಿಂದ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡು ರಚನೆಯಾದ ಅನೈತಿಕ ಸರ್ಕಾರವಿದು. ಬಾಯಿ ತೆರೆದರೆ ಭಾರತೀಯ ಸಂಸ್ಕೃತಿಯ ಬಗ್ಗೆ ಪುಂಖಾನುಪುಂಖವಾಗಿ ಮಾತನಾಡುವ ಬಿಜೆಪಿ ನಾಯಕರ ನಿಜ ಬಣ್ಣವು ಸ್ಯಾಂಟ್ರೋ ರವಿ ಪ್ರಕರಣದಿಂದಾಗಿ ಬಟಾ ಬಯಲಾಗಿದೆ. ಮಹಿಳೆಯರ ಬಗ್ಗೆ ಸ್ಪಲ್ಪವೂ ಗೌರವವಿಲ್ಲದ ನಾಯಕರು ಇಂದು ರಾಜ್ಯವನ್ನು ಆಳುತ್ತಿರುವುದು ದುರಂತ ಎಂದು ಅಸಮಧಾನ ಹೊರ ಹಾಕಿದ್ರು.


ಇದನ್ನೂ ಓದಿ:ಶಾಲೆಗೆ ಹೋಗಲು ರೆಡಿಯಾಗುತ್ತಿದ್ದ 10ನೇ ತರಗತಿಯ ವಿದ್ಯಾರ್ಥಿ ಹೃದಯಾಘಾತದಿಂದ ಸಾವು


ಮುಖ್ಯಮಂತ್ರಿ ಹಾಗೂ ಸಚಿವರುಗಳು ಸ್ಯಾಂಟ್ರೋ ರವಿ ಬಗ್ಗೆ ಗೊತ್ತೇ ಇಲ್ಲವೆಂದು ಮಾಧ್ಯಮಗಳ ಮುಂದೆ ನಾಟಕವಾಡುತ್ತಿದ್ದಾರೆ. ಮತ್ತೊಂಡೆದೆ, ಆತನಿಗೆ ಸರ್ಕಾರವೇ ಬೆಂಬಲವಾಗಿ ನಿಂತಿದೆ. ಆತನಿಗೆ ನಾಪತ್ತೆಯಾಗಲು ಅವಕಾಶ ನೀಡಿ ಸಾಕ್ಷಿಗಳನ್ನು ನಾಶಪಡಿಸಲಾಗುತ್ತಿದೆ. ಆದ್ದರಿಂದಲೇ ಆತನ ಬಂಧನ ಈವರೆಗೂ ಸಾಧ್ಯವಾಗಿಲ್ಲ. ಕುಮಾರಕೃಪಾ ಅತಿಥಿಗೃಹವು ಅನೈತಿಕ ಚಟುವಟಿಕೆಗಳಿಗೆ ಬಳಕೆಯಾಗುತ್ತಿರುವು ವಿಪರ್ಯಾಸ. ಸರ್ಕಾರ ಈ ಬಗ್ಗೆ ಕ್ರಮ ಕೈಗೊಳ್ಳದಿದ್ದರೆ, ಮುಂದಿನ ದಿನಗಳಲ್ಲಿ ಆಮ್‌ ಆದ್ಮಿ ಪಾರ್ಟಿಯು ಕುಮಾರಕೃಪಾದ ಪ್ರತಿಯೊಂದು ಕೊಠಡಿಗೆ ಭೇಟಿ ನೀಡಿ ಪರಿಶೀಲಿಸುವ ಚಳವಳಿ ಹಮ್ಮಿಕೊಳ್ಳಲಿದೆ” ಎಂದು ಕುಶಲಸ್ವಾಮಿ ಹೇಳಿದರು.


ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ಮಾಧ್ಯಮ ವಕ್ತಾರೆ ಉಷಾ ಮೋಹನ್‌ ಮಾತನಾಡಿ, “2018ರ ಚುನಾವಣೆಯಲ್ಲಿ ಬಿಜೆಪಿಗೆ ಜನಾದೇಶ ಬಂದಿರಲಿಲ್ಲ. ಆದರೆ ನಂತರದ ದಿನಗಳಲ್ಲಿ ಶಾಸಕರನ್ನು ಖರೀದಿಸಿ ಅಕ್ರಮವಾಗಿ ಅಧಿಕಾರ ಪಡೆಯುವಾಗ ಸ್ಯಾಂಟ್ರೋ ರವಿ ಮೂಲಕ ಮಹಿಳೆಯರನ್ನು ದುರ್ಬಳಕೆ ಮಾಡಿಕೊಂಡಿರುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ. ಅಧಿಕಾರಕ್ಕಾಗಿ ಯಾವ ಮಟ್ಟಕ್ಕಾದರೂ ಇಳಿಯುವ ಪಕ್ಷವೆಂದರೆ ಅದು ಬಿಜೆಪಿ. ಮುಂದಿನ ಚುನಾವಣೆಯಲ್ಲಿ ನಾಡಿನ ಸಮಸ್ತ ಮಹಿಳೆಯರು ಬಿಜೆಪಿಯ ವಿರುದ್ಧ ಮತ ಚಲಾಯಸುವ ಮೂಲಕ ತಕ್ಕ ಪಾಠ ಕಲಿಸಬೇಕು” ಎಂದು ಹೇಳಿದರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.