ಬೆಳ್ಳಂಬೆಳ್ಳಗ್ಗೆ ಚಿಕ್ಕಬಳ್ಳಾಪುರದ ಬಳಿ ಭೀಕರ ಅಪಘಾತ 15 ಜನ ಸ್ಥಳದಲ್ಲೇ ಸಾವು.!
Chikkaballapur Accident : ಸಿಮೆಂಟ್ ಬಂಕರ್ಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.
ಚಿಕ್ಕಬಳ್ಳಾಪುರ: ಸಿಮೆಂಟ್ ಬಂಕರ್ಗೆ ಟಾಟಾ ಸುಮೋ ಡಿಕ್ಕಿ ಹೊಡೆದ ಘಟನೆ ಚಿಕ್ಕಬಳ್ಳಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ. ಅಪಘಾತ 15 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಚಿಕ್ಕಬಳ್ಳಾಪುರ ಹೊರವಲಯದ ರಾಷ್ಟ್ರೀಯ ಹೆದ್ದಾರಿ 44 ರ ಬಳಿ ನಿಂತಿದ್ದ ಸಿಮೆಂಟ್ ಬಂಕರ್ಗೆ ಟಾಟಾ ಸುಮೋ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಟಾಟಾ ಸುಮೋದಲ್ಲಿದ್ದ 15 ಜನ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಚಿಂತನೆ
ಮೃತರ ಗುರುತು ಮತ್ತು ವಿವರ ಇನ್ನೂ ಪತ್ತೆಯಾಗಿಲ್ಲ. ಆಂಧ್ರಪ್ರದೇಶದಿಂದ ಬೆಂಗಳೂರಿನತ್ತ ಹೊರಟಿದ್ದ ಟಾಟಾ ಸುಮೋ ಅಪಘಾತ ಸಂಭವಿಸಿದೆ. ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಘಟನೆಯಲ್ಲಿ 3 ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಇದನ್ನೂ ಓದಿ: ಪೆಂಡೆಂಟ್ ಹುಲಿ ಉಗುರಲ್ಲ, ಸಿಂಥೆಟಿಕ್ ಎಂದು ಹೆಚ್ಡಿಕೆ ಸ್ಪಷ್ಟನೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.