ಬೆಂಗಳೂರು: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಓರ್ವಕಲ್ ಎಂಬಲ್ಲಿ ಅಪಘಾತಕ್ಕೆ ಒಳಗಾದ ಮಂಡ್ಯ ಜಿಲ್ಲೆ ಬೆಳ್ಳೂರು ಗ್ರಾಮದ ಪ್ರವಾಸಿಗರನ್ನು ಸುರಕ್ಷಿತವಾಗಿ ವಾಪಸ್ ಕರೆತರಲು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚಿಸಿದ್ದಾರೆ.


COMMERCIAL BREAK
SCROLL TO CONTINUE READING

ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಬೆಳ್ಳೂರು ಗ್ರಾಮಸ್ಥರು ಪ್ರವಾಸ ಕೈಗೊಂಡಿದ್ದ ವೇಳೆ ಮಂತ್ರಾಲಯಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿ ಗೋವಿಂದ ಸ್ವಾಮಿ ಎಂಬವರು ಮೃತಪಟ್ಟರು. ಮೂವರಿಗೆ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.


ವಿಷಯ ತಿಳಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಕರ್ನೂಲ್ ಪೊಲೀಸ್ ವರಿಷ್ಠಾಧಿಕಾರಿ ಫಕೀರಪ್ಪ ಕಾಗಿನೆಲೆ ಅವರನ್ನು ಸಂಪರ್ಕಿಸಿ ಎಲ್ಲರನ್ನೂ ಸುರಕ್ಷಿತವಾಗಿ ವಾಪಸ್ ಕಳುಹಿಸುವ ವ್ಯವಸ್ಥೆ ಮಾಡುವಂತೆ ಕೋರಿದ್ದು, ಕರ್ನಾಟಕ ಮೂಲದ ಈ ಅಧಿಕಾರಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಊರಿಗೆ ಮರಳಲು ಕ್ರಮ ವಹಿಸಿದ್ದಾರೆ.