ಧಾರವಾಡ : ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನ ಹಾಗೂ ಸಂಶೋಧನೆಗಳು ವೇಗವಾಗಿ ಬಳಕೆಯಾಗುತಿದ್ದರೂ ನಮ್ಮ ದೇಶ ಹಾಗೂ ರಾಜ್ಯದ ಕೃಷಿ ಇಳುವರಿ ಇತರೇ ದೇಶಗಳಿಗೆ ಹೋಲಿಸಿದರೆ ನಿಗದಿತ ಪ್ರಮಾಣದಲ್ಲಿ ಏರಿಕೆಯಾಗದೆ ಇರುವ ಬಗ್ಗೆ ಕೃಷಿ ವಿಜ್ಞಾನಿಗಳು ಆತ್ಮಾವಲೋಕನ ಮಾಡಿಕೊಳ್ಳಬೇಕೆಂದು ರಾಜ್ಯ ಕಾರ್ಮಿಕ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಸಲಹೆ ನೀಡಿದರು. 


COMMERCIAL BREAK
SCROLL TO CONTINUE READING

ಕೃಷಿ ವಿಶ್ವವಿದ್ಯಾಲಯದಲ್ಲಿ ಇಂದು 24ನೇ ಸಾಲಿನ ಕೃಷಿ ಮೇಳವನ್ನು ಉದ್ಘಾಟಿಸಿ ಹಾಗೂ ಸಾಧಕ ಕೃಷಿಕರಿಗೆ ಪ್ರಶಸ್ತಿ ಪ್ರಧಾನ ಮಾಡಿ ಮಾತನಾಡಿದರು.ಕೃಷಿ ವಿಶ್ವವಿದ್ಯಾಲಯದ ಸಂಶೋಧನೆಗಳು ರೈತರಿಗೆ ಅನುಕೂಲ ವಾಗುವಂತೆ, ಕೃಷಿ ವಿಜ್ಞಾನಿಗಳು ರೈತರ ಕ್ಷೇತ್ರಕ್ಕೆ ತೆರಳಿ ರೈತರ ಸಮಸ್ಯೆ ಆಲಿಸಿ ಪರಿಹಾರ ನೀಡಬೇಕು. ಜಿಲ್ಲೆಯಲ್ಲಿ ಕೃಷಿ ಸಮಸ್ಯೆಗಳ ಹಾಗೂ ಪರಿಹಾರಗಳ ಬಗ್ಗೆ ಜಿಲ್ಲಾಡಳಿತದ ಜೊತೆ ಆಗಾಗ್ಗೆ ಚರ್ಚಿಸಬೇಕು. ಕಂದಾಯ ಕೃಷಿ ಹಾಗೂ ತೋಟಗಾರಿಕೆ ಇಲಾಖೆಗಳು ಜೊತೆಗೂಡಿ ಸಹಕಾರದಿಂದ ಕೆಲಸ ಮಾಡಬೇಕೆಂದು ಸಚಿವರು ತಿಳಿಸಿದರು.


ಇದನ್ನೂ ಓದಿ- ಮೋದಿ ತಾಯಿಯವರ ಅವಹೇಳನ ಬಿಜೆಪಿಯವರು ಸಹಿಸಬಹುದು, ನಾವು ಸಹಿಸುವುದಿಲ್ಲ : ಡಿಕೆ ಸುರೇಶ್


ದೇಶದಲ್ಲಿ 150 ಮಿಲಿಯನ್ ಹೆಕ್ಟೇರ್ ಕೃಷಿ ಮಾಡಲಾಗುತ್ತಿದೆ. ಈ ಪೈಕಿ 40 ಸಾವಿರ ಮಿಲಿಯನ್ ಹೆಕ್ಟೇರ್‍ನಲ್ಲಿ ಭತ್ತ, 30 ಸಾವಿರ ಮಿಲಿಯನ್ ಹೆಕ್ಟೇರ್‍ನಲ್ಲಿ ಗೋಧಿ, 20 ಸಾವಿರ ಮಿಲಿಯನ್ ಹೆಕ್ಟೇರ್‍ನಲ್ಲಿ ತೋಟಗಾರಿಗೆ 12 ಸಾವಿರ ಮಿಲಿಯನ್ ಹೆಕ್ಟೇರ್‍ನಲ್ಲಿ ಕಬ್ಬು ಬೆಳೆಯಲಾಗುತ್ತಿದೆ. ಇತರೆ ದೇಶಗಳಿಗೆ ಹೋಲಿಸಿದರೆ ನಮ್ಮ ಉತ್ಪಾದನೆ ಇಳುವರಿ ಕಡಿಮೆಯಿದೆ. ಚೀನಾದಲ್ಲಿ ಕೃಷಿ ಭೂಮಿ ಕಡಿಮೆಯಿದ್ದರೂ ನಮ್ಮಗಿಂತ 3 ಪಟ್ಟು ಇಳುವರಿ ಇದೆ. ಆಧುನಿಕ ತಂತ್ರಜ್ಞಾನ ಮಶಿನರಿಗಳನ್ನು ಬಳಸಿದರು ಸಹ ನಮ್ಮಲ್ಲಿ ಇಳುವರಿ ಕಡಿಮೆ ಯಾಕೆ ಎಂಬುದನ್ನು ಕೃಷಿ ವಿವಿ ಸಂಶೋಧನೆ ಕೈಗೊಳ್ಳಬೇಕು. ಅವೈಜ್ಞಾನಿಕ ಬೆಳೆವಿಮೆ ಪದ್ದತಿ, ರೈತರ ಆತ್ಮಹತ್ಯೆ ಸಮಸ್ಯೆಗಳ ಬಗ್ಗೆಯೂ ಕೃಷಿ ವಿವಿ ಅಧ್ಯಾಯನ ಮಾಡಿ ವರದಿ ನೀಡಬೇಕೆಂದು ಸಚಿವರು ತಿಳಿಸಿದರು.ಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ 


ಮೈಸೂರಿನ ಮಿನರಲ್ಸ್ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಜಿ.ಎಸ್. ಪಾಟೀಲ, ಕೃಷಿ ವಿವಿಯ ಕುಲಪತಿ ಡಾ. ಪಿ.ಎಲ್. ಪಾಟೀಲ. ಜಿಲ್ಲಾಧಿಕಾರಿ ದಿವ್ಯ ಪ್ರಭು ಸೇರಿದಂತೆ ಕೃಷಿ ವಿವಿಯ ಆಡಳಿತ ಮಂಡಳಿಯ ಸದಸ್ಯರು ಹಾಗೂ ವಿವಿಧ ಗಣ್ಯಮಾನ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ