ಬಿಜೆಪಿ ಶಾಸಕರು, ಮೇಲ್ಮನೆ ಸದಸ್ಯರಿಂದ ಅಹೋರಾತ್ರಿ ಧರಣಿ : ಬಿ.ವೈ.ವಿಜಯೇಂದ್ರ

ಮೂಡ ಹಗರಣದ ಕುರಿತು ಚರ್ಚಿಸಲು ನಿಲುವಳಿ ಸೂಚನೆ ಮಂಡಿಸಿದ್ದೆವು. ಕಾನೂನು ಸಚಿವರಾದ ಎಚ್.ಕೆ.ಪಾಟೀಲರು ಮಾತನಾಡಿ, ತನಿಖಾ ಆಯೋಗ ರಚಿಸಿದ್ದೇವೆ. ಅದರ ಮುಂದೆ ಹೇಳಿಕೆ ಕೊಡಿ ಎಂದು ತಿಳಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಿಜಯೇಂದ್ರ ಅವರು ಟೀಕಿಸಿದರು.

Written by - Krishna N K | Last Updated : Jul 24, 2024, 06:18 PM IST
    • ರಾಜ್ಯ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಅಹೋರಾತ್ರಿ ಧರಣಿ
    • ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಹೇಳಿಕೆ
    • ಬಿಜೆಪಿ ಶಾಸಕರು, ಮೇಲ್ಮನೆ ಸದಸ್ಯರಿಂದ ಎರಡೂ ಸದನದಲ್ಲಿ ಧರಣಿ
ಬಿಜೆಪಿ ಶಾಸಕರು, ಮೇಲ್ಮನೆ ಸದಸ್ಯರಿಂದ ಅಹೋರಾತ್ರಿ ಧರಣಿ : ಬಿ.ವೈ.ವಿಜಯೇಂದ್ರ title=
by vijayendra

ಬೆಂಗಳೂರು: ಬಿಜೆಪಿ ಶಾಸಕರು ಮತ್ತು ಮೇಲ್ಮನೆ ಸದಸ್ಯರು ರಾಜ್ಯ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಅಹೋರಾತ್ರಿ ಧರಣಿ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು.

ವಿಧಾನಸೌಧದ ಬಿಜೆಪಿ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ, ಮುಖ್ಯಮಂತ್ರಿಗಳ ಕುಟುಂಬಕ್ಕೆ ಮೈಸೂರಿನಲ್ಲಿ ಮೂಡದಿಂದ ಕೊಟ್ಟ 14 ನಿವೇಶನಗಳು ವಾಪಸ್ ಬರಬೇಕು. ಈ ಸರಕಾರವು ಅಧಿಕಾರಕ್ಕೆ ಬಂದ ಬಳಿಕ 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಹಂಚಿದೆ. ಆ ಹಂಚಿಕೆಯನ್ನು ರದ್ದು ಮಾಡಬೇಕಿದೆ ಎಂದು ಆಗ್ರಹಿಸಿದರು.

ಇದನ್ನೂ ಓದಿ: ಕಾಲುವೆಗಳ ಕೊನೇ ಭಾಗದ ರೈತರ ರಕ್ಷಣೆಗೆ ನೀರಾವರಿ ತಿದ್ದುಪಡಿ ವಿಧೇಯಕಕ್ಕೆ ಅನುಮೋದನೆ

ನಾವು ಚುನಾಯಿತ ಪ್ರತಿನಿಧಿಗಳು, ಬಡವರ ನಿವೇಶನಗಳನ್ನು ಮನಸೋ ಇಚ್ಛೆ ಹಂಚಿದ ಕುರಿತು ಜನರು ನಮ್ಮನ್ನು ಕೇಳುತ್ತಿದ್ದಾರೆ. ಮೂಡದಲ್ಲಿ ಮುಖ್ಯಮಂತ್ರಿಗಳ ಕುಟುಂಬವು ನಿವೇಶನ ಪಡೆದ ಕುರಿತು ಚರ್ಚಿಸಲು ಮುಂದಾದರೆ, ತನಿಖಾ ಆಯೋಗದ ಮುಂದೆ ಹೋಗಿ ಎಂದು ಕಾನೂನು ಸಚಿವರು ಹೇಳುತ್ತಾರೆ. ಯಾವ ತನಿಖಾ ಆಯೋಗದ ಬಗ್ಗೆ ಮಾತನಾಡುತ್ತೀರಿ ಎಂದು ಕೇಳಿದರು. ಹಿಂದೆ ಸಿದ್ದರಾಮಯ್ಯನವರು ಅಧಿಕಾರದಲ್ಲಿ ಇದ್ದಾಗ ಯಾವ್ಯಾವ ತನಿಖಾ ಆಯೋಗದ ಪರಿಸ್ಥಿತಿ ಏನಾಗಿದೆ ಎಂದು ರಾಜ್ಯದ ಜನತೆಗೆ ಗೊತ್ತಿದೆ ಎಂದು ನುಡಿದರು.

ಮುಖ್ಯಮಂತ್ರಿಗಳು ಯಾಕೆ ಪಲಾಯನವಾದ ಮಾಡುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ. ಧೈರ್ಯಸ್ಥರಾದ ಮುಖ್ಯಮಂತ್ರಿಗಳು ಚರ್ಚೆಗೆ ಅವಕಾಶ ನೀಡುವರೆಂಬ ವಿಶ್ವಾಸದಲ್ಲಿದ್ದೆವು. ಆದರೆ, ಸಿದ್ದರಾಮಯ್ಯನವರು ದಿವ್ಯಮೌನ ತಾಳಿದ್ದಾರೆ ಎಂದು ಆಕ್ಷೇಪಿಸಿದರು. ಕೆಲವು ಸಚಿವರು ಸಿಎಂ ಅವರನ್ನು ನಿನ್ನೆ ಭೇಟಿ ಮಾಡಲು ಹೋಗಿದ್ದಾಗ ಮುಖ್ಯಮಂತ್ರಿಯವರು ಅವರನ್ನು ತರಾಟೆಗೆ ತೆಗೆದುಕೊಂಡ ಮಾಹಿತಿ ಇದೆ ಎಂದು ತಿಳಿಸಿದರು. ಅದೇ ಕಾರಣಕ್ಕೆ ಇವತ್ತು ಕೆಲವು ಶಾಸಕರು ಹಾರಾಡುವ ಪ್ರಯತ್ನ ಮಾಡಿದ್ದಾರೆ ಎಂದು ಹೇಳಿದರು.

ಇದು ಪ್ರಜಾಪ್ರಭುತ್ವದ ಕಗ್ಗೊಲೆ : ಮೂಡ ಹಗರಣದ ಕುರಿತು ಚರ್ಚಿಸಲು ನಿಲುವಳಿ ಸೂಚನೆ ಮಂಡಿಸಿದ್ದೆವು. ಕಾನೂನು ಸಚಿವರಾದ ಎಚ್.ಕೆ.ಪಾಟೀಲರು ಮಾತನಾಡಿ, ತನಿಖಾ ಆಯೋಗ ರಚಿಸಿದ್ದೇವೆ. ಅದರ ಮುಂದೆ ಹೇಳಿಕೆ ಕೊಡಿ ಎಂದು ತಿಳಿಸಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ ಎಂದು ವಿಜಯೇಂದ್ರ ಅವರು ಟೀಕಿಸಿದರು.

ದಲಿತರು, ಬಡವರಿಗೆ ನ್ಯಾಯ ಸಿಗುವ ವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು. ವಾಲ್ಮೀಕಿ ನಿಗಮದ ಹಗರಣದಲ್ಲಿ ಇ.ಡಿ. ವಿರುದ್ಧ ಎಫ್‍ಐಆರ್ ದಾಖಲಿಸಿದ ರಾಜ್ಯ ಸರಕಾರದ ಕ್ರಮಕ್ಕೆ ರಾಜ್ಯ ಹೈಕೋರ್ಟ್ ಛೀಮಾರಿ ಹಾಕಿದೆ. ರಾಜ್ಯ ಸರಕಾರಕ್ಕೆ ಮುಖಭಂಗ ಆಗಿದೆ. ಹೈಕೋರ್ಟ್, ಸರಕಾರದ ವಿರುದ್ಧ ಚಾಟಿ ಏಟು ಬೀಸಿದೆ ಎಂದು ತಿಳಿಸಿದರು.

ವಿಪಕ್ಷ ನಾಯಕ ಆರ್.ಅಶೋಕ್ ಅವರು ಮಾತನಾಡಿ, ಮೂಡ ಹಗರಣದಲ್ಲಿ ಕಾಂಗ್ರೆಸ್ ಪಕ್ಷವು 4 ಸಾವಿರ ಕೋಟಿ ಲೂಟಿ ಮಾಡಿದೆ ಎಂದು ಆರೋಪಿಸಿದರು. ಈ ಕುರಿತ ನಿಲುವಳಿ ಸೂಚನೆ ತಂದಿದ್ದು, ಸರಕಾರ ಹೆದರಿ ಓಡಿ ಹೋಗಿದೆ ಎಂದು ಟೀಕಿಸಿದರು. ಇದೇವೇಳೆ ಹಲವು ಮಸೂದೆಗಳಿಗೆ ಒಪ್ಪಿಗೆ ನೀಡಿದೆ ಎಂದು ದೂರಿದರು.

ಇದನ್ನೂ ಓದಿ:ಟೀಯೆಸ್ಸಾರ್ ಸ್ಮಾರಕ ಹಾಗೂ ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳಿಗೆ ಆಯ್ಕೆ ಸಮಿತಿ ರಚನೆ

ಸರಕಾರವು ಹೇಡಿಗಳಂತೆ ವರ್ತಿಸಿದೆ. ಸಿಎಂ ಅವರಿಗೆ ಧೈರ್ಯ, ಮಾನ- ಮರ್ಯಾದೆ ಇದ್ದರೆ 14 ನಿವೇಶನಗಳನ್ನು ನ್ಯಾಯಯುತವಾಗಿ ಪಡೆದುದಾಗಿ ಅವರು ತಿಳಿಸಬೇಕಿತ್ತು ಎಂದು ಸವಾಲು ಹಾಕಿದರು. ವಾಲ್ಮೀಕಿ ನಿಗಮದಲ್ಲಿ ದಲಿತರ 187 ಕೋಟಿ ಹಣವನ್ನು ಚೆಕ್‍ಗಳ ಮೂಲಕ ಲೂಟಿ ಮಾಡಿದ್ದಾರೆ. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ 25 ಸಾವಿರ ಕೋಟಿ ಹಣವನ್ನು ಲೂಟಿ ಮಾಡಿದ್ದಾರೆ. ಈಗ ಮೂಡದಲ್ಲಿ ದಲಿತರ ಜಮೀನಿನ ವಿಚಾರದಲ್ಲೂ ಅನ್ಯಾಯವಾಗಿದೆ. ಅವರು ಕೇಂದ್ರದ ಎಸ್‍ಸಿ, ಎಸ್‍ಟಿ ಇಲಾಖೆಗೆ ದೂರು ನೀಡಿದ್ದಾರೆ ಎಂದು ತಿಳಿಸಿದರು.

ಕಾಂಗ್ರೆಸ್ಸಿನ ಬ್ರಹ್ಮಾಂಡ ಭ್ರಷ್ಟಾಚಾರ : ಮೋಸದಿಂದ ಜಮೀನಿನ ಲೂಟಿ ಕುರಿತು ದೂರನ್ನು ಜಿಲ್ಲಾಧಿಕಾರಿಗಳಿಗೂ ನೀಡಿದ್ದಾರೆ. ಅದರ ದೂರಿನ ಪ್ರತಿ ನನ್ನ ಬಳಿ ಇದೆ ಎಂದರು. ಏಕಾಏಕಿ ಜಮೀನಿನ ಭೂಪರಿವರ್ತನೆ, ಡಿನೋಟಿಫಿಕೇಶನ್ ಮಾಡಿದ್ದಾರೆ. ಕಾಂಗ್ರೆಸ್ಸಿನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ರಾಜ್ಯದ ಜನತೆ ನೋಡುತ್ತಿದ್ದಾರೆ ಎಂದು ಆರ್. ಅಶೋಕ್ ಅವರು ಟೀಕಿಸಿದರು.

ಇದನ್ನೂ ಓದಿ: ಬಂಗಾಳಕೊಲ್ಲಿ ಉಪಸಾಗರದಲ್ಲಿ ಸುಳಿಗಾಳಿ :ಈ ಜಿಲ್ಲೆಗಳಿಗೆ ಮತ್ತೆ ನಾಲ್ಕು ದಿನ ಮಳೆ ಸಂಕಷ್ಟ

ಕಾಂಗ್ರೆಸ್ಸಿನ ಅತಿರಥ- ಮಹಾರಥರು ಸದನದಲ್ಲಿ ಬಾಯಿ ಬಿಟ್ಟಿಲ್ಲ. ಸಿದ್ದರಾಮಯ್ಯನವರ ಬೆಂಬಲಕ್ಕೆ ಯಾರೂ ನಿಂತಿಲ್ಲ ಎಂದು ತಿಳಿಸಿದರು. ವಿಪಕ್ಷಗಳ ಮಾತನಾಡುವ ಹಕ್ಕು ಕಸಿದ ಮತ್ತು ದಮನಕಾರಿ ನೀತಿಯನ್ನು ಖಂಡಿಸಿದರು. ಇದರ ವಿರುದ್ಧ ಹಗಲು- ರಾತ್ರಿ ಧರಣಿಯನ್ನು ಘೋಷಿಸುವುದಾಗಿ ವಿವರ ನೀಡಿದರು. ನೀತಿಗೆಟ್ಟ ಮತ್ತು ನೀಚ ಸರಕಾರದ ವಿರುದ್ಧ ಹೋರಾಟ ಇದಾಗಲಿದೆ ಎಂದು ಪ್ರಕಟಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News