ಹೊಗೆನಕಲ್ ನಲ್ಲಿ ಅಂಬಿಗರ ಮುಷ್ಕರ: ಪ್ರವಾಸಿಗರಿಗಿಲ್ಲ ಪ್ರವೇಶ

ಕರ್ನಾಟಕದ ನಯಾಗರ ಫಾಲ್ಸ್ ಎಂದೇ ಪ್ರಸಿದ್ಧಿ ಪಡೆದಿರುವ ಹೊಗೆನಕಲ್ ಫಾಲ್ಸ್ ಗೆ ವಾರಂತ್ಯದ ರಜಾ ದಿನಗಳು ಹಾಗೂ ಇನ್ನಿತರ ವಿಶೇಷ ದಿನಗಳಲ್ಲಿ ಫಾಲ್ಸ್ ಗೆ ನೂರಾರು ಸಂಖ್ಯೆಯಲ್ಲಿ ಭೇಟಿ ನೀಡಿ  ಫಾಲ್ಸ್ ವೀಕ್ಷಣೆ ಮಾಡುತ್ತಿದ್ದಾರೆ.

Written by - Yashaswini V | Last Updated : Dec 4, 2023, 01:59 PM IST
  • ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರಿಗೆ ಅರಣ್ಯ ಇಲಾಖೆಯವರು ಒಬ್ಬರಿಗೆ 500 ನಿಗದಿ ಮಾಡಿದ್ದರು.
  • ಇದರಲ್ಲಿ ಸರ್ಕಾರಕ್ಕೆ ನೂರು ರೂಪಾಯಿ ಹಾಗೂ ತೆಪ್ಪ ನಡೆಸುವವರಿಗೆ 400 ರೂಪಾಯಿ ನೀಡಲಾಗುತ್ತಿತ್ತು.
ಹೊಗೆನಕಲ್ ನಲ್ಲಿ ಅಂಬಿಗರ ಮುಷ್ಕರ: ಪ್ರವಾಸಿಗರಿಗಿಲ್ಲ ಪ್ರವೇಶ title=

ಚಾಮರಾಜನಗರ: ಪ್ರಸಿದ್ಧ ಪ್ರವಾಸಿ ತಾಣವಾದ ಹನೂರು ತಾಲೂಕಿನ ಹೊಗೆನಕಲ್ ಫಾಲ್ಸ್ ನಲ್ಲಿ ತೆಪ್ಪ ನಡೆಸಲು ಒಬ್ಬರಿಗೆ ರೂ.1200 ನಿಗದಿ ಮಾಡುವಂತೆ ಒತ್ತಾಯಿಸಿ ಅಂಬಿಗರು ಪ್ರತಿಭಟನೆ ನಡೆಸುತ್ತಿದ್ದಾರೆ.

ಕರ್ನಾಟಕದ ನಯಾಗರ ಫಾಲ್ಸ್ ಎಂದೇ ಪ್ರಸಿದ್ಧಿ ಪಡೆದಿರುವ ಹೊಗೆನಕಲ್ ಫಾಲ್ಸ್ ಗೆ ವಾರಂತ್ಯದ ರಜಾ ದಿನಗಳು ಹಾಗೂ ಇನ್ನಿತರ ವಿಶೇಷ ದಿನಗಳಲ್ಲಿ ಫಾಲ್ಸ್ ಗೆ ನೂರಾರು ಸಂಖ್ಯೆಯಲ್ಲಿ ಭೇಟಿ ನೀಡಿ  ಫಾಲ್ಸ್ ವೀಕ್ಷಣೆ ಮಾಡುತ್ತಿದ್ದಾರೆ.

ಆದರೆ ಹೊಗೆನಕಲ್ ಫಾಲ್ಸ್ ಗೆ ಬರುವ ಪ್ರವಾಸಿಗರಿಗೆ ಅರಣ್ಯ ಇಲಾಖೆಯವರು ಒಬ್ಬರಿಗೆ 500 ನಿಗದಿ ಮಾಡಿದ್ದರು. ಇದರಲ್ಲಿ ಸರ್ಕಾರಕ್ಕೆ ನೂರು ರೂಪಾಯಿ ಹಾಗೂ ತೆಪ್ಪ ನಡೆಸುವವರಿಗೆ 400 ರೂಪಾಯಿ ನೀಡಲಾಗುತ್ತಿತ್ತು. ನೂರು ರೂಪಾಯಿಯನ್ನು ಪಡೆಯುವ ಅರಣ್ಯ ಇಲಾಖೆಯವರು ಬರುವಂತಹ ಪ್ರವಾಸಿಗರಿಗೆ ಯಾವುದೇ ವ್ಯವಸ್ಥೆಯನ್ನು ಮಾಡದೆ ಇರುವುದರಿಂದ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಪ್ರವಾಸಿಗರಿಗೆ ಉತ್ತಮ ಶೌಚಾಲಯ, ಪಾರ್ಕಿಂಗ್ ವ್ಯವಸ್ಥೆ ಹಾಗೂ ವಿಶ್ರಾಂತಿ ಪಡೆಯಲು ಯಾವುದೇ ವ್ಯವಸ್ಥೆ ಇಲ್ಲದೆ ಇರುವುದರಿಂದ ತೊಂದರೆಯಾಗುತ್ತಿದೆ. ಅರಣ್ಯ  ಇಲಾಖೆಯವರು ಪಡೆಯುವ ನೂರು ರೂಪಾಯಿಯಲ್ಲಿ ಅಭಿವೃದ್ಧಿ ಮಾಡುತ್ತಿಲ್ಲ, ನಮಗೂ 400 ರೂ. ಸಾಲುತ್ತಿಲ್ಲ ಎಂದು ತೆಪ್ಪ ನಡೆಸುವವರು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ- ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭ

ಇತ್ತೀಚಿನ ದಿನಗಳಲ್ಲಿ ದಿನನಿತ್ಯದ ಆಹಾರ ಪದಾರ್ಥಗಳ ಬೆಲೆ, ಪೆಟ್ರೋಲ್ ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಯಾಗಿರುವುದರಿಂದ ಜೀವನ ನಡೆಸಲು ಕಷ್ಟವಾಗುತ್ತಿದೆ ನೆರೆಯ ತಮಿಳುನಾಡು ರಾಜ್ಯದವರು ತೆಪ್ಪ ನಡೆಸುವವರಿಗೆ 1,700 ನಿಗದಿ ಮಾಡಿದ್ದಾರೆ. ಅದರಂತೆ ಕರ್ನಾಟಕದಲ್ಲಿಯೂ 1200 ರೂಪಾಯಿ  ನಿಗದಿ ಮಾಡಬೇಕೆಂದು ಹಲವು ದಿನಗಳಿಂದ ಬೇಡಿಕೆ ಇಟ್ಟಿದ್ದರು. ಇವರ ಬೇಡಿಕೆ ಈಡೇರಿಸದೆ ಇರುವುದರಿಂದ ಅಂಬಿಗರು ಈ  ಪ್ರತಿಭಟನೆ ಕೈಗೊಂಡಿದ್ದಾರೆ.

ಇನ್ನು, ಅಂಬಿಗರು ಮುಷ್ಕರ ಮಾಡುತ್ತಿರುವುದರಿಂದ ಹೊಗೆನಕಲ್ ಜಲಪಾತಕ್ಕೆ ತೆರಳಲು ಪ್ರವಾಸಿಗರಿಗೆ ಮಲೆ ಮಹದೇಶ್ವರ ಬೆಟ್ಟ ಪೊಲೀಸರು ನಿರ್ಬಂಧ ಹೇರಿದ್ದಾರೆ.

ಇದನ್ನೂ ಓದಿ- ಬೆಳಗಾವಿ ಅಧಿವೇಶ: ವರ್ಗಾವಣೆ, ಗ್ಯಾರಂಟಿ ವೈಫಲ್ಯ ಸೇರಿ ವಿರೋಧ ಪಕ್ಷಗಳ ಬತ್ತಳಿಕೆಯಲ್ಲಿವೆ ಹಲವು ಅಸ್ತ್ರಗಳು!

ಹೊಗೇನಕಲ್ ಫಾಲ್ಸ್ ನಲ್ಲಿ ತೆಪ್ಪ ನಡೆಸುವವರಿಗೆ 800 ರೂಪಾಯಿ ನಿಗದಿ ಮಾಡುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಸರ್ಕಾರ ಅನುಮೋದನೆ ನೀಡಿದ ನಂತರ ದರ ಹೆಚ್ಚಳ ಮಾಡಲಾಗುವುದು ಎಂದು ಅರಣ್ಯಾಧಿಕಾರಿ ಅಂಕರಾಜು ಮಾಹಿತಿ ನೀಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News