ಬೆಂಗಳೂರು: NDRF ನಿಯಮಗಳನ್ನು ಕೂಡಲೇ ತಿದ್ದುಪಡಿ ಮಾಡಿ ಪ್ರಕೃತಿ ವಿಕೋಪದಿಂದ ಆಗಿರುವ ಹಾನಿಗೆ ಸಮರ್ಪಕ ಪರಿಹಾರ ನೀಡಬೇಕೆಂದು ಕೇಂದ್ರ ಸರ್ಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ‘ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಡಿ ಪರಿಹಾರವನ್ನು ಕೇಂದ್ರ ಸರ್ಕಾರ ರಾಜ್ಯಗಳಿಗೆ ಬಿಡುಗಡೆ ಮಾಡುತ್ತದೆ. ಪ್ರತಿ 5 ವರ್ಷಗಳಿಗೆ ಒಮ್ಮೆ NDRF ನಿಯಮಗಳನ್ನು ತಿದ್ದುಪಡಿ ಮಾಡಬೇಕು’ ಎಂದು ಹೇಳಿದ್ದಾರೆ.


COMMERCIAL BREAK
SCROLL TO CONTINUE READING

NDRF ನಿಯಮದಡಿ ರೈತರ ಬೆಳೆಗಳಿಗೆ ಇನ್‍ಫುಟ್ ಸಬ್ಸಿಡಿಯ ಮೊತ್ತ, ಮೀನುಗಾರರ ದೋಣಿಗಳಿಗಾದ ಹಾನಿ, ಜನ-ಜಾನುವಾರುಗಳಿಗೆ ಉಂಟಾದ ತೊಂದರೆ, ಮನೆ ಹಾನಿ, ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಆದ ನಷ್ಟಗಳಿಗೆ ನೀಡುವ ಪರಿಹಾರದ ಮೊತ್ತವನ್ನು ಪರಿಷ್ಕರಿಸಲಾಗುತ್ತದೆ. 2015-20ಕ್ಕೆ ಅನ್ವಯವಾಗುವಂತೆ ನಿಯಮಗಳನ್ನು 2015ರಲ್ಲಿ ಪರಿಷ್ಕರಿಸಲಾಗಿದ್ದು, ಅವಧಿ ಮುಗಿದ ನಂತರ 2020ರಲ್ಲಿ ಮತ್ತೆ ಪರಿಷ್ಕರಿಸಬೇಕಾಗಿತ್ತು. ಕಳೆದ 2 ವರ್ಷಗಳಿಂದ ಎಲ್ಲ ಉತ್ಪನ್ನಗಳ ಬೆಲೆ ದುಪ್ಪಟ್ಟಾಗಿವೆ. ಹಣದುಬ್ಬರ ದಾಖಲೆ ಮಟ್ಟಕ್ಕೆ ತಲುಪಿದೆ. ಇಷ್ಟಾದರೂ ಬಿಜೆಪಿ ಸರ್ಕಾರ NDRF ನಿಯಮ ಪರಿಷ್ಕರಿಸಿಲ್ಲ’


Answer Madi Modi: ಪ್ರಧಾನಿ ಮೋದಿಗೆ ಸಿದ್ದರಾಮಯ್ಯರಿಂದ ಪ್ರಶ್ನೆಗಳ ಸುರಿಮಳೆ


‘ಕೇಂದ್ರ ಸರ್ಕಾರ ಈ ಮೊತ್ತವನ್ನು ಪರಿಷ್ಕರಣೆ ಮಾಡದ ಕಾರಣದಿಂದ ಕಳೆದ 2 ವರ್ಷಗಳಿಂದ ರೈತರಿಗೆ ವಿಪರೀತ ನಷ್ಟವಾಗಿದೆ. ರಾಜ್ಯದಲ್ಲಿ ಕಳೆದ 3 ವರ್ಷಗಳಿಂದ ಸಂಭವಿಸಿರುವ ನಷ್ಟದ ಪ್ರಮಾಣ ಅಂದಾಜಿನ ಪ್ರಕಾರ 2 ಲಕ್ಷ ಕೋಟಿ ರೂ. ಆಗಬಹುದು. ಆದರೆ ಬಿಜೆಪಿ ಸರ್ಕಾರ ಬಿಡುಗಡೆ ಮಾಡಿದ ಮೊತ್ತ ಕೇವಲ 3,965 ಕೋಟಿ ರೂ. ಮಾತ್ರ. ರಾಜ್ಯದಲ್ಲಿ ಮೇ ತಿಂಗಳಿಂದ ನವೆಂಬರ್‍ವರೆಗೆ ಸಂಭವಿಸಿದ ಪ್ರವಾಹದ ಹಾನಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಮಾರ್ಚ್ 2022ರಲ್ಲಿ ಕೇವಲ 492 ಕೋಟಿ ರೂ. ಬಿಡುಗಡೆ ಮಾಡಿದೆ. ಇದು ಪ್ರಧಾನಿ ಮೋದಿ ಸರ್ಕಾರದ ವೇಗ ಮತ್ತು ರೈತಪರ ಕಾಳಜಿ ಎಂದು ನಾವು ಅರ್ಥ ಮಾಡಿಕೊಳ್ಳಬೇಕಾಗಿದೆ’ ಎಂದು ಟೀಕಿಸಿದ್ದಾರೆ.


ಅಸಾನಿ ಚಂಡಮಾರುತದಿಂದ ತೊಂದರೆಗೊಳಗಾದವರಿಗೆ ತುರ್ತಾಗಿ ಪರಿಹಾರ ನೀಡಬೇಕು. ಕಳೆದ 3 ವರ್ಷಗಳಿಂದ ಹಾನಿಯಾಗಿರುವ ಸಾವಿರಾರು ಮನೆಗಳಿಗೆ ಈಗಲೂ ಸಮರ್ಪಕ ಪರಿಹಾರ ನೀಡಿಲ್ಲ. ಶಾಶ್ವತ ನೆಲೆ ಕಲ್ಪಿಸಿಲ್ಲ. ಈ ವ್ಯವಸ್ಥೆಯನ್ನು ತುರ್ತಾಗಿ ಮಾಡಬೇಕಾಗಿದೆಯೆಂದು’ ಬಿಜೆಪಿ ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರಿನಲ್ಲೊಂದು ಹೃದಯಸ್ಪರ್ಶಿ ಘಟನೆ: ತಾಯಿ-ಮಗಳನ್ನು ಒಂದು ಮಾಡಿದ ಪೊಲೀಸರು


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.