ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪ್ರಜೆಗಳ ಕಿತ್ತಾಟ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಕಮ್ಮನಹಳ್ಳಿಯ ಕುಳ್ಳಪ್ಪ ಸರ್ಕಲ್​ನಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಚಾಕುವಿನಿಂದ ಇರಿದು ಆಫ್ರಿಕನ್ ಪ್ರಜೆ (An African citizen) ವಿಕ್ಟರ್‌ ಎಂಬಾತನನ್ನು ಭೀಕರವಾಗಿ ನಡುರಸ್ತೆಯಲ್ಲೇ ಹತ್ಯೆ ಮಾಡಲಾಗಿದೆ. ಇನ್ನು ವಿಕ್ಟರ್​ನ ಹೀಗೆ ಭೀಕರವಾಗಿ ಹತ್ಯೆ ಮಾಡಿದ್ದು ಬೇರೆ ಯಾರೂ ಅಲ್ಲ, ಸ್ವತಃ ವಿಕ್ಟರ್​ನ ಸ್ನೇಹಿತನೇ ಈ ಕೃತ್ಯವನ್ನ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.


ಇದನ್ನೂ ಓದಿ- ಚಿಕ್ಕಮಗಳೂರಿನ ಶಾಲೆಯೊಂದರಲ್ಲಿ ಕನಿಷ್ಠ 10 ವಿದ್ಯಾರ್ಥಿ ಮತ್ತು ಶಿಕ್ಷಕರಿಗೆ ಕೊರೊನಾ ಧೃಢ


ಕೊಲೆ ಮಾಡಿ ಎಸ್ಕೇಪ್:
ಇಬ್ಬರೂ ಸ್ನೇಹಿತರು (Friends) ಒಟ್ಟಿಗೆ ನಡೆದುಕೊಂಡು ಬರುತ್ತಿದ್ದಾಗ ವಾಗ್ವಾದ ಶುರುವಾಗಿತ್ತು, ಆದರೆ ಇದೇ ವೇಳೆ ಮಾತಿಗೆ ಮಾತು ಬೆಳೆದಿದ್ದು ವಿಕ್ಟರ್​ನನ್ನ ಸ್ವತಃ ಆತನ ಸ್ನೇಹಿತನೇ ಚಾಕುವಿನಿಂದ ಇರಿದು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ ಎನ್ನಲಾಗಿದೆ. ಘಟನೆ ಬಳಿಕ ಕಮ್ಮನಹಳ್ಳಿ ನಿವಾಸಿಗಳು ಬೆಚ್ಚಿಬಿದ್ದಿದ್ದಾರೆ.


ಇದನ್ನೂ ಓದಿ- ಕರ್ನಾಟಕ ಕಾನೂನು ವಿವಿಯ ಸರ್ವಾಧಿಕಾರಿ ಧೋರಣೆ ಖಂಡಿಸಿ ವಿದ್ಯಾರ್ಥಿಗಳಿಂದ ಸುವರ್ಣ ಸೌಧ ಚಲೋ


ಬೆಂಗಳೂರಲ್ಲೇ ವಾಸ:
ಇನ್ನು ಕೊಲೆಯಾಗಿರುವ ವಿಕ್ಟರ್ ಬೆಂಗಳೂರು ಮೂಲದ ಯುವತಿಯನ್ನು ಪ್ರೀತಿಸಿ ಮದುವೆಯಾಗಿದ್ದ. 3 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ವಿಕ್ಟರ್, ಬೆಂಗಳೂರಿನಲ್ಲೇ ವಾಸ ಮಾಡುತ್ತಿದ್ದ. ಆದರೆ ಸ್ವತಃ ವಿಕ್ಟರ್​ನ ಸ್ನೇಹಿತನೇ ಕೊಲೆಗೈದು ಓಡಿ ಹೋಗಿದ್ದು, ಆರೋಪಿಗಾಗಿ ಬಲೆ ಬೀಸಲಾಗಿದೆ. ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.