ರಾಮನಗರ: ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಜೆಡಿಎಸ್ ಅಭ್ಯರ್ಥಿಯಾಗಿ ಅನಿತಾ ಕುಮಾರಸ್ವಾಮಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. 


COMMERCIAL BREAK
SCROLL TO CONTINUE READING

ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಬಿಡದಿಯ ಕ್ಯಾತಗಾನಳ್ಳಿಯಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಸಭೆ ಬಳಿಕ ರಾಮನಗರ ಉಪಚುನಾವಣೆಗೆ ಸ್ಪರ್ಧಿ ಘೋಷಣೆ ಮಾಡಲಿದ್ದಾರೆ ಎನ್ನಲಾಗಿದೆ. 


2018ರ ಮೇ 12ರಂದು ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಮತ್ತು ಚನ್ನಪಟ್ಟಣ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಿದ್ದ ಹೆಚ್.ಡಿ.ಕುಮಾರಸ್ವಾಮಿ ಅವರು ಎರಡೂ ಕ್ಷೇತ್ರಗಳಲ್ಲಿ ಜಯಗಳಿಸಿದ್ದರು. ಬಳಿಕ ರಾಮನಗರದ ಶಾಸಕ ಸ್ಥಾನದಿಂದ ಕುಮಾರಸ್ವಾಮಿ ಹೊರನಡೆದಿದ್ದರು.