ಬೆಂಗಳೂರು: ರಾಜ್ಯದಲ್ಲಿ ಚುನಾವಣಾ ದಿನಾಂಕ ನಿಗದಿಯಾಗಿರುವ ಬೆನ್ನಲ್ಲೇ ಪಕ್ಷದಿಂದ ಪಕ್ಷಕ್ಕೆ ಹಾರುವವರ ಸಂಖ್ಯೆ ಅಧಿಕಗೊಂಡಿದೆ. ಇದೆ ಸಂದರ್ಭದಲ್ಲಿ ಈಗ ಕುಂದಾಪುರದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.


COMMERCIAL BREAK
SCROLL TO CONTINUE READING

ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಈಗ ಕ್ಷೇತ್ರದ ಮತದಾರಿಗೆ ಕೃತಜ್ಞತೆ ಸಲ್ಲಿಸುವ ಮೂಲಕ ಚುನಾವಣೆಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ.


ಇದನ್ನೂ ಓದಿ : ಇಷ್ಠಾರ್ಥ ಸಿದ್ದಿಗಾಗಿ ಕುಟುಂಬ ಸಮೇತ ದೇವರ ಮೊರೆಹೋದ ಡಿಕೆ ಶಿವಕುಮಾರ್..!


ಐದು ಬಾರಿ ಶಾಸಕರಾಗಿರುವ ಹಾಲಾಡಿ ಅವರು ವೈಯಕ್ತಿಕ ಕಾರಣದಿಂದಾಗಿ ರಾಜಕೀಯದಿಂದ ಹಿಂದೆ ಸರಿಯುತ್ತಿರುವುದಾಗಿ ಘೋಷಿಸಿದ್ದಾರೆ. ಆದರೆ ಚುನಾವಣಾ ಹೊಸ್ತಿಲಲ್ಲಿ ಈಗ ಅವರು ಏಕಾಏಕಿ ರಾಜಕೀಯ ನಿವೃತ್ತಿ ಘೋಷಿಸಿರುವುದು ಬಿಜೆಪಿಗೆ ಶಾಕ್ ನೀಡಿದಂತಾಗಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.