ಬೆಂಗಳೂರು : ಕನ್ನಡ ಭಾಷೆ ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯಿಂದ ೨೦೧೯-೨೦ ನೇ ಸಾಲಿನಲ್ಲಿ ವಿಶ್ವ ವಿದ್ಯಾನಿಲಯಗಳೀಂದ ಯಾವುದೇ ವಿಷಯದ ಬಗ್ಗೆ  ಕನ್ನಡದಲ್ಲಿ ಎಂ.ಫಿಲ್ ಪದವಿ ಪಡೆದ ಪ್ರೌಢ ಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ, ಅದೇ ಸಾಲಿನಲ್ಲಿ ವಿಶ್ವ ವಿದ್ಯಾನಿಲಯಗಳಿಂದ ಯಾವುದೇ ವಿಷಯದ ಬಗ್ಗೆ ಕನ್ನಡದಲ್ಲಿ ಪಿ.ಎಚ್. ಡಿ ಪದವಿ ಪಡೆದ ಮಹಾಪ್ರಬಂಧಗಳ ಹಸ್ತಪ್ರತಿ ಮುದ್ರಣಕ್ಕೆ  ಹಾಗೂ ೨೦೧೯ ರ ಜನೆವರಿಯಿಂದ ಡಿಸೆಂಬರ್ ೨೦೧೯ ರೊಳಗೆ ಪ್ರಥಮ ಆವೃತ್ತಿಯಾಗಿ ಪ್ರಕಟವಾಗಿರುವ ಸೃಜನೇತರ ಕನ್ನಡ ಗ್ರಂಥಗಳಿಗೆ ಸಹಾಯಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.  ಅರ್ಜಿಯನ್ನು ೨೦೨೧ರ ಜನೆವರಿ ೧೬ ರೊಳಗೆ ಸಲ್ಲಿಸಬಹುದಾಗಿದೆ. ಅರ್ಜಿ ನಮೂನೆಯನ್ನು ಹಾಗೂ ಮಾಹಿತಿಯನ್ನು ವೆಬ್‌ಸೈಟ www.kannadasiri.in ನಲ್ಲಿ ಪಡೆಯಬಹುದು.