ಹಾಸನ : ಎಂಟು ಬಾರಿ ಮೈಸೂರು ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಕಾಡಾನೆ ದಾಳಿಗೆ ಪ್ರಾಣ ಬಿಟ್ಟಿದೆ. ಪುಂಡಾನೆ ಸೆರೆ ಹಿಡಿದು ಸ್ಥಳಾಂತರ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ವೇಳೆ ದುರ್ಘಟನೆ ಸಂಭವಿಸಿದೆ.


COMMERCIAL BREAK
SCROLL TO CONTINUE READING

ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಇಂದು ನಾಲ್ಕು ಸಾಕಾನೆಗಳೊಂದಿಗೆ   ಅರಣ್ಯ ಇಲಾಖೆ ಸಿಬ್ಬಂದಿ ಹಾಗು ವೈದ್ಯರು  ಕಾರ್ಯಾಚರಣೆ ಆರಂಭಿಸಿದ್ದರು. ಪುಂಡಾನೆಯನ್ನು ಸೆರೆಹಿಡಿಯಲು  ಅರಿವಳಿಕೆ ಚುಚ್ಚುಮದ್ದು ನೀಡುವ ವೇಳೆ ಅರ್ಜುನನ ಮೇಲೆ ಒಂಟಿಸಲಗ ದಿಢೀರ್ ದಾಳಿ ಮಾಡಿದೆ. 


ಇದನ್ನೂ ಓದಿ: ಮಾದಪ್ಪನ ಹರಕೆ ತೀರಿಸಲು ಕುರಿಗಳ ಜೊತೆ ಬಂದ ರೈತ!! ಕುರಿಗಳಿಂದ ಪ್ರದಕ್ಷಿಣೆ 


ಒಂಟಿಸಲಗ ದಾಳಿ ಮಾಡುತ್ತಿದ್ದಂತೆ  ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಈ ವೇಳೆ ಒಂಟಿಸಲಗದ ಜೊತೆ ಅರ್ಜುನ  ಕಾಳಗಕ್ಕೆ ಇಳಿದಿದೆ. ಎರಡು ಆನೆಗಳು ಕಾಳಗಕ್ಕೆ ಬೀಳುತ್ತಿದ್ದಂತೆ ನಿಯಂತ್ರಿಸಲಾಗದೆ ಮಾವುತ ಇಳಿದು ಓಡಿದ್ದಾನೆ.  ಕಾಳಗದಲ್ಲಿ ಅರ್ಜುನ ದಾರುಣವಾಗಿ ಸಾವನ್ನಪ್ಪಿದೆ.


ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅರ್ಜುನ, ಸೌಮ್ಯ ಸ್ವಾಭಾವದಿದಲೇ ಎಲ್ಲರ ಪ್ರೀತಿ ಗಳಿಸಿದ್ದ. ಅರ್ಜುನನ ಸಾವು ದುಃಖ ತರಿಸಿದೆ.


ಇದನ್ನೂ ಓದಿ: ಕೇಂದ್ರದಿಂದ ಬಾರದಿರುವ ಅನುದಾನ ಕೇಳುವ ಪೌರುಷ ಬಿಜೆಪಿ ಸಂಸದರಿಗೆ ಇಲ್ಲವೇ? -ರಮೇಶ್ ಬಾಬು  


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.