ಬೆಂಗಳೂರು: ವಿಧಾನಸಭೆ ವಿಪಕ್ಷ ಉಪನಾಯಕರಾಗಿ ಶಾಸಕ ಅರವಿಂದ ಬೆಲ್ಲದ್ ಆಯ್ಕೆಯಾಗಿದ್ದಾರೆ. ಆಯ್ಕೆಯಾದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅರವಿಂದ ಬೆಲ್ಲದ್, ಉತ್ತರ ಕರ್ನಾಟಕದ ಧ್ವನಿಯಾಗಿ ಪಕ್ಷ ಈ ಸ್ಥಾನ ನೀಡಿದೆ. ಪಕ್ಷದ ಎಲ್ಲ ನಾಯಕರಿಗೆ ವಂದನೆ ಸಲ್ಲಿಸುವೆ ಎಂದರು. 


COMMERCIAL BREAK
SCROLL TO CONTINUE READING

ಪಕ್ಷ ನನ್ನನ್ನು ನಂಬಿ ಜವಾಬ್ದಾರಿ ಕೊಟ್ಟಿದೆ. ಜನದ ಆಶೋತ್ತರಗಳಿಗೆ ಧ್ವನಿಯಾಗಿ ಜವಾಬ್ಧಾರಿ ನಿರ್ವಹಿಸುವೆ. ಕಾರ್ಯಕರ್ತರ ಶ್ರಮದಿಂದ ಈ ಜವಾಬ್ದಾರಿ ಸಿಕ್ಕಿದೆ ಎಂದು ಹೇಳಿದರು. 


ಇದನ್ನೂ ಓದಿ : ಬಿಜೆಪಿಯ 'ಪ್ರೊ ಕಬ್ಬಡ್ಡಿ' ಆಟದಲ್ಲಿ ಒಮ್ಮೆ 'ಸಂತೋಷ' ಕೂಟ ಮತ್ತೊಮ್ಮೆ BSY ಕೂಟದ ಮೇಲುಗೈ! 


ಅಸಮಾಧಾನ ಶಮನಕ್ಕೆ ಸ್ಥಾನ ಕೊಟ್ಟರಾ? ಎಂಬ ಪ್ರಶ್ನೆಗೆ ಮಾತನಾಡಿದ ಶಾಸಕ ಅರವಿಂದ ಬೆಲ್ಲದ್, ಈ ವಿಷಯವೇ ಬೇರೆ. ಇವತ್ತು ವಿರೋಧ ಪಕ್ಷದಲ್ಲಿದ್ದು ಸರ್ಕಾರದ ಕೆಲಸ ಸರಿಯಾಗಿ ಮಾಡಿಸುವುದು ನಮ್ಮ ಜವಾಬ್ದಾರಿ. ವಿರೋಧ ಪಕ್ಷದ ಧುರೀಣರಾಗಿ ಆರ್. ಅಶೋಕ ಇದ್ದಾರೆ. ಪಕ್ಷದ ಅಧ್ಯಕ್ಷರಾಗಿ ವಿಜಯೇಂದ್ರ ಇದ್ದಾರೆ. ನನಗೆ ಈಗ ಈ ಜವಾಬ್ದಾರಿ ಕೊಟ್ಟಿದೆ ಎಂದು ಹೇಳಿದರು. 


ಯತ್ನಾಳ್‌ ಅಸಮಾಧಾನ ವಿಚಾರವಾಗಿ ಮಾತನಾಡಿದ ಅವರು, ಯತ್ನಾಳ್‌ ಅತ್ಯಂತ ಜನಪ್ರಿಯ ನಾಯಕರು. ಹಿಂದುತ್ವದ ಪ್ರತಿಪಾದಕರು. ಅವರ ಮೇಲೆ ಜನರ ಪ್ರೀತಿ ಇದೆ. ಆದರೆ ಅವರಿಗೆ ಸ್ಥಾನ ಕೊಟ್ಟಿಲ್ಲ. ಆದರೆ ಮುಂದೆ ಒಳ್ಳೆಯ ಸ್ಥಾನ ಕೊಡುವರೆಂಬ ಭರವಸೆ ಇದೆ. ಅವರಿಗೆ ಪಕ್ಷ ಉತ್ತಮ ಸ್ಥಾನ ಕೊಡುತ್ತದೆ. ಅವರನ್ನು ಯಾರೂ ಕಡೆಗಣನೆ ಮಾಡುತ್ತಿಲ್ಲ ಎಂದು ತಿಳಿಸಿದರು. 


ಇದನ್ನೂ ಓದಿ : ಸಿದ್ದರಾಮಯ್ಯ ಅವರಿಗೆ ದಮ್ ಇದ್ರೆ ಹಿಂದೂ ರಾಷ್ಟ್ರ ಆಗೋದನ್ನ ತಡೆಯಲಿ: ಅನಂತಕುಮಾರ್ ಹೆಗಡೆ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.