ಹಲ್ಲೆ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೇ ತೃತೀಯಲಿಂಗಿ ಅರ್ಚನಾ ಸಾವು

ಗಂಭೀರವಾಗಿ ಗಾಯಗೊಂಡಿದ್ದ ಅರ್ಚನಾ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ.

Written by - Zee Kannada News Desk | Last Updated : May 15, 2022, 08:23 AM IST
  • ಬೆಂಗಳೂರಿನಲ್ಲಿ ಲಾಡ್ಜ್‍ನಲ್ಲಿ ಮಂಗಳಮುಖಿಯರ ಮೇಲೆ ಹಲ್ಲೆ ಪ್ರಕರಣ
  • ಚಿಕಿತ್ಸೆ ಫಲಕಾರಿಯಾಗದೇ ತೃತೀಯಲಿಂಗಿ ಅರ್ಚನಾ ಸಾವನ್ನಪ್ಪಿದ್ದಾರೆ
  • ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಾಸ್ ಡೀಲಕ್ಸ್ ಲಾಡ್ಜ್ ನಲ್ಲಿ ಹಲ್ಲೆ ನಡೆದಿತ್ತು
ಹಲ್ಲೆ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೇ ತೃತೀಯಲಿಂಗಿ ಅರ್ಚನಾ ಸಾವು title=
ತೃತೀಯಲಿಂಗಿ ಅರ್ಚನಾ ಸಾವನ್ನಪ್ಪಿದ್ದಾರೆ

ಬೆಂಗಳೂರು: ಮಂಗಳಮುಖಿಯರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಕಾರಿಯಾಗದೇ ತೃತೀಯಲಿಂಗಿ ಅರ್ಚನಾ ಸಾವನ್ನಪ್ಪಿದ್ದಾರೆ.

ಸೆಕ್ಸ್ ವರ್ಕ್ ಮಾಡಿಕೊಂಡಿದ್ದ ಇಬ್ಬರು ಟ್ರಾನ್ಸ್ ಜಂಡರ್ ಮೇಲೆ ಹಲ್ಲೆ ನಡೆದಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಅರ್ಚನಾ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಗಿನ ಜಾವ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ‘ಸೀಡ್ಲೆಸ್ ಕಡಲೆಬೀಜ’ದಂತಾಗಿದೆ!: ಕಾಂಗ್ರೆಸ್

ಬೆಂಗಳೂರಿನ ಕಾಟನ್‍ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಾಸ್ ಡೀಲಕ್ಸ್ ಲಾಡ್ಜ್‍ನಲ್ಲಿ ಮಂಗಳಮುಖಿಯರ ಮೇಲೆ ಹಲ್ಲೆ ನಡೆದಿತ್ತು. 25 ವರ್ಷದ ಅರ್ಚಾನಾಗೆ ಚಾಕುವಿನಿಂದ ಐದಾರು ಕಡೆ ಇರಿಯಲಾಗಿತ್ತು.

ಗಂಭೀರವಾಗಿ ಗಾಯಗೊಂಡಿದ್ದ ಅರ್ಚನಾರನ್ನು ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮಧ್ಯರಾತ್ರಿ 2 ಗಂಟೆಗೆ ಅವರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಮಂಗಳಮುಖಿ ಸಂಜನಾ(30)ಗೆ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಕಾಟನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಸೆಯನ್ನು ಇನ್ನೂ ಬಿಟ್ಟಿಲ್ಲ: ಬಿಜೆಪಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News