ಯತ್ನಾಳ್ ಅವರನ್ನು ‌ರಾಜಕೀಯವಾಗಿ ಮುಗಿಸಲು ಯತ್ನ: ಸಂಸದ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಕಾನೂನು, ನ್ಯಾಯ ಸತ್ತು ಹೋಗಿದೆ, ದ್ವೇಷದ ರಾಜಕಾರಣ ನಡೆಯುತ್ತಿದೆ‌. ಎಲ್ಲವೂ ಕಾನೂನು ಪ್ರಕಾರ ಮಾಡಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಕ್ಕರೆ ಕಾರ್ಖಾನೆ ಆರಂಭ ಮಾಡಿದ್ದಾರೆ ಎಂದರು. 

Written by - Prashobh Devanahalli | Last Updated : Aug 28, 2024, 03:24 PM IST
  • ರಾಜ್ಯದಲ್ಲಿ ಕಾನೂನು, ನ್ಯಾಯ ಸತ್ತು ಹೋಗಿದೆ
  • ದ್ವೇಷದ ರಾಜಕಾರಣ ನಡೆಯುತ್ತಿದೆ
  • ಸಂಸದ ಬಸವರಾಜ ಬೊಮ್ಮಾಯಿ ಆರೋಪ
ಯತ್ನಾಳ್ ಅವರನ್ನು ‌ರಾಜಕೀಯವಾಗಿ ಮುಗಿಸಲು ಯತ್ನ: ಸಂಸದ ಬಸವರಾಜ ಬೊಮ್ಮಾಯಿ title=

ಬೆಂಗಳೂರು: ಶಾಸಕ ಬಸನಗೌಡ ಯತ್ನಾಳ ಅವರನ್ನು ರಾಜಕೀಯವಾಗಿ ಮುಗಿಸಲು ಮಾಲಿನ್ಯ ನಿಯಂತ್ರಣ ಮಂಡಳಿ ಅವರ ಕಬ್ಬಿನ‌ ಕಾರ್ಖಾನೆಗೆ ಅನುಮತಿ ನೀಡುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬೊಮ್ಮಾಯಿ ಆರೋಪಿಸಿದ್ದಾರೆ.

ಮಾಲಿನ್ಯ ನಿಯಂತ್ರಣ ಮಂಡಳಿ ಅನ್ಯಾಯದ ವಿರುದ್ದ ಶಾಸಕ ಬಸವನಗೌಡ ಪಾಟೀಲ್ ಅವರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳೊಂದಿಗೆ ಮಾತನಾಡಿದರು. ರಾಜ್ಯದಲ್ಲಿ ಕಾನೂನು, ನ್ಯಾಯ ಸತ್ತು ಹೋಗಿದೆ, ದ್ವೇಷದ ರಾಜಕಾರಣ ನಡೆಯುತ್ತಿದೆ‌. ಎಲ್ಲವೂ ಕಾನೂನು ಪ್ರಕಾರ ಮಾಡಿ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಕ್ಕರೆ ಕಾರ್ಖಾನೆ ಆರಂಭ ಮಾಡಿದ್ದಾರೆ ಎಂದರು. 

ಇದನ್ನೂ ಓದಿ: ಪಕ್ಷದ ವಹಿಸಿದ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಿದ್ದೇನೆ: ಗೃಹ ಸಚಿವ ಪರಮೇಶ್ವರ

ಕಳೆದ ವರ್ಷ ಇವರಿಗೆ ಮಾಲಿನ್ಯ ನಿಯಂತ್ರಣ ಮಂಡಳಿ  ಕಾರ್ಖಾನೆಗೆ ಅನುಮತಿ ಕೊಡಲಿಲ್ಲ. ಆಗ ಇವರು ಕೋರ್ಟ್ ಮೊರೆ ಹೋದರು, ಕೋರ್ಟ್ ನಾಲ್ಕು ವಾರದೊಳಗೆ ಕಾರ್ಖಾನೆ ಪುನಾರಂಭಕ್ಕೆ ಆದೇಶ ಕೊಟ್ಟಿತು. ಆದರೆ, ಮಾಲಿನ್ಯ ನಿಯಂತ್ರಣ ಮಂಡಳಿಯವರು ತಾಂತ್ರಿಕ ಕಾರಣದ ನೆಪ ಹೆಳುತ್ತಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ರಾಜಕೀಯವಾಗಿ ಮುಗಿಸಬೇಕು ಅಂತ ಅನುಮತಿ ಕೊಡುತ್ತಿಲ್ಲ ಎಂದು ಆರೋಪಿಸಿದರು.

ಮಾಲಿನ್ಯ ನಿಯಂತ್ರಣ ಮಂಡಳಿ ಬಹಳ ದೊಡ್ಡ ತಾರತಮ್ಯ ಮಾಡುತ್ತಿದೆ.  ಹಲವು ಸಕ್ಕರೆ ಕಾರ್ಖಾನೆಗಳಿಗೆ ಅನುಮತಿ ಕೊಟ್ಟು, ಇವರಿಗೆ ತಾರತಮ್ಯ ಮಾಡಲಾಗುತ್ತಿದೆ. ಪಿಸಿಬಿ ಕಾನೂನು ಉಲ್ಲಂಘಿಸಿದ ಕಾರ್ಖಾನೆಗಳಿಗೆ ಅನುಮತಿ ಕೊಟ್ಟಿದೆ ನಾವು ಇದನ್ನು ಇಲ್ಲಿಗೇ ಬಿಡುವುದಿಲ್ಲ, ಹೋರಾಟ ಮಾಡುತ್ತೇವೆ. ಈ ಕಾರ್ಖಾನೆ ನಂಬಿ ಸಾವಿರಾರು ರೈತರು ಇದ್ದಾರೆ ಎಂದರು. 

ಈ ಸಲ ಆ ಭಾಗದಲ್ಲಿ ಹೆಚ್ಚು ಕಬ್ಬು ಬೆಳೆದಿದ್ದಾರೆ, ಈ ಕಾರ್ಖಾನೆ ತೆರೆಯಬೇಕಿದೆ. ಸರ್ಕಾರ ಒಂದು ಕಡೆ ಉತ್ತರ ಕರ್ನಾಟಕದ ಕಡೆಗೆ ಕೈಗಾರಿಕೆಗಳು ಬರಬೇಕು ಅಂತ ಹೇಳುತ್ತದೆ. ಆದರೆ, ಇನ್ನೊಂದು ಕಡೆ ಈ ರೀತಿಯ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.

ಇದನ್ನೂ ಓದಿ: ಘಟಪ್ರಭಾ ನದಿ ಪ್ರವಾಹ ಪರಿಹಾರ ಕುರಿತು ಶೀಘ್ರ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News