ಬೆಂಗಳೂರು : ಭಾರತದಲ್ಲಿ ಆಸ್ಟ್ರೇಲಿಯಾದ ಕಾನ್ಸಲ್‌ ಜನರಲ್‌ ಬ್ಯಾರಿ ಓʼ ಫ್ಯಾರೆಲ್‌ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮಾಹಿತಿ ತಂತ್ರಜ್ಞಾನ, ಶಿಕ್ಷಣ ಮತ್ತಿತರ ಕ್ಷೇತ್ರಗಳಲ್ಲಿ ಕರ್ನಾಟಕ ಹಾಗೂ ಆಸ್ಟ್ರೇಲಿಯಾ ನಡುವಿನ ಬಾಂಧವ್ಯವನ್ನು ಬಲಪಡಿಸಲು ನಿರ್ಧರಿಸಲಾಯಿತು. 


COMMERCIAL BREAK
SCROLL TO CONTINUE READING

ದೇಶದಲ್ಲಿ ಅತ್ಯಂತ ಮುಂಚೂಣಿಯಲ್ಲಿರುವ ರಾಜ್ಯ ಕರ್ನಾಟಕ. ತಂತ್ರಜ್ಞಾನ ಹಾಗೂ ಶಿಕ್ಷಣ ಕ್ಷೇತ್ರದಲ್ಲಿಯೂ ಮುನ್ನಡೆ ಸಾಧಿಸಿದೆ. ಆಸ್ಟ್ರೇಲಿಯಾದೊಂದಿಗೆ ವಿವಿಧ ಕ್ಷೇತ್ರಗಳಲ್ಲಿ ಸಹಭಾಗಿತ್ವ ಹೊಂದಲು ರಾಜ್ಯ ಉತ್ಸುಕವಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಬೆಂಗಳೂರಿನಲ್ಲಿ ಆಸ್ಟ್ರೇಲಿಯನ್‌ ಕಾನ್ಸುಲೇಟ್‌ ಕಚೇರಿ ಕೆಲವೇ ದಿನಗಳಲ್ಲಿ ಪ್ರಾರಂಭವಾಗುತ್ತಿರುವ ಕುರಿತು ಮುಖ್ಯಮಂತ್ರಿಗಳು ಹರ್ಷ ವ್ಯಕ್ತಪಡಿಸಿದರು.


ಇದನ್ನೂ ಓದಿ: Foxconn: ಜುಲೈ 1ರ ವೇಳೆಗೆ ಫಾಕ್ಸ್ ಕಾನ್ ಕಂಪನಿಗೆ ಪೂರ್ತಿ ಭೂಮಿ ಹಸ್ತಾಂತರ - ಸಚಿವ ಎಂ.ಬಿ.ಪಾಟೀಲ್


ದಕ್ಷಿಣ ಭಾರತದ ಆಸ್ಟ್ರೇಲಿಯನ್ ಕಾನ್ಸಲ್ ಜನರಲ್ ಸಾರಾ ಕಿರ್ಲೆವ್, ಬೆಂಗಳೂರಿನಲ್ಲಿ ಸ್ಥಾಪನೆಯಾಗಲಿರುವ ಆಸ್ಟ್ರೇಲಿಯನ್ ಕಾನ್ಸುಲೆಟ್ ಜನರಲ್ ನ ನಿಯೋಜಿತ ಡೆಪ್ಯುಟಿ ಕಾನ್ಸಲ್ ಜನರಲ್ ಹ್ಯುಂಗ್ - ಮಿನ್ ಕಿಮ್, ರಾಜ್ಯದ ಐಟಿ ಬಿಟಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣ ರೆಡ್ಡಿ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ