ಬೆಂಗಳೂರು: ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ಆಹಾರ ನೀಡುವ ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.


COMMERCIAL BREAK
SCROLL TO CONTINUE READING

ಇದೆ ವೇಳೆ ಮಾತನಾಡಿದ ಅವರು ಮಾನಸಿಕ ಆರೋಗ್ಯ ಮತ್ತು ಉತ್ತಮ‌ ಶಿಕ್ಷಣಕ್ಕೆ ಗುಣಮಟ್ಟದ ಆಹಾರ ಮುಖ್ಯ. ಉಪಹಾರ ಇಲ್ಲದೆ ಶಾಲೆಗೆ ಬಂದು, ಊಟ ಇಲ್ಲದೆ ಮಧ್ಯಾಹ್ನದವರೆಗೂ ಶಾಲೆಯಲ್ಲಿರುವ ಮಕ್ಕಳನ್ನು ನಾನು ನೋಡಿದ್ದೇನೆ. ಹೀಗಾಗಿ ವಾರದಲ್ಲಿ ಎರಡು ದಿನ ಊಟ ಮತ್ತು ಮೊಟ್ಟೆ ಕೊಡಲು ಮುಂದಾದೆವು. ಈಗ ಅಜೀಂ ಪ್ರೇಮ್‌ಜಿ ಫೌಂಡೇಷನ್ ಅವರು ವಾರದಲ್ಲಿ ನಾಲ್ಕು ದಿನ ಮಕ್ಕಳಿಗೆ ಮೊಟ್ಟೆ ನೀಡಲು ಮತ್ತು ಪೂರಕ ಪೌಷ್ಠಿಕ ಆಹಾರ ಒದಗಿಸುವ ಪುಣ್ಯದ ಕಾರ್ಯಕ್ಕೆ ಸರ್ಕಾರದ ಜೊತೆಗೆ ಕೈಜೋಡಿಸಿದ್ದಾರೆ. ಅವರಿಗೆ ಧನ್ಯವಾದಗಳು ಎಂದು ಅವರು ಹೇಳಿದರು.ವರುಣನ ಕೃಪೆಯಿಂದ ಕೋರ್ಟ್ ಆದೇಶ ಪಾಲನೆ, ರೈತರ ಹಿತ ರಕ್ಷಣೆ ಸಾಧ್ಯವಾಗಿದೆ: ಡಿಸಿಎಂ ಡಿ.ಕೆ ಶಿವಕುಮಾರ್


ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದಬೇಕು. ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ. ಬಡವರ ಮಕ್ಕಳಿಗೆ ಉತ್ತಮ ಶಿಕ್ಷಣಕ್ಕಾಗಿ ಅವಕಾಶಗಳನ್ನು ಸೃಷ್ಟಿಸುವುದು ನಮ್ಮ ಆಶಯ. ಈ ಕಾರಣಕ್ಕೆ ಸಮವಸ್ತ್ರ, ಶೂ, ಸಾಕ್ಸ್ ಕೊಡುವ ಜೊತೆಗೆ ಹೆಚ್ಚೆಚ್ಚು ವಸತಿ ಶಾಲೆಗಳನ್ನು ತೆರೆಯುತ್ತಿದ್ದೇವೆ ಎಂದು ತಿಳಿಸಿದರು.


ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಪ್ರೋ ಮುಖ್ಯಸ್ಥರಾದ ಅಜೀಂ ಪ್ರೇಮ್ ಜಿ ದಂಪತಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಮೆಹರೂಜ್ ಖಾನ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.