ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹರರಿ ಪ್ರಚಾರಕ್ಕೆ ಸಿದ್ಧತೆ ನಡೆಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯುರಪ್ಪ ಇಂದು ಮತ್ತು ನಾಳೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. 


COMMERCIAL BREAK
SCROLL TO CONTINUE READING

ಶನಿವಾರ ಸಿಂಧಗಿ, ವಿಜಯಪುರ ಹಾಗೂ ಬಸವನ ಬಾಗೇವಾಡಿಯಲ್ಲಿ 3 ಸಭೆಗಳನ್ನು ನಡೆಸಲಿರುವ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಭಾನುವಾರ ಜಮಖಂಡಿ ಹಾಗೂ ಬಾಗಲಕೋಟೆ ಪ್ರವಾಸದಲ್ಲಿ ಸ್ಥಾನೀಯ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಲೋಕಸಭಾ ಚುನಾವಣೆ ಪ್ರಚಾರ ಸಂದರ್ಭದಲ್ಲಿ ಯಾವ ವಿಷಯಗಳನ್ನು ಜನರೆದುರು ಪ್ರಸ್ತಾಪಿಸಬೇಕು, ಪ್ರಚಾರ ಕಾರ್ಯ ಹೇಗೆ ನಡೆಯಬೇಕು ಎಂಬುದರ ಬಗ್ಗೆ ಕಾರ್ಯಕರ್ತರೊಂದಿಗೆ ಚರ್ಚಿಸಲಿದ್ದಾರೆ.