ಬೆಂಗಳೂರು : ನಗರದ ವೈಯಾಲಿಕಾವಲ್‌ನಲ್ಲಿ ನಡೆದ ಭೀಕರ ಹತ್ಯೆ ಪ್ರಕರಣ, ಇಡಿ ರಾಜ್ಯವನ್ನೇ ಬೆಚ್ಚಿ ಬೀಳಿಸಿತ್ತು. ಕಳೆದ ಎರಡು ದಿನಗಳ ಹಿಂದೆ ನೇಪಾಳ ಮೂಲದ ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಫ್ರಿಡ್ಜ್‌ನಲ್ಲಿ ಮೃತ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಶಂಕಿತ ಆರೋಪಿ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾನೆ.


COMMERCIAL BREAK
SCROLL TO CONTINUE READING

ಹೌದು... ಮಹಾಲಕ್ಷ್ಮಿಯನ್ನು ಭೀಕರವಾಗಿ ಕೊಂದು ಮುಕ್ತಿ ರಂಜನ್ ರಾಯ್ ಬೆಂಗಳೂರು ಬಿಟ್ಟು ಪರಾರಿಯಾಗಿದ್ದ ಎಂಬ ಮಾಹಿತಿ ಇದೆ. ಅಲ್ಲದೆ, ಆತ ಪಶ್ಚಿಮ ಬಂಗಾಳದಲ್ಲಿ ಇದ್ದಾನೆ ಎಂದು ಪೊಲೀಸರಿಗೆ ಮಾಹಿತಿ ದೊರಕಿತ್ತು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲು ಬೆಂಗಳೂರು ನಗರ ಪೊಲೀಸರ ಒಂದು ತಂಡ ಅಲ್ಲಿಗೆ ತೆರಳಿತ್ತು. ಆದರೆ ಇದೀಗ ಮುಕ್ತಿ ರಂಜನ್ ಒಡಿಶಾದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಮಾಹಿತಿ ತಿಳಿದು ಬಂದಿದೆ.


ಇದನ್ನೂ ಓದಿ:1 ತಿಂಗಳವರೆಗೆ ಟೊಮೆಟೊ ಜ್ಯೂಸ್ ಕುಡಿಯಿರಿ, ಈ ರೋಗಗಳಿಂದ ಮುಕ್ತಿ ಪಡೆಯಿರಿ..!


ಪ್ರಕರಣದ ಹಿನ್ನೆಲೆ? : ಕಳೆದ ಎರಡು ದಿನಗಳ ಹಿಂದೆ ಬೆಂಗಳೂರಿನ ವೈಯ್ಯಾಲಿಕಾವಲ್‌ನಲ್ಲಿ ನೇಪಾಳ ಮೂಲದ ಮಹಾಲಕ್ಷ್ಮಿ ಎನ್ನುವ ಮಹಿಳೆಯ ಭೀಕರ ಹತ್ಯೆ ನಡೆದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪಿಯ ಫೋಟೋ ಪತ್ತೆಯಾಗಿತ್ತು. ಹಂತಕನನ್ನು ಒರಿಸ್ಸಾ ಮೂಲದ ಮೃತ ಮಹಿಳೆಯ ಸಹೋದ್ಯೋಗಿ ಮುಕ್ತಿ ರಂಜನ್ ರಾಯ್ ಎಂದು ಗುರುತಿಸಲಾಗಿತ್ತು.


ಒಡಿಶಾ ಮೂಲದ ಮುಕ್ತಿ ರಂಜನ್  ಹೆಬ್ಬಗೋಡಿಯಲ್ಲಿ ನೆಲೆಸಿದ್ದನು. ತಮ್ಮನೊಂದಿಗೆ ಹೆಬ್ಬಗೋಡಿಯಲ್ಲಿ ವಾಸವಿದ್ದು ಪ್ರತಿನಿತ್ಯ ಮಲ್ಲೇಶ್ವರಂನ ಫ್ಯಾಶನ್ ಫ್ಯಾಕ್ಟರಿಯಲ್ಲಿ ಟೀಂ ಹೆಡ್‌ ಆಗಿ ಕೆಲಸ ಮಾಡುತ್ತಿದ್ದನು. ಈ ವೇಳೆ ಅದೇ ಸ್ಟೋರ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಾಲಕ್ಷ್ಮಿಯನ್ನ ಪ್ರೀತಿಸುತ್ತಿದ್ದನು.


ಇದನ್ನೂ ಓದಿ:ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು; ಮಹತ್ವದ ಸಲಹೆ ನೀಡಿದ ನ್ಯಾಸಂತೋಷ್ ಹೆಗ್ಡೆ!


ಆದರೆ ಇಬ್ಬರ ಮಧ್ಯ ಅದೇನು ಮನಸ್ತಾಪ ಉಂಟಾಯಿತು ಗೊತ್ತಿಲ್ಲ. ಸೆಪ್ಟೆಂಬರ್ 1 ರಂದು ಮಹಾಲಕ್ಷ್ಮಿ ಹಾಗೂ ಮುಕ್ತಿ ರಂಜನ್ ಇಬ್ಬರು ಕೆಲಸಕ್ಕೆ ಹಾಜರಾಗಿದ್ದಾರೆ. ಬಳಿಕ ಸೆಪ್ಟೆಂಬರ್ 2ರಿಂದ ಮಹಾಲಕ್ಷ್ಮಿ ವಾರದ ರಜೆ ತೆಗೆದುಕೊಂಡಿದ್ದಾಳೆ. ಸೆಪ್ಟೆಂಬರ್ 2ರಂದು ತಾಯಿಯನ್ನು ಭೇಟಿಯಾಗಲು ತಾಯಿಯ ಮನೆಗೆ ಬರುವುದಾಗಿ ಕುಟುಂಬಸ್ಥರಿಗೆ ತಿಳಿಸಿದ್ದಾಳೆ.


ಆದರೆ ಅಷ್ಟರಲ್ಲಿ ಶಂಕಿತ ಆರೋಪಿ ಮುಕ್ತಿ ರಂಜನ್ ಮಹಾಲಕ್ಷ್ಮಿಯ ಕಥೆ ಮುಗಿಸಿದ್ದಾನೆ. ಆಕೆಯನ್ನು ಭೀಕರವಾಗಿ ಕೊಂದು ತುಂಡು ತುಂಡಾಗಿ ಕತ್ತರಿಸಿ, ದೇಹವನ್ನು ಫ್ರಿಡ್ಜ್‌ನಲ್ಲಿ ಇಟ್ಟು ಪರಾರಿಯಾಗಿದ್ದ. ಆರೋಪಿ ಪಶ್ಚಿಮ ಬಂಗಾಳದಲ್ಲಿ ಇದ್ದು ಪೊಲೀಸರಿಂದ ಕಣ್ತಪ್ಪಿಸಿ ಓಡಾಡುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದರೆ ಇದೀಗ ಶಂಕಿತ ಮುಕ್ತಿ ರಂಜನ್ ರಾಯ್ ಆತ್ಮಹತ್ಯೆಗೆ ಶರಣಾಗಿದ್ದಾನೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.