ಗ್ರಾಹಕರ ಹಣ ಜಮಾ ಮಾಡದೇ 26 ಲಕ್ಷ ಗುಳುಂ ಮಾಡಿದ ಬ್ಯಾಂಕ್ ಕ್ಯಾಷಿಯರ್!
Bank cashier: ಗ್ರಾಹಕರು ತಮ್ಮ ಖಾತೆಗಳಿಗೆ ಕಟ್ಟಿದ್ದ ಹಣವನ್ನು ಜಮೆ ಮಾಡದೇ ಲಕ್ಷಾಂತರ ರೂ. ಹಣ ಗುಳುಂ ಮಾಡಿರುವ ಘಟನೆ ಚಾಮರಾಜನಗರ ತಾಲೂಕಿನ ಸಂತೇಮರಹಳ್ಳಿ ಎಸ್ಬಿಐ ಬ್ಯಾಂಕ್ ನಲ್ಲಿ ನಡೆದಿದೆ.
ಚಾಮರಾಜನಗರ: ಸಂತೇಮರಹಳ್ಳಿ ಶಾಖೆಯ ಎಸ್ ಬಿಐ ಬ್ಯಾಂಕ್ ನ ಕ್ಯಾಷ್ ಆಫೀಸರ್ ಮನೋರಂಜನ್ ಮುರ್ಮು ಎಂಬಾತ ಸ್ವಸಹಾಯ ಸಂಘಗಳ ಸಾಲ ಮರುಪಾವತಿ ಹಣವನ್ನು ಜಮೆ ಮಾಡದೇ ಗುಳುಂ ಮಾಡಿರುವ ಆರೋಪಿ. ಬರೋಬ್ಬರಿ 26,15,920 ರೂ. ಹಣವನ್ನು ಸ್ವಂತ ಬಳಕೆ ಮಾಡಿಕೊಂಡಿದ್ದಾನೆ ಎಂದು ಬ್ಯಾಂಕ್ ವ್ಯವಸ್ಥಾಪಕರು ದೂರು ಕೊಟ್ಟಿದ್ದಾರೆ.
ಇದನ್ನೂ ಓದಿ-ನೀರಿನ ಅಭಾವ, ಕೋಳಿ ಆಹಾರಗಳ ಪ್ರಮಾಣ ಕುಸಿತ..!
ವಿಕಾಸ ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಡಿ ಕೆಲವು ಸ್ವ-ಸಹಾಯ ಸಂಘಗಳು ಸಾಲ ಪಡೆದು ಸಾಲ ಮರುಪಾವತಿ ಮಾಡುತ್ತಿದ್ದರು. ಆದರೆ, ಹಣವನ್ನು ಖಾತೆಗಳಿಗೆ ಜಮೆ ಮಾಡದೇ ಕೌಂಟರ್ ಚಲನ್ ನ್ನು ಗ್ರಾಹಕರಿಗೆ ಕೊಟ್ಟು ಯಾಮಾರಿಸಿದ್ದಾನೆ ಎಂದು ದೂರು ಕೊಡಲಾಗಿದೆ. ಈ ಸಂಬಂಧ ಸಂತೇಮರಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ-ಚಿಕ್ಕೋಡಿ ಲೋಕಸಭೆ ಅಖಾಡದಲ್ಲಿ ಜಾರಕಿಹೊಳಿ ಫ್ಯಾಮಿಲಿ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.