ಬೆಂಗಳೂರು : ಕಾವೆರಿ ನದಿಗೆ ಬರುತ್ತಿರುವ ಒಳ ಹರಿವಿನ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅತಿ ಹೆಚ್ಚು ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಆದರೆ, ಅಧಿಕಾರಿಗಳಿಂದ ಮಾಹಿತಿ ಪಡೆದಾಗ ಸುಮಾರು 2000 ಕ್ಯೂಸೆಕ್ಸ್ ನೀರು ಬರುತ್ತಿದೆ ಅಂತ ಹೇಳಿದ್ದಾರೆ. ಡಿಕೆಶಿವಕುಮಾರ್ ಅವರು ಯಾಕೆ ಜನರ ದಾರಿ ತಪ್ಪಿಸುತ್ತಿದ್ದಾರೆ. ಯಾಕೆ ಇಷ್ಟೊಂದು ಹಗುರವಾಗಿ ಮಾತನಾಡುತ್ತಿದ್ದಾರೆ ಎಂದು ಪ್ರಶ್ನಿಸಿದರು. 


ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಬಿಜೆಪಿ ರಾಜಕೀಯ ಬಿಟ್ಟು, ಪರಿಹಾರಕ್ಕಾಗಿ ಕೇಂದ್ರದ ಮೇಲೆ ಒತ್ತಡ ತರಲಿ : ಡಿಸಿಎಂ


ಡಿಸಿಎಂ ಯಾವಾಗಲೂ  ಬ್ರಾಂಡ್ ಬೆಂಗಳೂರು ಅಂತ ಭಾಷಣ ಮಾಡಿದರೆ ಸಾಲದು, ಬೆಂಗಳೂರಿಗೆ ಕಾವೇರಿ ನೀರು ಉಳಿಸಿಕೊಳ್ಳಬೇಕು. ಇಲ್ಲದಿದ್ದರೆ  ಬ್ಯಾಡ್ ಬೆಂಗಳೂರು ಆಗುತ್ತದೆ ಎಂದರು. ಅಲ್ಲದೆ, ಸಂಕಷ್ಟ ಸೂತ್ರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, 2018 ಕ್ಕೂ ಮೊದಲು ಸಂಕಷ್ಟ ಸೂತ್ರ ಜಾರಿಗೊಳಿಸಲು ಈ ಪರಿಸ್ಥಿತಿ ಇರಲಿಲ್ಲ. ಸಿಡಬ್ಲುಎಂಎ ಬಂದ ಮೇಲೆ ನೀರಿನ ಸಮಸ್ಯೆ ಈಗ ಬಂದಿದೆ. ಹೀಗಾಗಿ ಸಂಕಷ್ಟ ಸೂತ್ರ ಜಾರಿ ಮಾಡುವುದು ಅಹತ್ಯವಿದೆ ಎಂದು ಹೇಳಿದರು. 


ಈ ಸರ್ಕಾರದಲ್ಲಿ ಗಲಭೆಕೋರರಿಗೆ ಕಾನೂನಿನ ಭಯ ಇಲ್ಲ : ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಿಎಂ ಶಿವಮೊಗ್ಗ ಕಲ್ಲು ತೂರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಗಲಭೆ ಸೃಷ್ಟಿಸುವವರಿಗೆ ಈ ಸರ್ಕಾರದಲ್ಲಿ ಕಾನೂನಿನ ಭಯವಿಲ್ಲ. ಶಿವಮೊಗ್ಗ ಗಲಭೆಯ ಬಗ್ಗೆ ಗೃಹ ಸಚಿವ ಪರಮೇಶ್ವರ್ ಅವರು ಸಣ್ಣ ಗಲಾಟೆ ಎಂದು ಹೇಳಿರುವುದು ದುರ್ದೈವದ ಸಂಗತಿ. ಮನೆಗಳಿಗೆ ಕಲ್ಲು ತೂರಿದ್ದಾರೆ. ಕೋಲಾರದಲ್ಲಿಯೂ ಇದೇ ರೀತಿ ಘಟನೆ ನಡೆಯಿತು ಸರ್ಕಾರ ಇಂತಹ ಶಕ್ತಿಗಳಿಗೆ ಕುಮ್ಮಕ್ಕು ನೀಡುತ್ತಿದ್ದಾರೆ‌. ಗೃಹ ಸಚಿವ ಪರಮೇಶ್ವರ  ಅವರ ಹೇಳಿಕೆ ಬಾಲಿಶವಾಗಿದೆ. ಸರ್ಕಾರದ ಈ ನಡವಳಿಕೆಯಿಂದಲೇ ಜೂಜುಕೋರರು, ಗಲಭೆಕೋರರು ರಾಜಾರೋಷವಾಗಿ ತಿರುಗಾಡುತ್ತಿದ್ದಾರೆ ಎಂದು ಬೊಮ್ಮಾಯಿ ಆಕ್ರೋಶ ಹೊರಹಾಕಿದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.