ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಬಿಬಿಎಂಪಿ ಪೌರ ಕಾರ್ಮಿಕರಿಗೆ ಸಿಂಗಾಪುರ ಪ್ರವಾಸ ಭಾಗ್ಯ ದೊರೆತಿದೆ. 


COMMERCIAL BREAK
SCROLL TO CONTINUE READING

ಘನ ತ್ಯಾಜ್ಯ ನಿರ್ವಹಣೆಯ ವಿವಿಧ ವಿಧಾನಗಳ ಬಗ್ಗೆ ಅಧ್ಯಯನ ನಡೆಸಲು ಅಕ್ಟೋಬರ್ 24ರಿಂದ ನಾಲ್ಕು ದಿನಗಳ ಕಾಲ ಪ್ರವಾಸವನ್ನು ಆಯೋಜಿಸಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳಿಂದ 5 ತಂಡಗಳ ಸಿಂಗಾಪುರ ಪ್ರವಾಸ ಈಗಾಗಲೇ ಪೂರ್ಣಗೊಂಡಿದ್ದು, ಸಿಂಗಪೂರಕ್ಕೆ ತೆರಳುತ್ತಿರುವ ಆರನೇ ತಂಡ ಇದಾಗಿದೆ.
ಈ ಪ್ರವಾಸದಲ್ಲಿ ಒಟ್ಟು 39 ಪೌರ ಕಾರ್ಮಿಕರು, ಮೂವರು ಅಧಿಕಾರಿಗಳು ತೆರಳಲಿದ್ದಾರೆ.


ಬಿಬಿಎಂಪಿ, ಪೌರಾಡಳಿತ ಹಾಗೂ ಸಮಾಜ ಕಲ್ಯಾಣ ಇಲಾಖೆ ಬುಧವಾರ ಆಯೋಜಿಸಿದ್ದ ಸಮಾರಂಭದಲ್ಲಿ ಮುಖ್ಯಮಂತ್ರಿಯವರು ವಿದೇಶ ಪ್ರವಾಸಕ್ಕೆ ಹೊರಟಿರುವ ಪೌರ ಕಾರ್ಮಿಕರಿಗೆ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೇಯರ್ ಸಂಪತ್ ರಾಜ್, ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್, ಸಚಿವ ಈಶ್ವರ್ ಖಂಡ್ರೆ, ಸಚಿವ ರಮನಾಥ್ ರೈ, ಸರ್ಕಾರದ ಮುಖ್ಯಕಾರ್ಯಧರ್ಶಿ ಸುಭಾಷ್ ಚಂದ್ರ ಕುಂಟೀಯಾ ಉಪಸ್ಥಿತರಿದ್ದರು.