ಬೆಂಗಳೂರು : ಬಿಬಿಎಂಪಿ ಕರಡು ಮತದಾರರ ಪಟ್ಟಿಯ ಪರಿಷ್ಕರಣೆಗೆ ಸಂಬಂಧಿಸಿದಂತೆ ಹಕ್ಕು ಮತ್ತು ಆಕ್ಷೇಪಣೆಗಳ ಪರಿಶೀಲನೆ ಹಾಗೂ ಕರಡು ಮತದಾರ ಪಟ್ಟಿಯನ್ನು ಸಿದ್ದಪಡಿಸಿರುವ ಸಂಬಂಧ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಬಸವರಾಜು ಮತ್ತು ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ರವರು ಇಂದು ಪೂರ್ವ ವಲಯದ ಶಿವಾಜಿನಗರ, ಪುಲಕೇಶಿ ನಗರ ಹಾಗೂ ಶಾಂತಿನಗರ ವಿಧಾನಸಾಭಾ ಕ್ಷೇತ್ರಗಳಲ್ಲಿ ಮತದಾರರ ನೋಂದಣಾಧಿಕಾರಿಗಳ ಕಛೇರಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.


COMMERCIAL BREAK
SCROLL TO CONTINUE READING

ಕರಡು ಮತದಾರ ಪಟ್ಟಿಯ ಬಗ್ಗೆ ಹಾಗೂ ವಾರ್ಡ್ ವಾರು ಗಡಿ ರೇಖೆ ಗುರುತಿಸಿರುವ ಬಗ್ಗೆ ರಾಜಕೀಯ ಪಕ್ಷಗಳು/ನಾಗರಿಕರಿಗೆ ಸರಿಯಾದ ಮಾಹಿತಿಯನ್ನು ಒದಗಿಸಬೇಕು. ಜೊತೆಗೆ ಮತದಾರರ ಪಟ್ಟಿಯ ಬಗ್ಗೆ ಏನಾದರು ಆಕ್ಷೇಪಣೆಗಳು ಬಂದಲ್ಲಿ ಕೂಡಲೆ ಅದನ್ನು ಪರಿಶೀಲಿಸಿ ಸರಿಪಡಿಸಿಕೊಳ್ಳುವುದಿದ್ದಲ್ಲಿ ಕೂಡಲೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದರು.


ದೂರುಗಳು ಬಾರದಂತೆ ಕ್ರಮ


ಕರಡು ಮತದಾರರ ಪರಿಷ್ಕರಣೆ ಮಾಡುತ್ತಿರುವ ಬಗ್ಗೆ ನಾಗರಿಕರಿಗೆ ಮಾಹಿತಿ ನೀಡಬೇಕು. ಈ ಸಂಬಂಧ ಮತದಾರ ನೋಂದಣಾಧಿಕಾರಿಗಳು ಸೂಕ್ತ ಕ್ರಮಗಳನ್ನು ಕೈಗೊಂಡು ನಾಗರಿಕರಿಗೆ ಮಾಹಿತಿಯನ್ನು ತಿಳಿಸಬೇಕು. ಚುನಾವಣೆ ಸಂದರ್ಭದಲ್ಲಿ ಯಾವುದೇ ರೀತಿಯ ದೂರುಗಳು ಬರಬಾರದಂತೆ ಈಗಲೇ ಮತದಾರರ ಪಟ್ಟಿಯನ್ನು ಸರಿಪಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. 


ಮತದಾರರ ಪಟ್ಟಿ ಸಮಸ್ಯೆಗೂ ಕಡಿವಾಣ


ಒಂದೇ ಕುಟುಂಬದ ಮತಗಳು ಗಡಿಭಾಗದಲ್ಲಿ ಎರಡು ವಾರ್ಡ್ ಗೆ ಬೇರ್ಪಡದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಆ ರೀತಿ ಬೇರ್ಪಟ್ಟಿದ್ದಲ್ಲಿ ಕೂಡಲೆ ಅದನ್ನು ಸರಿಪಡಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರುಗಳಿವೆಯೇ/ಇಲ್ಲವೇ ಎಂಬುದನ್ನು ಕೂಡಾ ಪರಿಶೀಲಿಸಿಕೊಳು ಅಧಿಕಾರಿಗಳಿಗೆ ಸೂಚಿಸಲಾಯ್ತು.
 
ಈ ವೇಳೆ ಅಪರ ಜಿಲ್ಲಾ ಚುನಾವಣಾ ಅಧಿಕಾರಿ(ಕೇಂದ್ರ) ಹಾಗೂ ವಿಶೇಷ ಆಯುಕ್ತರಾದ ರಂಗಪ್ಪ, ವಲಯ ಆಯುಕ್ತರಾದ ರವೀಂದ್ರ, ವಲಯ ಜಂಟಿ ಆಯುಕ್ತರಾದ ಶಿಲ್ಪಾ, ಸಹಾಯಕ ಆಯುಕ್ತರಾದ ಉಮೇಶ್, ಇ.ಆರ್.ಒ ಹಾಗೂ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತಿ ವಹಿಸಿದ್ದಾರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.