ಅತಿವೇಗದ ಚಾಲನೆ : ವಾಹನ ಅಪಘಾತದಲ್ಲಿ ಕರಡಿ ಸಾವು: ಪರಿಸರ ವನ್ಯಜೀವಿ ಸಂರಕ್ಷಣಾ ವೇದಿಕೆ ಆಕ್ರೋಶ

ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಅಪಘಾತದಲ್ಲಿ ಕರಡಿಯೊಂದು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಗಿನ ಜಾವ ಸಂಭವಿಸಿದೆ. 

Written by - Yashaswini V | Last Updated : Jul 26, 2025, 12:17 PM IST
  • ಅತೀ ವೇಗದ ವಾಹನ ಚಾಲನೆಗೆ ಕರಡಿ ಬಲಿ
  • ಇಂದು ಮುಂಜಾನೆ ಸಂಭವಿಸಿರುವ ಅಪಘಾತ
  • ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕು ರಾಂಪುರ ಸಮೀಪ ಸಂಭವಿಸಿರುವ ರಸ್ತೆ ಅಪಘಾತ
ಅತಿವೇಗದ ಚಾಲನೆ : ವಾಹನ ಅಪಘಾತದಲ್ಲಿ ಕರಡಿ ಸಾವು: ಪರಿಸರ ವನ್ಯಜೀವಿ ಸಂರಕ್ಷಣಾ ವೇದಿಕೆ ಆಕ್ರೋಶ

Bear Death in Accident: ಜುಲೈ 26ರ ಬೆಳಗಿನ ಜಾವ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ  ಆರೇಳು ವರ್ಷದ ಗಂಡು ಕರಡಿ ತೀವ್ರ ರಕ್ತಸ್ರಾವದಿಂದ ಧಾರುಣವಾಗಿ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕು ರಾಂಪುರ ಸಮೀಪದ ಗ್ರ್ಯಾಂಡ್ ಹೋಟೆಲ್ ಎದುರು ಸಂಭವಿಸಿದೆ. 

Add Zee News as a Preferred Source

ಬೆಂಗಳೂರು ಟು ಬಳ್ಳಾರಿ ಮಾರ್ಗದಲ್ಲಿ ರಾತ್ರಿ ವಾಹನ ಸವಾರರು ಸೂಚನ ಫಲಕಗಳಿದ್ದರೂ ಅತೀ ವೇಗವಾಗಿ ವಾಹನ ಚಲಾಯಿಸುತ್ತಾರೆ. ಈ ರೀತಿ ವೇಗದ ಚಾಲನೆಯಿಂದಾಗಿ ಅಪರಿಚಿತ ವಾಹನ ಕರಡಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ತೀವ್ರವಾಗಿ ಗಾಯಗೊಂಡಿದ್ದ ಕರಡಿ ಸ್ಥಳದಲ್ಲೇ ಸಾವನ್ನಪ್ಪಿದ್ದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆಯು ತೀವ್ರ  ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ- ಮದ್ಯಪಾನ ಮಾಡಿ ಶಾಲೆಯಲ್ಲೇ ನಿದ್ದೆಗೆ ಜಾರಿದ ಮುಖ್ಯಶಿಕ್ಷಕ: ಪೋಷಕರ ಆಕ್ರೋಶ

ಚಿತ್ರದುರ್ಗದ ಮೊಳಕಾಲ್ಮೂರು ತಾಲೂಕು ಕಾಯ್ದಿಟ್ಟ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತೆ ಇರುವ ಗುಡ್ಡ ಪ್ರದೇಶವಾಗಿದೆ. ಇಲ್ಲಿ ಸುತ್ತಮುತ್ತ ಬೃಹತ್ ಕಲ್ಲು ಬಂಡೆಗಳ ಗುಡ್ಡಗಾಡು ಇರುವುದರಿಂದ ವನ್ಯಜೀವಿಗಳು ಒಂದೆಡೆಯಿಂದ ಮತ್ತೊಂದೆಡೆ ಓಡಾಡುವುದು ಸರ್ವೇ ಸಾಮಾನ್ಯವಾದ ಸಂಗತಿಯಾಗಿದೆ. ಈ ರೀತಿಯಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಒಂದು ಕಡೆಯಿಂದ ಮತ್ತೊಂದು ಕಡೆಗೆ ದಾಟುವಾಗ ವೇಗವಾಗಿ ಬಂದು ಡಿಕ್ಕಿ ಹೊಡೆದಿರುವ ವಾಹನ ಅಪಘಾತದ ರಭಸಕ್ಕೆ ಮೂಕ ಪ್ರಾಣಿಯೊಂದು ಕೊನೆಯುಸಿರೆಳೆದಿದೆ ಎನ್ನಲಾಗುತ್ತಿದೆ. 

ಇದನ್ನೂ ಓದಿ- ಇತಿಹಾಸದಲ್ಲಿಯೇ ಮೊದಲ ಬಾರಿಗೆ ಅಂತರಾಷ್ಟ್ರೀಯ ಪ್ರಾಣಿಗಳ ವಿನಿಮಯ...

ಮತ್ತೊಂದೆಡೆ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಚಿರತೆ, ಕರಡಿ, ಜಿಂಕೆ ಇನ್ನಿತರ ಕಾಡುಪ್ರಾಣಿಗಳು ರಸ್ತೆ ಅಪಘಾತಕ್ಕೆ ಸಿಲುಕಿ ಮೃತಪಡುತ್ತಿರುವುದು ಆತಂಕ ಮೂಡಿಸಿದೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರ ಮಾಲತೇಶ್ ಅರಸ್,  ಪ್ರಧಾನ ಕಾರ್ಯದರ್ಶಿ ಟಿ.ರುದ್ರಮುನಿ, ಉಪಾಧ್ಯಕ್ಷರಾದ ಓಂಕಾರಪ್ಪ,  ಕಾನೂನು ಸಲಹೆಗಾರರಾದ ಶಿವಮೂರ್ತಿ  ಆಕ್ರೋಶ ವ್ಯಕ್ತಪಡಿಸಿದ್ದಾರೆ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News