ಚಾಮರಾಜನಗರ: ಗ್ರಾಮಸ್ಥರ ನಿದ್ದೆಗೆಡಿಸಿದ್ದ ಕರಡಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಸೆರೆಯಾಗಿರುವ ಘಟನೆ ಹನೂರು ತಾಲೂಕಿನ ಅಜ್ಜಿಪುರ ಗ್ರಾಮದಲ್ಲಿ ನಡೆದಿದೆ.


COMMERCIAL BREAK
SCROLL TO CONTINUE READING

ಆಹಾರ ಅರಸಿ ಕಾಡಿನಿಂದ ನಾಡಿಗೆ ಬಂದಿದ್ದ ಜಾಂಬವಂತ ಕಳೆದ ಶನಿವಾರ ಹನೂರು ತಾಲೂಕಿನ ಅಜ್ಜಿಪುರ ಗ್ರಾಮದ ಪೆಟ್ಟಿಗೆ ಅಂಗಡಿಗಳ ಮೇಲೆ ದಾಳಿ ನಡೆಸಿ ಅಲ್ಲಿದ್ದ ಮೊಟ್ಟೆ, ಹಣ್ಣು ತಿಂದು, ಧ್ವಂಸ ಮಾಡಿ ಹೋಗಿತ್ತು.‌ ಅದರ, ದಾಂಧಲೆ ಸಿಸಿಟಿವಿಯಲ್ಲೂ ಸೆರೆಯಾಗಿತ್ತು.


ಇದನ್ನೂ ಓದಿ- ಹದಗೆಟ್ಟ ರಸ್ತೆಗೆ ಡಾಂಬಾರು... ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಈ ಮೂರು ದಿನ ನೋ ಎಂಟ್ರಿ!!


ಕಳೆದ ನಾಲ್ಕು ದಿನಗಳಿಂದ ಅರಣ್ಯ ಇಲಾಖೆ ಅಧಿಕಾರಿಗಳು ಕರಡಿ ಹಿಡಿಯಲು ಅಜ್ಜಿಪುರ ಗ್ರಾಮದ ಹೊರವಲಯದಲ್ಲಿ ಬೋನನ್ನು ಇಟ್ಟು ಕರಡಿ ಸೆರೆಗೆ  ಸತತ ಪ್ರಯತ್ನಪಟ್ಟಿದ್ದರು. ಅದರಂತೆ ಆಹಾರ ಅರಸಿ ಬಂದ ಜಾಂಬವಂತ ಬೋನಿನಲ್ಲಿ ಸೆರೆಯಾಗಿದೆ.


ಇದನ್ನೂ ಓದಿ- ಕುಡತಿನಿ ಭೂ ಸಂತ್ರಸ್ತರ ಪ್ರತಿಭಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದನೆ; ಡಿ.14ರಂದು ಸಿಎಂ ಸಭೆ


ನಿಟ್ಟಿಸಿರು ಬಿಟ್ಟ ಗ್ರಾಮಸ್ಥರು: 
ಕಳೆದ ಶನಿವಾರ ರಾತ್ರಿ ಕರಡಿಯು ಗ್ರಾಮದ ಪೆಟ್ಟಿಗೆ ಅಂಗಡಿಗಳಿಗೆ ನುಗ್ಗಿ ಆಹಾರ ಪದಾರ್ಥಗಳನ್ನು ತಿಂದು ನಾಶಗೊಳಿಸಿದ ನಂತರ ಸುತ್ತಮುತ್ತಲ ಗ್ರಾಮದ ಜನರಲ್ಲಿ  ಭಯದ ವಾತಾವರಣವನ್ನು ಉಂಟು ಮಾಡಿತ್ತು. ಕರಡಿ ಗ್ರಾಮಕ್ಕೆ ಬಂದು ಪೆಟ್ಟಿಗೆ ಅಂಗಡಿಗಳ ಮೇಲೆ ದಾಳಿ ನಡೆಸುವ ಚಿತ್ರಣ ಸಿಸಿಟಿವಿಯಲ್ಲಿ ಸೆರೆಯಾದ ಚಿತ್ರಣವನ್ನು ನೋಡಿ  ರಾತ್ರಿ ವೇಳೆ ಗ್ರಾಮಸ್ಥರು ಓಡಾಡುವುದಕ್ಕೂ ಭಯಪಟ್ಟಿದ್ದರು. ಈಗ ಕರಡಿ ಬೋನಿಗೆ ಬಿದ್ದ ಹಿನ್ನೆಲೆಯಲ್ಲಿ ಭಯದ ವಾತಾವರಣದಲ್ಲಿದ್ದ  ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಸೆರೆಯಾದ ಕರಡಿಯನ್ನು ಸುರಕ್ಷಿತವಾಗಿ ಮತ್ತೇ ಕಾಡಿಗೆ ಬಿಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.