ಚಾಮರಾಜನಗರ: ಹೌದು..., ಹನೂರು ತಾಲೂಕಿನ ಬಿ.ಜಿ ದೊಡ್ಡಿ ಗ್ರಾಮದ ಷಡಕ್ಷರಿ ಎಂಬುವವರು ತಮ್ಮ ಜಮೀನಿನಲ್ಲಿ ಒಂದೂವರೆ  ಬೀಟ್ರೂಟ್ ನ್ನು ಬಿತ್ತನೆ ಮಾಡಿದ್ದರು. ಆದರೆ, ಈಗ ಮೂಲಂಗಿ ರೀತಿ ಬೀಟ್ರೂಟ್ ಬೆಳೆದಿದ್ದು ರೈತನಿಗೆ ದಿಕ್ಕು ತೋಚದೇ ಕಂಗಲಾಗಿದ್ದಾರೆ.


COMMERCIAL BREAK
SCROLL TO CONTINUE READING

ಒಡೆಯರಪಾಳ್ಯ ಗ್ರಾಮದ ನಾಗಜ್ಯೋತಿ ಆಗ್ರೋ ಸೆಂಟರ್ ನಲ್ಲಿ 9,800 ರೂ. ಕೊಟ್ಟು  ಸಾಕಾಟಾ ಎಂಬ ಕಂಪನಿಯ ಬೀಟ್ರೂಟ್ ಬೀಜ ಖರೀದಿಸಿ  ಒಂದುವರೆ ಎಕರೆಯಲ್ಲಿ ಬೀಟ್ರೂಟ್ ಬಿತ್ತಿದ್ದು ಬೀಟ್ರೂಟ್ ಬೆಳೆಯದೆ ಮೂಲಂಗಿ ಬಂದಿರುವುದರಿಂದ 5 ಲಕ್ಷ ಆದಾಯದ ನೀರಿಕ್ಷೆಯಲ್ಲಿದ್ದ ರೈತ ಷಡಕ್ಷರಿ ಕಂಗಾಲಾಗಿದ್ದಾರೆ.


ಇದನ್ನೂ ಓದಿ-Ganesh Chaturthi: ಏಕಗವಾಕ್ಷಿ ಕೇಂದ್ರ, ಮೊಬೈಲ್ ಟ್ಯಾಂಕ್ ಸ್ಥಾಪನೆಗೆ ಮುಂದಾದ ಬಿಬಿಎಂಪಿ 


ಆಗ್ರೋ ಸೆಂಟರ್, ಬೀಜ ಕಂಪನಿ ಟೋಪಿ..?
ಈ ಬಗ್ಗೆ ರೈತ ಆಗ್ರೋ ಸೆಂಟರ್ ಮಾಲೀಕನಿಗೆ ತಿಳಿಸಿದರೆ  ಸಮಸ್ಯೆಯನ್ನು ಬಗೆಹರಿಸುವ ಬದಲು ಏಕವಚನದಲ್ಲಿ ನಿಂದಿಸಿ ಕಳುಹಿಸಿದ್ದಾರೆ ಎಂದು ರೈತ ಆರೋಪಿಸುತ್ತಿದ್ದಾರೆ.  ಇನ್ನು ಸಂಬಂಧಪಟ್ಟ ಸಾಕಾಟಾ ಕಂಪನಿ ಜಮೀನಿಗೆ ಬಂದು ಪರಿಶೀಲನೆ ಮಾಡಿ ತೆರಳಿದರೂ ಯಾವುದೇ ಪರಿಹಾರ ನೀಡುವ ಬಗ್ಗೆ ಮಾತು ಆಡುತ್ತಿಲ್ಲ. ಕಳೆದ ವರ್ಷ ಅತಿ ಹೆಚ್ಚು ಮಳೆ ಬಿದ್ದು ಬೆಳೆದಿದ್ದ ಬೆಳೆಯಲ್ಲ ಕೊಳೆತು ಹೋಗಿ ನಷ್ಟ ಉಂಟಾಗಿತ್ತು. ಈ ಬಾರಿ ಇರುವಷ್ಟು ನೀರಿನಲ್ಲಿ ಬೆಳೆದಿದ್ದ ಬೀಟ್ರೂಟ್ ಮೂಲಂಗಿ ಆಗಿರುವುದು ನಮ್ಮನ್ನು ಇನ್ನಷ್ಟು ಸಂಕಷ್ಟಕ್ಕೆ ತಳ್ಳಿದೆ. ಸಂಬಂಧಪಟ್ಟ ಅಧಿಕಾರಿಗಳು ನನಗೆ ಸೂಕ್ತ ಪರಿಹಾರ ಕೊಡಿಸಬೇಕು ಇಲ್ಲದಿದ್ದರೆ ಸಾಲದ ಸುಳಿಯಲ್ಲಿ ಸಿಲುಕಿ ಪ್ರಾಣವನ್ನು ಕಳೆದುಕೊಳ್ಳಬೇಕಾಗುತ್ತದೆ ಎಂದು  ರೈತ ಷಡಕ್ಷರಿ ಅಳಲು ತೋಡಿಕೊಂಡಿದ್ದಾರೆ. 


ಒಟ್ಟಿನಲ್ಲಿ ಕಳಪೆ ಬೀಜದಿಂದ ರೈತನ ಬದುಕು ಮೂರಾಬಟ್ಟೆಯಾಗಿದ್ದು ಈ ಸಂಬಂಧ ತೋಟಗಾರಿಕೆ ಇಲಾಖೆ ಸೂಕ್ತ ಕ್ರಮ ವಹಿಸಬೇಕಿದೆ.


ಇದನ್ನೂ ಓದಿ-₹7,660 ಕೋಟಿ ಮೌಲ್ಯದ 91 ಹೂಡಿಕೆ ಪ್ರಸ್ತಾವನೆಗಳಿಗೆ ರಾಜ್ಯ ಸರ್ಕಾರ ಅನುಮೋದನೆ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.