ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿದ ಬಳ್ಳಾರಿ ಪ್ರಾಧ್ಯಾಪಕರು..!

ವಿಶ್ವದ ಪ್ರತಿಷ್ಠಿತ ಅಮೆರಿಕದ ಸ್ಟಾನ್ಫೊರ್ಡ್ ವಿಶ್ವವಿದ್ಯಾಲಯ ವಾರ್ಷಿಕವಾಗಿ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.

Written by - Manjunath N | Last Updated : Sep 20, 2024, 07:56 PM IST
  • ವಿಜ್ಞಾನಿಗಳನ್ನು ಸಂಶೋಧನೆಗೆ ಸಂಬಂಧಿಸಿದ ವಿವಿಧ ವರ್ಗಗಳಲ್ಲಿ ವಿಂಗಡಿಸಿ ಪಟ್ಟಿ ಅಂತಿಮಗೊಳಿಸಿದೆ.
  • ವಿಶ್ರೀಕೃವಿವಿ ಕುಲಸಚಿವ ರುದ್ರೇಶ್.ಎಸ್.ಎನ್., ಪ್ರಾಧ್ಯಾಪಕರುಗಳು, ಸಿಬ್ಬಂದಿ, ಕುಟುಂಬ ವರ್ಗ ಅಭಿನಂದಿಸಿದ್ದಾರೆ.
 ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನಗಿಟ್ಟಿಸಿದ ಬಳ್ಳಾರಿ ಪ್ರಾಧ್ಯಾಪಕರು..! title=

ಬಳ್ಳಾರಿ: ವಿಶ್ವದ ಪ್ರತಿಷ್ಠಿತ ಅಮೆರಿಕದ ಸ್ಟಾನ್ಫೊರ್ಡ್ ವಿಶ್ವವಿದ್ಯಾಲಯ ವಾರ್ಷಿಕವಾಗಿ ಪ್ರಕಟಿಸುವ ಜಗತ್ತಿನ ಖ್ಯಾತ ವಿಜ್ಞಾನಿಗಳ ಪಟ್ಟಿಯಲ್ಲಿ ಬಳ್ಳಾರಿ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಮೂವರು ಪ್ರಾಧ್ಯಾಪಕರು ಸ್ಥಾನ ಪಡೆದಿದ್ದಾರೆ.

ವಿವಿಯ ಗಣಿತಶಾಸ್ತ್ರ ವಿಭಾಗದ ಹಿರಿಯ ಪ್ರಾಧ್ಯಾಪಕ ಮತ್ತು ಕೊಪ್ಪಳ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ.ಕೆ.ವಿ.ಪ್ರಸಾದ್ ಮತ್ತು ಗಣಿತಶಾಸ್ತç ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥರಾದ ಪ್ರೊ.ಹನುಮೇಶ್ ವೈದ್ಯ ಅವರು ಸತತ ಎರಡನೇ ಬಾರಿ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಗಣಿತಶಾಸ್ತç ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಅಶ್ವಿನ್ ಪಿ. ಇದೇ ಮೊದಲ ಬಾರಿ ಸ್ಥಾನ ಪಡೆದಿದ್ದಾರೆ. ಒಟ್ಟಾರೆ ವಿವಿಯ ಮೂವರು ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ- ಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ 

ವಿಶ್ವದರ್ಜೆಯ ಗುಣಮಟ್ಟದ ಸಂಶೋಧನಾ ಲೇಖನಗಳನ್ನು ವೆಬ್ ಆಫ್ ಸೈನ್ಸ್, ಸ್ಕೋಪಸ್, ಗೂಗಲ್ ಸ್ಕಾಲರ್, ಹೆಚ್ ಇಂಡೆಕ್ಸ್, ಇಂಪ್ಯಾಕ್ಟ್ ಫ್ಯಾಕ್ಟರ್, ಸೈಟೇಷನ್ ಹೀಗೆ ಹಲವಾರು ಸಂಯೋಜಿತ ಮಾನದಂಡಗಳನ್ನು ಆಧರಿಸಿ ವಿಶ್ವದ ಉತ್ತಮ ಸಂಶೋಧಕರನ್ನು ಗುರುತಿಸಿ ವಾರ್ಷಿಕವಾಗಿ ಸ್ಟಾö್ಯನ್‌ಫೋರ್ಡ್ ವಿಶ್ವವಿದ್ಯಾಲಯವು ಪಟ್ಟಿ ಬಿಡುಗಡೆ ಮಾಡುತ್ತದೆ.

ಇದನ್ನೂ ಓದಿ- ಮೋದಿ ತಾಯಿಯವರ ಅವಹೇಳನ ಬಿಜೆಪಿಯವರು ಸಹಿಸಬಹುದು, ನಾವು ಸಹಿಸುವುದಿಲ್ಲ : ಡಿಕೆ ಸುರೇಶ್

ಗುಣಮಟ್ಟದ ಸಂಶೋಧನಾ ಲೇಖನಗಳನ್ನು ಪ್ರಕಟಿಸಲು ಹೆಸರುವಾಸಿಯಾಗಿರುವ ಎಲ್ಸ್ವೀಯರ್ ಸಂಸ್ಥೆ ಸಹಭಾಗಿತ್ವದಲ್ಲಿ ಸ್ಟಾö್ಯನ್‌ಫೋರ್ಡ್ ವಿಶ್ವವಿದ್ಯಾಲಯವು ಕಳೆದ ವಾರ ಪಟ್ಟಿ ಬಿಡುಗಡೆ ಮಾಡಿದೆ. ಪ್ರಪಂಚದ ಒಟ್ಟು ಸಂಶೋಧನಕಾರರಲ್ಲಿ ಶೇ. 2 ರಷ್ಟು ಖ್ಯಾತನಾಮ ವಿಜ್ಞಾನಿಗಳನ್ನು ಸಂಶೋಧನೆಗೆ ಸಂಬಂಧಿಸಿದ ವಿವಿಧ ವರ್ಗಗಳಲ್ಲಿ ವಿಂಗಡಿಸಿ ಪಟ್ಟಿ ಅಂತಿಮಗೊಳಿಸಿದೆ.

ಮೂವರು ಪ್ರಾಧ್ಯಾಪಕರ ಸಾಧನೆಗೆ ಬಳ್ಳಾರಿ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಎಂ.ಮುನಿರಾಜು, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ.ಬಿ.ಕೆ.ರವಿ, ವಿಶ್ರೀಕೃವಿವಿ ಕುಲಸಚಿವ ರುದ್ರೇಶ್.ಎಸ್.ಎನ್., ಪ್ರಾಧ್ಯಾಪಕರುಗಳು, ಸಿಬ್ಬಂದಿ, ಕುಟುಂಬ ವರ್ಗ ಅಭಿನಂದಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

 

 

Trending News