ಬೆಂಗಳೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಬಿಡುಗಡೆ ವಿರೋಧಿಸಿ ವಿವಿಧ ಕನ್ನಡಪರ ಸಂಘಟನೆಗಳು ಸೋಮವಾರ ಬೆಂಗಳೂರು ಬಂದ್‍ಗೆ ಕರೆ ನೀಡಿವೆ. ಬೆಂಗಳೂರು ಬಂದ್‍ ವೇಳೆ ಭದ್ರತೆಗಾಗಿ ನಿಯೋಜನೆಗೊಂಡಿದ್ದ ಪೊಲೀಸರಿಗೆ ತಂದಿದ್ದ ಊಟದಲ್ಲಿ ಇಲಿ ಪತ್ತೆಯಾಗಿದೆ.


COMMERCIAL BREAK
SCROLL TO CONTINUE READING

ಹೌದು, ಬಂದೋಬಸ್ತ್ ಗೆ ಬಂದಿದ್ದ ಪೊಲೀಸರಿಗೆ ನೀಡಿದ ಊಟದಲ್ಲಿ ಇಲಿ ಪತ್ತೆಯಾಗಿದೆ. ಯಶವಂತಪುರದಲ್ಲಿ ಬಂದೋಬಸ್ತ್‍ನಲ್ಲಿದ್ದ ಸಂಚಾರಿ ಪೊಲೀಸರಿಗೆ ಕೊಟ್ಟಿದ್ದ ಊಟದಲ್ಲಿ ಇಲಿ ಪತ್ತೆಯಾಗಿದೆ. ಹೀಗಾಗಿ ಪೊಲೀಸ್ ಇಲಾಖೆ ವಿರುದ್ಧ ಅನೇಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: 2,000 ರೂಪಾಯಿ ನೋಟಿನ ಬಗ್ಗೆ ಆರ್ ಬಿಐ ಹೊಸ ಅಪ್ಡೇಟ್ ! ನೀವು  ತಿಳಿದುಕೊಳ್ಳಲೇ ಬೇಕಾದ ಮಾಹಿತಿ 


ಸಿಬ್ಬಂದಿಗೆ ಇಲಿ ಇದ್ದ ಊಟ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಸಂಚಾರಿ ಕಮಿಷನರ್ ಗರಂ ಆಗಿದ್ದಾರೆ. ಪೊಲೀಸ್ ಸಿಬ್ಬಂದಿಗೆ ಊಟ ಸಪ್ಲೈ ಮಾಡಿದವರಿಗೆ ಎ.ಎನ್.ಅನುಚೇತ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಊಟದಲ್ಲಿ ಇಲಿ ಕೊಟ್ಟ ಹೋಟೆಲ್ ಮೇಲೆ ಕ್ರಿಮಿನಲ್ ಕೇಸ್ ಹಾಕಲಾಗಿದೆ.


ಈ ವಿಚಾರವಾಗಿ ಯಶವಂತಪುರ ಸಂಚಾರ ಮತ್ತು ಟ್ರಾಫಿಕ್ ಇನ್ಸ್ ಪೆಕ್ಟರ್‍ಗಳಿಗೆ ನೋಟಿಸ್ ನೀಡಲಾಗಿದೆ. ಅಶೋಕ್ ಟಿಫಿನ್ ಸೆಂಟರ್ ಒಟ್ಟು 180 ಊಟ ಕೊಟ್ಟಿತ್ತು. ಪೊಲೀಸ್ ಸಿಬ್ಬಂದಿಗೆ ನೀಡುವ 2 ಹೊತ್ತಿನ ಊಟಕ್ಕೆ ರಾಜ್ಯ ಸರ್ಕಾರ 200 ರೂ. ನೀಡುತ್ತದೆ. ಗುಣಮಟ್ಟದ ಊಟ ಏಕೆ ನೀಡಿಲ್ಲವೆಂದು ಅಧಿಕಾರಿಗಳ ಮೇಲೆ ಅನುಚೇತ್ ಗರಂ ಆಗಿದ್ದಾರೆ. ಸದ್ಯ ಅದೃಷ್ಟವಶಾತ್ ಯಾರೂ ಕಳಪೆ ಊಟ ಸೇವಿಸಿಲ್ಲ. ಒಂದು ವೇಳೆ ಇಲಿ ಇದ್ದ ಊಟ ಸೇವಿಸಿದ್ರೆ ಅನಾಹುತ ಆಗೋ ಸಾಧ್ಯತೆ ಇತ್ತು ಎಂದು ಹೇಳಲಾಗಿದೆ.


ಇದನ್ನೂ ಓದಿ: ಕಾವೇರಿ ವಿಚಾರದಲ್ಲಿ ಬಿಜೆಪಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ-ಜನರ ಹಿತದೃಷ್ಟಿಯಿಂದ ಅಲ್ಲ: ಸಿಎಂ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.