ಬೆಂಗಳೂರು: ಜೂನ್ ಮೊದಲ ವಾರದಲ್ಲಿ ಎಂಎಲ್‌ಸಿ ಚುನಾವಣೆ ಹಾಗೂ ಲೋಕಸಭೆ ಚುನಾವಣೆ ಮತ ಎಣಿಕೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮದ್ಯ ಮಾರಾಟ ಸ್ಥಗಿತಗೊಳ್ಳಲಿದೆ. ನಗರದ ಅಬಕಾರಿ ಇಲಾಖೆ ಹಾಗೂ ವ್ಯಾಪಾರ ಸಂಸ್ಥೆಗಳಿಗೆ ಬಿಸಿ ಮುಟ್ಟಿಸುವ ನಿರೀಕ್ಷೆ ಇದೆ. ಕರ್ನಾಟಕದಲ್ಲಿ ಜೂನ್ 1 ಮತ್ತು ಜೂನ್ (ಜೂನ್ 5 ಹೊರತುಪಡಿಸಿ) ನಡುವೆ ಮದ್ಯವನ್ನು ಮಾರಾಟ ಮಾಡುವಂತಿಲ್ಲ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 2024 ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ಕಾವ್ಯ ಹಸ್ತಪ್ರತಿ ಆಹ್ವಾನ


ಮಾಧ್ಯಮಗಳ ವರದಿಯ ಪ್ರಕಾರ, ಮದ್ಯ ಮಾರಾಟ ನಿಷೇಧದಿಂದಾಗಿ ಅಬಕಾರಿ ಇಲಾಖೆಯು ಪ್ರತಿದಿನ ₹ 100 ಕೋಟಿ ಆದಾಯವನ್ನು ಕಳೆದುಕೊಳ್ಳುವ ನಿರೀಕ್ಷೆಯಿದೆ.ಹೀಗಾಗಿ  ಅಬಕಾರಿ ಆಯುಕ್ತರಿಗೆ ಪತ್ರ ಬರೆದಿರುವ ಬೃಹತ್ ಬೆಂಗಳೂರು ಹೋಟೆಲ್ ಮಾಲೀಕರ ಸಂಘ (ಬಿಬಿಎಚ್‌ಎ) “ಜೂನ್ 4 ರ ಸಂಜೆಯಿಂದ ಮತ ಎಣಿಕೆ ಮುಗಿದ ನಂತರ ಮದ್ಯ ಮಾರಾಟಕ್ಕೆ ಅವಕಾಶ ನೀಡುವಂತೆ ನಾವು ವಿನಂತಿಸುತ್ತೇವೆ" ಎಂದು ಮನವಿ ಮಾಡಿದೆ.ಆದರೆ ಸಂಘದ ಮನವಿಗೆ ಅಬಕಾರಿ ಇಲಾಖೆ ಇನ್ನೂ ಸ್ಪಂದಿಸಿಲ್ಲ ಎನ್ನಲಾಗಿದೆ.


ಇದನ್ನೂ ಓದಿ: ಕೈಗೆಟುಕುವ ಬೆಲೆಯಲ್ಲಿ ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ಮತ್ತೊಂದು ಎಲೆಕ್ಟ್ರಿಕ್ ಸ್ಕೂಟರ್


ಏತನ್ಮಧ್ಯೆ, ಬೆಂಗಳೂರಿನ ಅನೇಕ ರೆಸ್ಟೋರೆಂಟ್ ಬಾರ್‌ಗಳು ಶುಷ್ಕ ದಿನಗಳಲ್ಲಿ ತೆರೆಯಬೇಕೆ ಎಂದು ನಿರ್ಧರಿಸುತ್ತಿವೆ. ಮದ್ಯದಿಂದಲೇ ಹೆಚ್ಚಿನ ಆದಾಯ ಬರುವುದರಿಂದ, ಮದ್ಯ ನೀಡದೆ ಕಾರ್ಯಾಚರಣೆ ವೆಚ್ಚವನ್ನು ವಸೂಲಿ ಮಾಡಲು ಮಾಲೀಕರು ಚಿಂತಿಸುತ್ತಿದ್ದಾರೆ.ತಿಂಗಳ ಆರಂಭದಲ್ಲಿ ಐದು ಡ್ರೈ  ದಿನಗಳ ಹಿನ್ನೆಲೆಯಲ್ಲಿ ಅವರು ತಮ್ಮ ವ್ಯವಹಾರದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.


ಶಿಕ್ಷಕರು ಮತ್ತು ಪದವೀಧರರಿಂದ ಚುನಾಯಿತರಾದ ಆರು ಎಂಎಲ್‌ಸಿಗಳಿಗೆ ಕರ್ನಾಟಕ ವಿಧಾನ ಪರಿಷತ್ತಿನ ಚುನಾವಣೆ ಜೂನ್ ಮೊದಲ ವಾರದಲ್ಲಿ ನಡೆಯಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.