ಬೆಂಗಳೂರು: ಬೆಂಗಳೂರಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದೆ. ಕುಡಿಯುವ ನೀರು ಸೇರಿದಂತೆ ಮನಬಳಕೆಗೆ ನೀರಿನ ಕೊರತೆಯುಂಟಾಗಿದೆ. ಹೀಗಾಗಿ ಅನಗತ್ಯವಾಗಿ ನೀರು ಪೋಲು ಮಾಡದಂತೆ ಬಿಬಿಎಂಪಿ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಅನಗತ್ಯವಾಗಿ ಕಾವೇರಿ ನೀರನ್ನು ಬಳಸದಂತೆ ಬೆಂಗಳೂರಿನ ಜನತೆಗೆ ಜಲಮಂಡಳಿ ಖಡಕ್‌ ಸೂಚನೆ ನೀಡಿದೆ.


COMMERCIAL BREAK
SCROLL TO CONTINUE READING

ಅನಗತ್ಯವಾಗಿ ನೀರು ಬಳಕೆ ಮಾಡುವವರಿಗೆ ದಂಡ ವಿಧಿಸಿ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಲಾಗಿದೆ. ಕಾರು, ಬೈಕ್‌ ತೊಳೆಯುವುದು ಸೇರಿದಂತೆ ಅನಗತ್ಯ ಕೆಲಸಕ್ಕೆ ಹೆಚ್ಚು ನೀರು ಬಳಸುವಂತಿಲ್ಲವೆಂದು ನಿಯಮ ಜಾರಿಗೆ ತರಲಾಗಿದೆ. ಆದರೆ ಜಲಮಂಡಳಿಯ ಈ ನಿಯಮವನ್ನು ಉಲ್ಲಂಘಿಸಿ ಮನೆ ಮುಂದೆ ಬೈಕ್ ತೊಳೆಯುತ್ತಿದ್ದ ವ್ಯಕ್ತಿಗೆ 5,000 ರೂ. ದಂಡ ವಿಧಿಸಲಾಗಿದೆ.


ಇದನ್ನೂ ಓದಿ: ಕಾಂಗ್ರೆಸ್ ಭಯೋತ್ಪಾದಕರಿಗೆ ಬಿರಿಯಾನಿ ಕೊಟ್ಟು ಸಾಕುತ್ತಿತ್ತು: ಯೋಗಿ ಆದಿತ್ಯನಾಥ್


ಜಲಕ್ಷಾಮದ ಮಧ್ಯೆ ಎಚ್ಚರಿಕೆ ವಹಿಸದೆ ಕುಡಿಯುವ ನೀರಿನಲ್ಲಿ ಬೈಕ್ ತೊಳೆಯುತ್ತಿದ್ದ ವ್ಯಕ್ತಿಗೆ ದಂಡ ಹಾಕಲಾಗಿದೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ. 


ರಾಜ್ಯ ರಾಜಧಾನಿಯಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಿದ್ದು, ಜನಸಾಮಾನ್ಯರಿಗೆ ಇನ್ನಿಲ್ಲದ ಸಂಕಷ್ಟ ಎದುರಾಗಿದೆ. ಮಳೆ ಬಾರದ ಹಿನ್ನೆಲೆ ರಾಜ್ಯದಲ್ಲಿ ಹೊಳೆ, ಕೆರೆ-ಕಟ್ಟೆಗಳು ಬತ್ತಿ ಹೋಗಿದ್ದು, ಜಲ ಸಂಕಷ್ಟ ಎದುರಾಗಿದೆ. ಹೀಗಾಗಿ ತುಂಬಾ ಎಚ್ಚರಿಕೆಯಿಂದ ನೀರು ಬಳಕೆ ಮಾಡುವಂತೆ ಸಲಹೆ ನೀಡಲಾಗಿದೆ. 


ಇದನ್ನೂ ಓದಿ: ಮತದಾನ ಜಾಗೃತಿ ಕಾರ್ಯಕ್ರಮ : ರಾಷ್ಟ್ರ ಮುನ್ನೆಡಸಲು ಮತ ಚಲಾಯಿಸಿ, ಚುನಾವಣಾ ರಾಯಭಾರಿ ನಟ ರಮೇಶ್ ಅರವಿಂದ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.