Bengaluru News: ಕಾವೇರಿ ಮೊದಲ ಮತ್ತು ಎರಡನೇ ಹಂತದ ಜಲರೇಚಕ ಯಂತ್ರಗಾರಗಳ ದುರಸ್ಥಿ ಹಾಗೂ ಕವಾಟಗಳ ದುರಸ್ಥಿ ಕಾಮಗಾರಿ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ಹಲವು ಪ್ರದೇಶಗಳಲ್ಲಿ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಮಾಹಿತಿ ನೀಡಿದೆ. 


COMMERCIAL BREAK
SCROLL TO CONTINUE READING

ಸಿಲಿಕಾನ್ ಸಿಟಿಯ ಯಾವ್ಯಾವ ಪ್ರದೇಶಗಳಲ್ಲಿ ಇಂದು ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ? 
ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನೀಡಿರುವ ಮಾಹಿತಿಯ ಪ್ರಕಾರ ಇಂದು ನಗರದ ನೇತಾಜಿ ನಗರ, ನಾಗಮ್ಮ ನಗರ, ಕೇಶವ ನಗರ, ಕೆ.ಪಿ.ಅಗ್ರಹಾರ, ರಾಘವೇಂದ್ರ ಕಾಲೋನಿ, ಟಿಪ್ಪುನಗರ, ಆನಂದಪುರ, ಚಾಮರಾಪೇಟೆ, ರಾಮಚಂದ್ರ ಅಗ್ರಹಾರ, ಆದರ್ಶನಗರ, ಕನ್ನೀರ್‌ ಕಾಲೋನಿ, ನಂಜಾಂಬ ಅಗ್ರಹಾರ, ವಾಲ್ಮೀಕಿ ನಗರ, ವಿ. ಎಸ್. ಗಾರ್ಡನ್, ಹರಿಕುಂಟೆ, ಪಾದರಾಯನಪುರ ಪ್ಲವರ್ ಗಾರ್ಡನ್, ಬನ್‌ಗೈ ಕಾಲೋನಿ, ಆಂಜನಪ್ಪ ಗಾರ್ಡನ್, ಬಿನ್ನಿ ಲೇಔಟ್, ನ್ಯೂ ಬಿನ್ನಿ ಲೇಔಟ್, ವಿದ್ಯಾಪೀಠ, ಶ್ರೀನಿವಾಸ ನಗರ, ಬ್ಯಾಂಕ್ ಕಾಲೋನಿ, ಐಟಿಐ ಲೇಔಟ್, ಗುರುರಾಜ್ ಲೇಔಟ್, ವಿವೇಕಾನಂದ ನಗರ, ಕಾದಿಮಿಷನ್ ಲೇಔಟ್, ಕತ್ರಿಗುಪ್ಪೆ, ತ್ಯಾಗರಾಜನಗರ, ಬಸವನಗುಡಿ. ಶಾಸ್ತ್ರೀನಗರ, ಎನ್. ಆರ್. ಕಾಲೋನಿ, ಬೈರಪ್ಪ ಬ್ಲಾಕ್‌, ಮೌಂಟ್ ಜಾಯ್ ಎಕ್ಸ್ ಟೆಕ್ಷನ್, ಅಶೋಕ್ ನಗರ, ಬನಂಶಂಕರಿ ಒಂದನೇ ಹಂತ, ಶ್ರೀನಗರ, ಬೃಂದಾವನನಗರ, ಸುಂಕೇನಹಳ್ಳಿಯಲ್ಲಿ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. 


ಇದನ್ನೂ ಓದಿ- ಕಾವೇರಿ ಜಲಾನಯನ ಪ್ರದೇಶದಲ್ಲಿ ಕುಗ್ಗಿದ ಮಳೆ ಪ್ರಮಾಣ


ಕುಮಾರಸ್ವಾಮಿ ಲೇಔಟ್‌ 1ನೇ ಹಂತ ಮತ್ತು 2 ನೇ ಹಂತ ಇಸ್ರೋ ಲೇಔಟ್, ಸಮೃದ್ಧಿ ಲೇಔಟ್, ಲಿಯಾಸ್ ನಗರ, ರಾಜ್ಯೋತ್ಸವ ನಗರ, ವಿಠಲ್ ನಗರ, ಶಾಂತಲಾ ನಗರ, ಶಾಂತಿನಗರ, ವಿನಾಯಕನಗರ, ಆನೆಪಾಳ್ಯ, ಎಲ್. ಆರ್. ನಗರ, ಅಂಬೇಡ್ಕರ್ ನಗರ, ನೀಲಸಂದ್ರ ಆಸ್ಮಿನ್ ಟೌನ್. ಈಜೀಪುರ, ವಿವೇಕ್ ನಗರ, ಅಶೋಕ್ ನಗರ, ರಿಚ್‌ಮಂಡ್ ಟೌನ್, ಎಂಜಿ ರೋಡ್, ಬ್ರಿಗೇಡ್ ರಸ್ತೆ, ಜೆ.ಕೆ ಪುರಂ, ಎಂ.ವಿ ಗಾರ್ಡನ್, ವಿಕ್ಟೋರಿಯಾ ಲೇಔಟ್ ಮಾಯಾ ಬಜಾರ್, ದೊಮ್ಮಲೂರು, ದೊಮ್ಮಲೂರು ವಿಲೇಜ್, ದೊಮ್ಮಲೂರು ಲೇಔಟ್, ಕಮಾಂಡ್ ಆಸ್ಪತ್ರೆ, ದೊಮ್ಮಲೂರು 2ನೇ ಹಂತ, ಇದಲ್ಲದೆ ಎಚ್‌ಎಎಲ್‌ ಎರಡನೇ ಹಂತ, ಕಾರ್ಪೋರೇಷನ್ ಕ್ವಾರ್ಟರ್ಸ್, ಅಮರಜ್ಯೋತಿ ಲೇಔಟ್, ಕೊಡಿಹಳ್ಳಿ, ಗಂಗಾಧರ್ ಚಿಟ್ಟೆ ರಸ್ತೆ, ಹನುಮಂತಪ್ಪ ಲೇಔಟ್, ಹಲಸೂರು, ಬಜಾರ್ ಸ್ಟ್ರೀಟ್, ಜೋಗು ಪಾಳ್ಯ, ಮರ್ಫಿ ಟೌನ್ ಪ್ರದೇಶಗಳಲ್ಲೂ ಕೂಡ ಇಂದು ಕಾವೇರಿ ನೀರು ಬರುವುದಿಲ್ಲ. 


ಇದನ್ನೂ ಓದಿ- ರಾಜ್ಯದಲ್ಲಿ 2000 ಕೋಟಿ ಹೂಡಿಕೆಗೆ ಟಾಟಾ ಟೆಕ್ನಾಲಜೀಸ್ ಪ್ರಸ್ತಾವ: ಎಂ.ಬಿ ಪಾಟೀಲ


ಇದಲ್ಲದೆ, ಹಲಸೂರಿಗೆ ಹೊಂದಿಕೊಂಡಂತೆ ಇರುವ ಕೇಂಬ್ರಿಡ್ಜ್ ಲೇಔಟ್ ನಲ್ಲಿಯೂ ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಮಾತ್ರವಲ್ಲ, ನಗರದ ಗೌತಮಪುರ, ರಾಜೇಂದ್ರ ನಗರ, ಧೀನಬಂಧುನಗರ, ವೆಂಕಟಸ್ವಾಮಿ ರೆಡ್ಡಿ ಲೇಔಟ್, ನಂಜಪ್ಪ ರೆಡ್ಡಿ ಲೇಔಟ್, ಮಲ್ಲಪ್ಪ ರೆಡ್ಡಿ ಲೇಔಟ್, ಎನ್.ಆರ್.ಡಿ.ಐ, ಕೆ.ಆರ್. ನಂಜಪ್ಪ ಲೇಔಟ್, ಆಡುಗೋಡಿ, ಕ್ಯಾಂಪಸ್, ಪೋಲಿಸ್ ಕ್ಯಾಟರ್ಸ್, ಕಾವೇರಿ ಸಂಕೀರ್ಣ, ನಂದಿ ಸಂಕೀರ್ಣ 1 ರಿಂದ 32 ಬ್ಲಾಕ್‌ಗಳು, ನೇತ್ರಾವತಿ 1 ರಿಂದ 10 ಬ್ಲಾಕ್‌ಗಳು ಮತ್ತು ಟಿಪ್ಪು ಬ್ಲಾಕ್‌ಗಳು, ಕೋರಮಂಗಲ 6 ನೇ 7 ನೇ ಬ್ಲಾಕ್‌, ಕೆ.ಆರ್.ಗಾರ್ಡನ್, ಕೆ.ಹೆಚ್.ಬಿ ಕಾಲೋನಿ, ಜಾನ್ ನಗರ, ಕೋರಮಂಗಲ ವಿಲೇಜ್, ಕೋರಮಂಗಲ 8ನೇ ಬ್ಲಾಕ್, ಪಾರ್‌ಸಿಯಲ್ ಎನ್‌.ಜಿ.ವಿ, ಜಯನಗರ 3ನೇ ಬ್ಲಾಕ್‌, 4ನೇ ಬ್ಲಾಕ್‌ ಮತ್ತು 4ನೇ 'ಟಿ' ಬ್ಲಾಕ್ ನಲ್ಲಿಯೂ ಕೂಡ ಇಂದು ಕಾವೇರಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿದುಬಂದಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/38l6m8543Vk?feature=share
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.