ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೀದಿ ನಾಯಿಗಳ ದಾಳಿಗೆ ವೃದ್ಧೆಯೊಬ್ಬರು ಬಲಿಯಾಗಿದ್ದಾರೆ. ವಾಕಿಂಗ್ ಹೋಗಿದ್ದ ವೃದ್ದೆಯ ಮೇಲೆ 10 ರಿಂದ 12 ಬೀದಿ ನಾಯಿಗಳ ಗುಂಪು ದಾಳಿ ಮಾಡಿವೆ. ವೃದ್ದೆಯನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.


COMMERCIAL BREAK
SCROLL TO CONTINUE READING

ಗಂಗಮ್ಮನಗುಡಿ ಪೊಲೀಸ್ ಠಾಣಾ ವ್ಯಾಪ್ತಿಯ ಜಾಲಹಳ್ಳಿ ವಾಯುಸೇನೆ ನೆಲೆಯ ಏಳನೇ ವಸತಿ ಗೃಹಗಳ ಕ್ಯಾಂಪ್ ನಲ್ಲಿ ಇಂದು ಮುಂಜಾನೆ ಘಟನೆ ನಡೆದಿದ್ದು, ರಾಜ್ ದುಲಾರಿ ಸಿನ್ಹಾ  (76) ಮೃತಪಟ್ಟ ವೃದ್ಧೆಯಾಗಿದ್ದಾರೆ. ನಿವೃತ್ತಿ ಶಿಕ್ಷಕಿಯಾಗಿದ್ದ ಸಿನ್ಹಾ ಇಂದು ಬೆಳಗ್ಗೆ ವಾಯುನೆಲೆ ಆವರಣದಲ್ಲಿ ವಾಕಿಂಗ್ ಮಾಡುವಾಗ ಏಕಾಏಕಿ ನಾಯಿಗಳು ಅಟ್ಯಾಕ್ ಮಾಡಿವೆ. 


ಇದನ್ನೂ ಓದಿ:ಸಿಎ ಸೈಟ್ ಹಗರಣ; ದೇಶಕ್ಕೆ ಉಪದೇಶ ಕೊಡುವ ಪ್ರಿಯಾಂಕ ಖರ್ಗೆ ಉತ್ತರ ಕೊಡಲಿ: ಎಚ್‌ಡಿ‌ಕೆ


ನಾಯಿಗಳ ದಾಳಿಯಿಂದ ಗಂಭೀರ ಗಾಯಗೊಂಡಿದ್ದು, ಕೂಡಲೇ ಎಂ.ಎಸ್.ರಾಮಯ್ಯ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತ ವೃದ್ಧೆಯ ಅಳಿಯ ಜಾಲಹಳ್ಳಿಯ ವಾಯುನೆಲೆಯಲ್ಲಿ ಕೆಲಸ ಮಾಡುತ್ತಿದ್ದು, ಇವರು ನೀಡಿದ ದೂರಿನ ಮೇರೆಗೆ ಗಂಗಮ್ಮನಗುಡಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಇನ್ನೂ ಬಿಬಿಎಂಪಿ ಬೀದಿ ನಾಯಿಗಳ ಹಾವಳಿಯನ್ನು ನಿಯಂತ್ರಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.