ಚಾಮರಾಜನಗರ: ಭಾರತ್ ಜೋಡೋ ಯಾತ್ರೆಯಲ್ಲಿ ಪೇ ಸಿಎಂ‌ ಎಂದು ಟೀ ಶರ್ಟ್ , ಧ್ವಜ ಹಿಡಿದು ಓಡಾಡುತ್ತಿದ್ದ ಯುವಕನನ್ನು ಯಾತ್ರೆ ವೇಳೆ ಹಿಡಿದ ಪೊಲೀಸರು ನಡುರಸ್ತೆಯಲ್ಲೇ ಟೀ ಶರ್ಟ್ ಬಿಚ್ಚಿಸಿದರು.


COMMERCIAL BREAK
SCROLL TO CONTINUE READING

ಟೀ ಶರ್ಟ್ ಬಿಚ್ಚುತ್ತಿರುವಾಗ ಪೊಲೀಸ್ ಸಿಬ್ಬಂದಿ ಒಬ್ಬರು ಆತನ ತಲೆಗೆ, ಬೆನ್ನಿಗೆ ಹೊಡೆಯುವುದು ವೀಡಿಯೋದಲ್ಲಿ ಸೆರೆಯಾಗಿದ್ದು ಸದ್ಯ ಅಕ್ಷಯ್ ನನ್ನು ಚಾಮರಾಜನಗರ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.


ರಾಹುಲ್ ಯಾತ್ರೆಯಲ್ಲಿ ಈತ  ಪೇಸಿಎಂ ಟೀ ಶರ್ಟ್ ಧರಿಸಿ, ಪೇ ಸಿಎಂ ಎಂಬ ಬಾವುಟ ಹಿಡಿದು ಅಕ್ಷಯ್ ಕುಮಾರ್ ಹೆಜ್ಜೆ ಹಾಕುತ್ತಿದ್ದರ ಸಂಬಂಧ ಚಾಮರಾಜನಗರ ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಯುವಕನನ್ನು ಕಂಡ ಕೂಡಲೇ ದಾಳಿ ಮಾಡಿದ ಪೊಲೀಸರು ಕಾಂಗ್ರೆಸ್ ಕಾರ್ಯಕರ್ತರ ಎದುರಲ್ಲೇ ಯುವಕನಿಗೆ ಥಳಿಸಿ ಪೇಸಿಎಂ ಬಾವುಟ ಕಿತ್ತುಕೊಂಡು ಟೀ ಶರ್ಟ್ ಬಿಚ್ಚಿಸಿದ್ದಾರೆ.


Thawar Chand Gehlot : ರಾಜ್ಯಪಾಲ ಗೆಹ್ಲೋಟ್‌ಗೆ ಕೊರೋನಾ ಸೋಂಕು ದೃಢ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.