ಹಾಸನ(ಹರದನಹಳ್ಳಿ) : 2018ರ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದಾರೆ ಎಂದು ರೇವಣ್ಣ ಪತ್ನಿ ಭವಾನಿ ರೇವಣ್ಣ ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ಹಾಸನದ ಹರದನಹಳ್ಳಿಯಲ್ಲಿ ಇಂದು ಸುದ್ಧಿಗಾರರೊಂದಿಗೆ ಮಾತನಾಡಿದ ಭವಾನಿ ರೇವಣ್ಣ, 2018ರ ವಿಧಾನಸಭಾ ಚುನಾವಣೆಯಲ್ಲಿ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲು ದೇವೇಗೌಡರು ಹಸಿರು ನಿಶಾನೆ ತೋರಿಸಿದ್ದಾರೆ. ಆದರೆ, ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದು ಇನ್ನೂ ನಿಶ್ಚಯವಾಗಿಲ್ಲ ಅದನ್ನೂ ದೇವೇಗೌಡರೇ ನಿರ್ಧರಿಸಲಿದ್ದಾರೆ ಎಂದು ತಿಳಿಸಿದರು.


ಜೆಡಿಎಸ್ ರಾಷ್ಟ್ರಾಧ್ಯಕ್ಷ ಹಾಗೂ ಮಾಜಿ ಪ್ರಧಾನಿ ದೇವೇಗೌಡರು, ತಮ್ಮ ಕುಟುಂಬದಿಂದ ಇಬ್ಬರು ಮಾತ್ರ ಸ್ಪರ್ಧಿಸುತ್ತಾರೆ ಎಂದು ಹೇಳಿದ್ದರು. ಕಳೆದ ವಾರ ಭವಾನಿ ರೇವಣ್ಣ ಸಹ ದೇವೇಗೌಡರ ಮಾತೇ ಅಂತಿಮ, ಮುಂದಿನ ಚುನಾವಣೆಯಲ್ಲಿ ಪ್ರಜ್ವಲ್ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದರು. ಇದೀಗ ಭವಾನಿ ರೇವಣ್ಣ ತಮ್ಮ ಮಗನ ಸ್ಪರ್ಧೆ ಬಗ್ಗೆ ಖಚಿತಪಡಿಸಿರುವುದು ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. 


ಅಲ್ಲದೆ, ಪ್ರಜ್ವಲ್ ಸ್ಪರ್ಧಿಸಲು ಬೇಲೂರು, ರಾಜರಾಜೇಶ್ವರಿ ಕ್ಷೇತ್ರದ ವಾತಾವರಣ ಚೆನ್ನಾಗಿದೆ ಎಂದೂ ಸಹ ಭವಾನಿ ತಿಳಿಸಿದ್ದಾರೆ.