ಬೆಂಗಳೂರು, ಜು.18: ಸ್ಥಗಿತಗೊಂಡಿರುವ ಬೀದರ್ – ಬೆಂಗಳೂರು ನಾಗರಿಕ ವಿಮಾನಯಾನ ಪುನಾರಂಭಿಸುವ ಕುರಿತಂತೆ ವಿವಿಧ ವಿಮಾನಯಾನ ಸೇವೆ ಪೂರೈಕೆದಾರರೊಂದಿಗೆ ಚರ್ಚಿಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ. ಪಾಟೀಲ್ ಸ್ಪಷ್ಟ ಸೂಚನೆ ನೀಡಿದ್ದಾರೆ.


COMMERCIAL BREAK
SCROLL TO CONTINUE READING

ಬೀದರ್ ಉಸ್ತುವಾರಿ ಮತ್ತು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಮತ್ತು ಪೌರಾಡಳಿತ ಸಚಿವ ರಹೀಂ ಖಾನ್ ಅವರೊಂದಿಗೆ ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಸಚಿವರು ಈ ಸೂಚನೆ ನೀಡಿದರು.


ಇದನ್ನೂ ಓದಿ:ಹೊಸ ಮೆಟ್ರೋ ಮಾರ್ಗಗಳು ಡಬಲ್ ಡೆಕ್ಕರ್ ಮಾದರಿಯಲ್ಲಿ ನಿರ್ಮಾಣ: ಡಿಸಿಎಂ


ಈಶ್ವರ ಖಂಡ್ರೆ ಮಾತನಾಡಿ, ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ಸೇರಿದ ಗಡಿ ಜಿಲ್ಲೆ ಬೀದರ್ ಗೆ ವಿಮಾನಯಾನ ಸೇವೆ ಕಲ್ಪಿಸಬೇಕು ಎಂಬ ಜನರ ಹೋರಾಟಕ್ಕೆ ಮಣಿದು 2020ರಲ್ಲಿ ಭಾರತೀಯ ವಾಯುಪಡೆಗೆ ಸೇರಿದ ವಿಮಾನ ನಿಲ್ದಾಣದಲ್ಲಿಯೇ ನಾಗರಿಕ ವಿಮಾನಯಾನ ಸೇವೆ ಆರಂಭಿಸಲಾಗಿತ್ತು. ಸ್ಥಗಿತಗೊಂಡಿದ್ದ ವಿಮಾನಯಾನ ಮತ್ತೆ 2022ರಲ್ಲಿ ಪುನಾರಂಭವಾಗಿತ್ತು. ಈಗ ಮತ್ತೆ ಕಳೆದ ಡಿಸೆಂಬರ್ ನಿಂದ ಸಂಪೂರ್ಣ ಸ್ಥಗಿತಗೊಂಡಿದೆ.


ಇದನ್ನೂ ಓದಿ: ತುಂಗಭದ್ರಾ ಜಲಾಶಯಕ್ಕೆ ಹೆಚ್ಚಿದ ಒಳ ಹರಿವು :ಇಂದಿನಿಂದ ನಾಲೆಗಳಿಗೆ ನೀರು ಹರಿಸಲು ಸೂಚನೆ


ಸೇವಾ ಪೂರೈಕೆದಾರ ಸಂಸ್ಥೆಗಳು, ತಮಗೆ ಉಡಾನ್ ಸಬ್ಸಿಡಿ ನಿಲ್ಲಿಸಿರುವ ಕಾರಣ ವಿಮಾನ ಸೇವೆ ಒದಗಿಸಲು ಸಾಧ್ಯವಿಲ್ಲ. ಮತ್ತೆ ಸಬ್ಸಿಡಿ ನೀಡುವುದಾದರೆ ಸೇವೆ ಒದಗಿಸಲು ಸಿದ್ಧ ಎನ್ನುತ್ತಿವೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದಿಂದಲೇ ಸಬ್ಸಿಡಿ ಹಣ ಭರಿಸುವ ಕುರಿತಂತೆ ವಿಮಾನಯಾನ ಸೇವಾ ಪೂರೈಕೆದಾರರೊಂದಿಗೆ ಮಾತುಕತೆ ನಡೆಸಿ, ಜಿಲ್ಲೆಯ ಜನರಿಗೆ ಅಗ್ಗದ ದರದಲ್ಲಿ  ನಾಗರಿಕ ವಿಮಾನಯಾನ ಸೇವೆ ಪುನಾರಂಭಿಸಬೇಕು ಎಂದು ಹೇಳಿದರು.


ಇದಕ್ಕೆ ಸ್ಪಂದಿಸಿದ ಎಂ.ಬಿ. ಪಾಟೀಲ್, ಬೀದರ್ ಮತ್ತು ಬೆಂಗಳೂರು ನಡುವೆ ವಿಮಾನಯಾನ ಸೇವೆ ಪುನಾರಂಭಿಸುವ ಕುರಿತಂತೆ 72 ಆಸನಗಳ ಚಿಕ್ಕ ವಿಮಾನಯಾನ ಸೇವೆ ಒದಗಿಸುವ ವಿವಿಧ ಕಂಪನಿಗಳ ಜೊತೆಯಲ್ಲಿ ಮಾತುಕತೆ ನಡೆಸಿ 2 ವಾರಗಳ ಒಳಗಾಗಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.ಸಭೆಯಲ್ಲಿ ಇಲಾಖೆಯ ಕಾರ್ಯದರ್ಶಿ ಡಾ. ಎನ್. ಮಂಜುಳಾ ಮತ್ತಿತರರು ಪಾಲ್ಗೊಂಡಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.