ಬೆಂಗಳೂರು : "ಬಿಹಾರ ಚುನಾವಣೆಯಲ್ಲಿ ಏನೇ ಫಲಿತಾಂಶ ಬಂದರೂ ಮತದಾರರ ತೀರ್ಪಿಗೆ ನಾನು ತಲೆಬಾಗುತ್ತೇವೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ಬಿಹಾರ ಚುನಾವಣಾ ಫಲಿತಾಂಶದ ಬಗ್ಗೆ ಕೇಳಿದಾಗ, "ಜನ ತಮ್ಮ ಆದೇಶ ನೀಡಿದ್ದು, ಅದನ್ನು ಪಾಠವಾಗಿ ಪರಿಗಣಿಸುತ್ತೇವೆ. ಮುಂದಿನ ಬಾರಿ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟಕ್ಕೆ ಹೊಸ ತಂತ್ರಗಾರಿಕೆ ರೂಪಿಸುತ್ತೇವೆ" ಎಂದು ತಿಳಿಸಿದರು.
ಇದನ್ನೂ ಓದಿ : ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ
ಬಿಹಾರದಲ್ಲಿ ಎನ್ ಡಿಎ ಸರ್ಕಾರ ಮಹಿಳೆಯರ ಖಾತೆಗೆ 10 ಸಾವಿರ ಹಣ ಹಾಕಿದ್ದು, ಮಹಿಳೆಯರ ಮತ ಪ್ರಮಾಣ 11% ಏರಿಕೆಯಾಗಿದೆ. ಇದು ಫಲಿತಾಂಶಕ್ಕೆ ಕಾರಣವೇ ಎಂದು ಕೇಳಿದಾಗ, "ನಾನು ಇನ್ನು ವಿವರವಾಗಿ ಪರಿಶೀಲನೆ ಮಾಡುತ್ತೇನೆ. ಆನಂತರ ಪ್ರತಿಕ್ರಿಯೆ ನೀಡುತ್ತೇನೆ" ಎಂದು ತಿಳಿಸಿದರು.
ತುಂಗಭದ್ರಾ ಐಸಿಸಿ ಸಭೆ ಬಗ್ಗೆ ಮಾತನಾಡಿದ ಅವರು "ತುಂಗಭದ್ರಾ ಅಣೆಕಟ್ಟಿನ ಗೇಟ್ ಗಳ ದುರಸ್ಥಿ ನಡೆಯುವವರೆಗೂ ಇರುವ ನೀರನ್ನು ಹೇಗೆ ಸದುಪಯೋಗಪಡಿಸಿಕೊಳ್ಳಬೇಕು ಎಂಬ ವಿಚಾರದ ಬಗ್ಗೆ ಅವರಿಗೆ ತೀರ್ಮಾನ ಮಾಡಲು ಬಿಟ್ಟಿದ್ದೇವೆ. ಉಳಿದಂತೆ ಕಾಲುವೆಗಳ ದುರಸ್ಥಿ ಕಾಮಗಾರಿ ಕೈಗೆತ್ತಿಕೊಳ್ಳಲು ತೀರ್ಮಾನಿಸಿದ್ದೇವೆ" ಎಂದು ತಿಳಿಸಿದರು.
ಇದನ್ನೂ ಓದಿ : ಅನಾಥಯಾಯ್ತು ಪರಿಸರ ಲೋಕ.. ವೃಕ್ಷಮಾತೆ ಸಾಲು ಮರದ ತಿಮ್ಮಕ್ಕ ಇನ್ನಿಲ್ಲ!









