ಬಿಜೆಪಿ ಮತ್ತು ಜೆಡಿಎಸ್‌ನವರು ಕುತಂತ್ರದಿಂದ ಕಾಂಗ್ರೆಸ್ ಸರ್ಕಾರ ಬೀಳಿಸಲು ಹೊರಟಿದ್ದಾರೆ: ಡಿ.ಕೆ.ಶಿವಕುಮಾರ್

ಬಿಜೆಪಿ ಮತ್ತು ಜೆಡಿಎಸ್ ಅವರ ಪಾದಯಾತ್ರೆ ಅವರು ಮಾಡಿದ ಹಗರಣಗಳ ಪಾಪದ ವಿಮೋಚನೆಯ ಯಾತ್ರೆಯೇ ಹೊರತು, ಇದರಿಂದ ಯಾವ ಪ್ರಯೋಜನವೂ ಇಲ್ಲವೆಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಟೀಕಿಸಿದ್ದಾರೆ.

Written by - Puttaraj K Alur | Last Updated : Aug 6, 2024, 11:25 PM IST
  • ಬಿಜೆಪಿ & ಜೆಡಿಎಸ್‌ನವರು ಕುತಂತ್ರದಿಂದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹೊರಟಿವೆ
  • ಇದು ಎಂದಿಗೂ ಸಾಧ್ಯವಿಲ್ಲ, ನಮ್ಮ ಸರ್ಕಾರ ಸುಭದ್ರವಾಗಿರಲಿದೆ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್‌
  • ಯು ಟರ್ನ್ ಹೊಡೆಯುವ ಕುಮಾರಸ್ವಾಮಿಯವರೇ ಮುಡಾದಲ್ಲಿ ನಿಮ್ಮ ಹೆಸರಿರುವ ಬಗ್ಗೆ ನೀವು ಮಾತನಾಡುತ್ತಿಲ್ಲ
ಬಿಜೆಪಿ ಮತ್ತು ಜೆಡಿಎಸ್‌ನವರು ಕುತಂತ್ರದಿಂದ ಕಾಂಗ್ರೆಸ್ ಸರ್ಕಾರ ಬೀಳಿಸಲು ಹೊರಟಿದ್ದಾರೆ: ಡಿ.ಕೆ.ಶಿವಕುಮಾರ್ title=
ದೋಸ್ತಿಗಳ ವಿರುದ್ಧ ಡಿಕೆಶಿ ಆಕ್ರೋಶ!

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್‌ನವರು ಕುತಂತ್ರದಿಂದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹೊರಟಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೇಂದ್ರ ಬಿಜೆಪಿಯ ಷಡ್ಯಂತ್ರ ಹಾಗೂ‌ ಕನ್ನಡಿಗರಿಗೆ ಮಾಡುತ್ತಿರುವ ಅನ್ಯಾಯವನ್ನು ಖಂಡಿಸಿ ಮಂಡ್ಯದ ಮೈಶುಗರ್ ಕಾರ್ಖಾನೆ ಮೈದಾನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಜನಾಂದೋಲನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. 

ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ.. ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ.. ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರವನ್ನು ಬಿಜೆಪಿ ಮತ್ತು ಜೆಡಿಎಸ್‌ನವರು ಕುತಂತ್ರದಿಂದ ಬೀಳಿಸಲು ಹೊರಟಿದ್ದಾರೆ. ಇದು ಎಂದಿಗೂ ಸಾಧ್ಯವಿಲ್ಲ. ನಮ್ಮ ಸರ್ಕಾರ ಸುಭದ್ರವಾಗಿರಲಿದೆ ಎಂದು ಶಿವಕುಮಾರ್‌ ಹೇಳಿದ್ದಾರೆ.

ಇದನ್ನೂ ಓದಿ: ಮೈತ್ರಿ ಪಕ್ಷಗಳ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ಆಕ್ರೋಶ!

ಬಿಜೆಪಿ ಮತ್ತು ಜೆಡಿಎ ಅವರ ಪಾದಯಾತ್ರೆ ಅವರು ಮಾಡಿದ ಹಗರಣಗಳ ಪಾಪದ ವಿಮೋಚನೆಯ ಯಾತ್ರೆಯೇ ಹೊರತು, ಇದರಿಂದ ಯಾವ ಪ್ರಯೋಜನವೂ ಇಲ್ಲ. ಯು ಟರ್ನ್ ಹೊಡೆಯುವ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿಯವರೇ ಮುಡಾದಲ್ಲಿ ನಿಮ್ಮ ಹೆಸರಿರುವ ಬಗ್ಗೆ ನೀವು ಮಾತನಾಡುತ್ತಿಲ್ಲ. ನಮ್ಮ ನಾಯಕರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ನೀವು ಉತ್ತರ ಕೊಡಬೇಕು ಎಂದು ಆಗ್ರಹಿಸಿದ್ದಾರೆ. 

ಕಾಂಗ್ರೆಸ್ ಪಕ್ಷ ಜನಪರ ಉದ್ದೇಶಕ್ಕಾಗಿ ಹಲವು ಪಾದಯಾತ್ರೆಗಳನ್ನು ಮಾಡಿದೆ. ಪ್ರಮುಖವಾಗಿ ನಾವು ನಡೆಸಿದ ಮೇಕೆದಾಟು ಪಾದಯಾತ್ರೆ ನಮ್ಮ ನೀರಿಗಾಗಿ, ನಮ್ಮ ಹಕ್ಕಿಗಾಗಿ, ಕನ್ನಡಿಗರ ಪರವಾಗಿ ನಡೆಸಿದ ಐತಿಹಾಸಿಕ ಯಾತ್ರೆಯಾಗಿದೆ. ನಿಮ್ಮ ಈ ಜನವಿರೋಧಿ ಪಾದಯಾತ್ರೆಯ ವಿರುದ್ದ ನಮ್ಮ ಜನಾಂದೋಲನ ನಿರಂತರವಾಗಿ ನಡೆಯಲಿದೆ ಎಂದು ಡಿಕೆಶಿ ಎಚ್ಚರಿಕೆ ನೀಡಿದ್ದಾರೆ. 

ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಆಕ್ರೋಶ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News