ಬೆಂಗಳೂರು : ರಾಜ್ಯ ವಿಧಾನಪರಿಷತ್ತಿನ ಸದಸ್ಯರಾಗಿದ್ದ ಸಿಎಂ ಇಬ್ರಾಹಿಂ ಅವರ ರಾಜೀನಾಮೆ ಯಿಂದ ತೆರವಾಗಿದ್ದ ಒಂದು ಸ್ಥಾನಕ್ಕೆ ನಡೆಯಬೇಕಾಗಿದ್ದ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಾಬುರಾವ್ ಚಿಂಚನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಸಹಾಯಕ ಚುನಾವಣಾಧಿಕಾರಿ ಹಾಗೂ ರಾಜ್ಯ ವಿಧಾನಸಭೆಯ ಕಾರ್ಯದರ್ಶಿಯಾದ ಶ್ರೀಮತಿ ವಿಶಾಲಾಕ್ಷಿ ಅವರು ಪ್ರಕಟಿಸಿದ್ದಾರೆ.


COMMERCIAL BREAK
SCROLL TO CONTINUE READING

ರಾಜ್ಯ ವಿಧಾನಸಭೆಯ ಸದಸ್ಯರಿಂದ ಆಯ್ಕೆಯಾಗಬೇಕಿದ್ದ ಪರಿಷತ್ ನ ಒಂದು ಸ್ಥಾನಕ್ಕೆ ಆಗಸ್ಟ್ 11 ರಂದು ಚುನಾವಣೆಯನ್ನು ನಿಗಧಿಪಡಿಸಿ ಭಾರತ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿತ್ತು.


ಇದನ್ನೂ ಓದಿ : Tennis Krishna : ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾದ ಖ್ಯಾತ ನಟ ಟೆನ್ನಿಸ್ ಕೃಷ್ಣ! 


ಪರಿಷತ್ ನ ಒಂದು ಸ್ಥಾನಕ್ಕೆ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಬಾಬುರಾವ್ ಚಿಂಚನಸೂರ್ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಇಂದು ನಾಮಪತ್ರ ವಾಪಾಸ್ ತೆಗೆದುಕೊಳ್ಳಲು ಕೊನೆಯ ದಿನವಾಗಿತ್ತು. ಕಣದಲ್ಲಿ ಯಾರು ಇಲ್ಲದ ಕಾರಣ ಏಕೈಕ ಅಭ್ಯರ್ಥಿಯಾಗಿದ್ದ ಬಾಬುರಾವ್ ಚಿಂನಸೂರ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.