ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಬಿಜೆಪಿ ಕಾರ್ಪೋರೇಟರ್ ಪತಿಯನ್ನು ಹಾಡುಹಗಲೇ ದುಷ್ಕರ್ಮಿಗಳು ಕೊಲೆ ಮಾಡಿರುವ ಘಟನೆ ಬುಧವಾರ ನಡೆದಿದೆ. 


COMMERCIAL BREAK
SCROLL TO CONTINUE READING

ಇಂದು ಮಧ್ಯಾಹ್ನ ಇಲ್ಲಿನ ಕಾಟನ್ ಪೇಟೆಯ ಅಂಜನಪ್ಪ ಗಾರ್ಡನ್ ಬಳಿ ಬಿಬಿಎಂಪಿಯ 138ನೇ ವಾರ್ಡ್ ನ ಬಿಜೆಪಿ ಕಾರ್ಪೋರೇಟರ್‌ ರೇಖಾ ಅವರ ಪತಿ ಕದಿರೇಶನ್‌ ಅವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ. 


ಬಿಬಿಎಂಪಿ 138ನೇ ವಾರ್ಡ್ ನ ಕಾರ್ಪೊರೇಟರ್ ರೇಖಾ ಅವರ ಪತಿ ಕದಿರೇಶನ್, ಇತ್ತೀಚೆಗೆ ದೇವಸ್ಥಾನದ ಸಮೀಪ ಗಾಂಜಾ ಹೊಡೆಯಬೇಡಿ ಎಂದು ಕೆಲವು ಯುವಕರಿಗೆ ಬುದ್ಧಿವಾದ ಹೇಳಿದ್ದಾರೆನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.


ಇತ್ತೀಚೆಗೆ ಕದಿರೇಶನ್ ಅವರು ದೇವಸ್ಥಾನದ ಸಮೀಪ ಗಾಂಜಾ ಹೊಡೆಯಬೇಡಿ ಎಂದು ಕೆಲವು ಯುವಕರಿಗೆ ಬುದ್ಧಿವಾದ ಹೇಳಿದ್ದರು ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. 


ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗಾಗಿ ತನಿಖೆ ಆರಂಭಿಸಿದ್ದಾರೆ.