ಬೆಂಗಳೂರು: ಮುಖ್ಯಮಂತ್ರಿಗಳ ಭಾಷಣದ ವಿಡಿಯೋವನ್ನು ಭಾಷಣಕ್ಕೆ ಬೇರೆ ಅರ್ಥ ಬರುವ ರೀತಿಯಲ್ಲಿ ಎಡಿಟ್ ಮಾಡಿ, ಆ ರೀತಿ ತಿರುಚಿದ ವಿಡಿಯೋವನ್ನು ಬಿಜೆಪಿಯ ವಿರುದ್ಧ ಅಪಪ್ರಚಾರ ಮಾಡುವ ದುರುದ್ದೇಶದಿಂದ ಕರ್ನಾಟಕ ಕಾಂಗ್ರೆಸ್ಸಿನ ಅಫಿಷಿಯಲ್ ಸೋಷಿಯಲ್ ಮೀಡಿಯಾ ಪೇಜುಗಳಲ್ಲಿ ಪೋಸ್ಟ್ ಮಾಡಿದೆ ಎಂದು ಆರೋಪಿಸಿ ಈಗ ಕಾಂಗ್ರೆಸಿನ ವಿರುದ್ಧ ಬಿಜೆಪಿ ಕ್ರಿಮಿನಲ್ ದೂರು ಸಲ್ಲಿಸಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ:  ಬ್ಯಾಟ್‌ ಹಿಡಿದು ಬೆವರಿಳಿಸಿದ ಜಾನ್ವಿ ಕಪೂರ್‌ : ಟಿ-20 ವಿಶ್ವಕಪ್‌ಗೆ ಇವಳೇ ಭರವಸೆ..!


ಮುಖ್ಯಮಂತ್ರಿಗಳ ಭಾಷಣವನ್ನು ಅಪರಾಧಿಕವಾಗಿ ತಿರುಚಿ ಎಡಿಟ್ ಮಾಡಿರುವ ಮತ್ತು ಅದನ್ನು ದುರುದ್ದೇಶದಿಂದ ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡಿರುವ ಅಪರಾಧಕ್ಕಾಗಿ ಕರ್ನಾಟಕ ಕಾಂಗ್ರೆಸ್ಸಿನ ಸೋಷಿಯಲ್ ಮೀಡಿಯಾ ಮುಖ್ಯಸ್ಥರು ಮತ್ತು ಸದರಿ ಪೇಜ್ ಗಳ ಅಡ್ಮಿನ್ ಗಳ ವಿರುದ್ಧ ತಕ್ಷಣ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದೇವೆ, ಪೋಲೀಸ್ ಅಧಿಕಾರಿಗಳು ತಕ್ಷಣ ಕ್ರಮ ತೆಗೆದುಕೊಳ್ಳುವ ಭರವಸೆ ಕೊಟ್ಟಿದ್ದಾರೆ ಎಂದು ಬಿಜೆಪಿ ಹೇಳಿದೆ.


ಯಾರದ್ದೋ ಲವ್ ಸ್ಟೋರಿ, ಇನ್ಯಾರದ್ದೋ ಮೇಲಿನ ದ್ವೇಷ : ಬಲಿಯಾಗಿದ್ದು ಅಮಾಯಕ..!


ಬಿಜೆಪಿ ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕರಾದ ಶ್ರೀ ಯೋಗೇಂದ್ರ ಹೊಡಾಘಟ್ಟ ರವರು, ಬೆಂಗಳೂರು ಕೇಂದ್ರ ಜಿಲ್ಲಾ ಸಂಚಾಲಕರು ಹಾಗೂ ದೂರುದಾರರಾದ ಶ್ರೀ ಎಂ. ಯಶವಂತ್ ರವರು, ಶ್ರೀ ಶಿವಕುಮಾರ್ ಯಾದವ್ ರವರು ಇಂದು ಬೆಂಗಳೂರು ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.