ಹುಬ್ಬಳ್ಳಿ: ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತ್ರವಲ್ಲ ಯಾರೂ ಕೂಡ ಅನಿವಾರ್ಯವಲ್ಲ. ಶೆಟ್ಟರನ್ನು ಬಿಜೆಪಿಗೆ ಕರೆತರುವ ಯಾವುದೇ ಪ್ರಯತ್ನವನ್ನು ಮಾಡಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.


COMMERCIAL BREAK
SCROLL TO CONTINUE READING

ಶೆಟ್ಟರ್ ಬಿಜೆಪಿಗೆ ಬರುತ್ತಿದ್ದಾರೇ ಎಂಬುವಂತ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡದ ಶಾಸಕ ಮಹೇಶ ಟೆಂಗಿನಕಾಯಿ, ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ. ನಾನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಶಾಸಕ ಅರವಿಂದ ಬೆಲ್ಲದ ಅವರೊಂದಿಗೆ ಮಾತನಾಡಿದ್ದೇನೆ. ಶೆಟ್ಟರ್ ಕರೆತರುವ ಯಾವುದೇ ಪ್ರಯತ್ನ ಮಾಡಿಲ್ಲ ಎಂಬುದನ್ನು ಅವರು ಸ್ಪಷ್ಟಪಡಿಸಿದ್ದಾರೆ ಎಂದರು. 


ಇದನ್ನೂ ಓದಿ- ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡಿಕೆಗೆ ಚರ್ಚೆ: ಸಚಿವ ಶಿವರಾಜ್ ತಂಗಡಗಿ


ಇನ್ನೂ ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ನಾಯಕರು ಜಗದೀಶ್ ಶೆಟ್ಟರ್ ಭೇಟಿ ಮಾಡಿರುವ ಬಗ್ಗೆ ಮಾತನಾಡಿದ ಅವರು, ಇದೆಲ್ಲಾ ಶುದ್ಧ ಸುಳ್ಳ. ಇಂತಹ ಯಾವುದೇ ಬೆಳವಣಿಗೆ ಕೂಡ ನಡೆದಿಲ್ಲ. ನಮ್ಮ ನಾಯಕರು ಕೂಡ ಎಲ್ಲಿಯೂ ಕೂಡ ಹೇಳಿಲ್ಲ. ಇಂತಹ ಬೆಳವಣಿಗೆ ನಡೆದಿದ್ದೇ ಆದರೇ ಅವರೇ ಬಹಿರಂವಾಗಿ ಹೇಳಲಿ ಎಂದು ಅವರು ಹೇಳಿದರು.


ಇದನ್ನೂ ಓದಿ- ಹೆಣ್ಣು ಭ್ರೂಣ ಹತ್ಯೆ ತಡೆಗೆ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳಲಾಗುವುದು : ಸಚಿವ ದಿನೇಶ್ ಗುಂಡೂರಾವ್


ಇನ್ನೂ ಮೋದಿಯವರ ಭೇಟಿಯ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿರುವ ಅವರು, ಇದೆಲ್ಲವೂ ಕಟ್ಟು ಕಥೆಯಾಗಿದೆ. ನಾವು ಯಾವುದೇ ರೀತಿಯಲ್ಲಿ ಪಕ್ಷ ತೊರೆದು ಹೋದವರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡಿಲ್ಲ. ಒಂದೊಮ್ಮೆ ಅವರು ಪಕ್ಷಕ್ಕೆ ಬಂದಿದ್ದೇ ಆದರೆ ಹೈ ಕಮಾಂಡ್ ನಿರ್ಧಾರಕ್ಕೆ ನಾವು ಬದ್ಧವಾಗಿ ಕೆಲಸ ಮಾಡುತ್ತೇವೆ ಎಂದು ಅವರು ಮಾಹಿತಿ ನೀಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.