ಬೆಂಗಳೂರು: ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕ್ವೀನ್ಸ್‌ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ‘ಕ್ವಿಟ್‌ ಇಂಡಿಯಾ ಚಳವಳಿ’ ದಿನಾಚರಣೆಯಲ್ಲಿ ಮಾತನಾಡಿದ ಅವರು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.


COMMERCIAL BREAK
SCROLL TO CONTINUE READING

ಮಹಾತ್ಮಾ ಗಾಂಧೀಜಿಯವರು ‘ಬ್ರಿಟಿಷರೇ ಭಾರತ ಬಿಟ್ಟು ತೊಲಗಿ’ ಎನ್ನುವ ಹೋರಾಟಕ್ಕೆ 81 ವರ್ಷ ಆಗಿದೆ. ಈಗ ಮತ್ತೆ 8 ದಶಕಗಳ ನಂತರ "ಭಾರತ ಬಿಟ್ಟು ತೊಲಗಿ ಎನ್ನುವ ಹೋರಾಟ" ಮತ್ತೆ ಆರಂಭವಾಗಿದೆ. ಅಂದು ಬ್ರಿಟಿಷರ ವಿರುದ್ದ ಹೋರಾಟ ಮಾಡಿದ್ದೆವು, ಇಂದು ಕೋಮುವಾದಿ, ಸರ್ವಾಧಿಕಾರಿ ಸರ್ಕಾರ ತೊಲಗಿಸಲು ಹೋರಾಟ ಮಾಡಬೇಕಾಗಿದೆ. ಕಾಂಗ್ರೆಸ್‌ ಮುಕ್ತ ಭಾರತ ಮಾಡುತ್ತೇವೆಂದು ಬಿಜೆಪಿಯವರು ಹೇಳುತ್ತಿದ್ದರು. ಈಗ ನೀವೆಲ್ಲಾ ಬಿಜೆಪಿ ಮುಕ್ತ ಭಾರತಕ್ಕೆ ಸಜ್ಜಾಗಬೇಕು’ ಎಂದು ಡಿಕೆಶಿ ಕರೆ ನೀಡಿದರು.


‘ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂದ ನಂತರ ಭಾರತದ ಎಲ್ಲಾ ರಾಜ್ಯಗಳ ಪ್ರಮುಖ ವಿರೋಧ ಪಕ್ಷಗಳ ನಾಯಕರು, ಮುಖ್ಯಮಂತ್ರಿಗಳು  "ಇಂಡಿಯಾ ರಕ್ಷಿಸಿ" ಅಭಿಯಾನಕ್ಕೆ ಬೆಂಗಳೂರು ಸಾಕ್ಷಿಯಾಯಿತು. ಇಡೀ "ಇಂಡಿಯಾ"ಕ್ಕೆ ಕರ್ನಾಟಕ ಆತ್ಮವಿಶ್ವಾಸ ನೀಡಿದೆ. "ಇಂಡಿಯಾ" ಸಭೆಯ ನಂತರ ನಮ್ಮ ಪಕ್ಷದ ಎಲ್ಲಾ ರಾಜ್ಯಗಳ ನಾಯಕರನ್ನು ಕರೆದ ಉನ್ನತ ನಾಯಕರುಗಳು ಕರ್ನಾಟಕ ಮಾದರಿಯನ್ನು ಅನುಕರಿಸಿ ಎಂದು ಹೇಳಿದರು. ಕರ್ನಾಟಕ ಮಾದರಿ ಎಂದರೆ ಏನು? "ಎಲ್ಲಾ ವೈಮನಸ್ಸು , ವ್ಯಕ್ತಿ, ಪ್ರತಿಷ್ಠೆ ಬಿಟ್ಟು, ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ ಎಂದು ದುಡಿಯುವುದೇ" ಕರ್ನಾಟಕ ಮಾದರಿ ಎಂದು ಕಿವಿ ಮಾತು ಹೇಳಿದ್ದಾರೆ, ಇದು ನಮ್ಮ ಹೆಗ್ಗಳಿಕೆ’ ಅಂತಾ ಡಿಕೆಶಿ ಹೇಳಿದರು.


ಇದನ್ನೂ ಓದಿ: ʼನಮ್ಮ ಕ್ಲಿನಿಕ್ʼನ್ನು ನಂ.1 ಆಗಿಸಲು ಆರೋಗ್ಯ ಸಚಿವರ ನ್ಯೂ ಪ್ಲಾನ್‌ : ಶೇ.25 ರಷ್ಟು ಕ್ಲಿನಿಕ್‌ಗಳಿಗೆ ಮೇಜರ್ ಸರ್ಜರಿ


ಕಾಂಗ್ರೆಸ್‌ ಪಕ್ಷವು 136 ಸ್ಥಾನ ಗೆಲ್ಲುತ್ತದೆ ಎಂದು ನಾನು ಹೇಳಿದ್ದೆ. ಆದರೆ ಸುಮಾರು ಜನರು ನಂಬಲಿಲ್ಲ, ವಿರೋಧ ಪಕ್ಷದವರು ಸಮ್ಮಿಶ್ರ ಸರ್ಕಾರ ಬಂದು ಬಿಡುತ್ತದೆ ಎಂದು ಮುಂಚಿತವಾಗಿಯೇ ಕಾಲಿಗೆ ಬಿದ್ದು ಸರ್ಕಾರ ಮಾಡೋಕೆ ತಯಾರಾಗಿದ್ದರು. ಆದರೆ ನನ್ನ ನಂಬಿಕೆ ಸುಳ್ಳಾಗಲಿಲ್ಲ. ಯಾರೋ ನಾಯಕರೊಬ್ಬುರು ಹೇಳ್ತಾ ಇದ್ದರು, ನಾನು ಮಾಟ ಮಂತ್ರ ಮಾಡಿದ್ದೇನೆಂದು. ಕಾರಣ ಮಾಟಮಂತ್ರವಲ್ಲ ಗಾಂಧಿಯವರು ಕಾಂಗ್ರೆಸ್‌ ಅಧ್ಯಕ್ಷರಾಗಿ ಅಧಿಕಾರವಹಿಸಿಕೊಂಡ ಬೆಳಗಾವಿಯ ಕಾಂಗ್ರೆಸ್‌ ಬಾವಿ ಬಳಿ ಪ್ರಜಾಧ್ವನಿ ಯಾತ್ರೆ ಪ್ರಾರಂಭ ಮಾಡಿದ್ದೇವು. ಆ ಬಾವಿಯ ನೀರಿನಿಂದ ರಸ್ತೆ ಸ್ವಚ್ಛಗೊಳಿಸಿ ಈ ರಾಜ್ಯಕ್ಕೆ ಅಂಟಿರುವ ದರಿದ್ರ ಕೊಳೆ ಹೋಗಲಿ ಎಂದು ಕೆಲಸ ಪ್ರಾರಂಭ ಮಾಡಿದೇವು. ಅದರಂತೆ ಬದಲಾವಣೆ ಆಯಿತು’ ಎಂದು ಡಿಕೆಶಿ ಹೇಳಿದ್ದಾರೆ.


ರಾಜೀವ್‌ ಗಾಂಧಿ ಜನ್ಮ ದಿನದಂದು ಗೃಹಲಕ್ಷ್ಮಿ ಯೋಜನೆ: ಆಗಸ್ಟ್‌ 20ರಂದು ಪ್ರತಿಯೊಂದು ಗ್ರಾಮ, ತಾಲೂಕು, ಜಿಲ್ಲಾ ಪಂಚಾಯಿತಿ ಮಟ್ಟದಲ್ಲಿ, ಮಹಾನಗರ ಪಾಲಿಕೆಯ ವಾರ್ಡ್‌ ಮಟ್ಟದಲ್ಲಿ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಸೇರಿಸಿ ಪಕ್ಷಾತೀತವಾಗಿ ಸಂಭ್ರಮಾಚರಣೆ ಮಾಡುವಂತೆ ಸೂಚಿಸಿದ್ದೇವೆ. 1 ಕೋಟಿ 28 ಲಕ್ಷ ಮಹಿಳೆಯರ ಅರ್ಜಿಯನ್ನು ಪರಿಗಣಿಸಿದ್ದೇವೆ ಎಂದು ಡಿಕೆಶಿ ತಿಳಿಸಿದರು.


ಬಿಜೆಪಿ, ಜೆಡಿಎಸ್ ಮತದಾರರ ಹೃದಯ ಗೆಲ್ಲಬೇಕು: ಮುಂದೆ ಲೋಕಸಭಾ ಚುನಾವಣೆ ಇದೆ. ನಮ್ಮ ಯೋಜನೆಗಳ ಲಾಭವನ್ನು ಬಿಜೆಪಿ ಮತದಾರರೂ ಪಡೆಯುತ್ತಿದ್ದಾರೆ. ಅಂತಹವರ ಹೃದಯ ಗೆಲ್ಲಬೇಕು, ಕರ್ನಾಟಕದಲ್ಲಿ ದ್ವೇಷ, ಅಸೂಯೆ ರಾಜಕಾರಣಕ್ಕೆ ಅವಕಾಶವಿಲ್ಲ, ಎಲ್ಲರೂ ನಮ್ಮವರೇ. ಆ ನಿಟ್ಟಿನಲ್ಲಿ ಎಲ್ಲಾ ನಾಯಕರು, ಕಾರ್ಯಕರ್ತರು ಕೆಲಸ ಮಾಡಬೇಕು. ನಮ್ಮ ಗುರಿ ಕೇವಲ 2024 ಮಾತ್ರವಲ್ಲ 2028 ಕೂಡ ಇರಬೇಕು ಎಂದು ಹೇಳಿದರು.


ಇದನ್ನೂ ಓದಿ: ಜಿಂಕೆ ಮರಿ ಮತ್ತು ಗೊರಿಲ್ಲಾ ಮರಿಯ ಮೌನ ಸಂಭಾಷಣೆಯ ವಿಡಿಯೋ


ಪಕ್ಷಕ್ಕಾಗಿ ದುಡಿದವರಿಗೆ ಮಾತ್ರ ಸ್ಥಾನ: ನಿಗಮ ಮಂಡಳಿ ಸೇರಿದಂತೆ ಇತರೇ ಅಧ್ಯಕ್ಷ, ಸದಸ್ಯ ಸ್ಥಾನಗಳಿಗೆ ಯಾರ್ಯಾರನ್ನೋ ನೇಮಕ ಮಾಡುವುದಿಲ್ಲ. ಯಾವ ನಾಯಕರು ಪಕ್ಷಕ್ಕಾಗಿ ದುಡಿದಿದ್ದಾರೋ ಅವರಿಗೆ ಮೊದಲ ಆದ್ಯತೆ ಜೊತೆಗೆ ರಂದೀಪ್‌ ಸುರ್ಜೇವಾಲ ಅವರು ಸೂಚನೆ ನೀಡಿದ್ದಾರೆ. ಬೂತ್‌ ಮಟ್ಟದಲ್ಲಿ ಎಷ್ಟು ಮತಗಳನ್ನು ಪಕ್ಷಕ್ಕೆ ತಂದಿದ್ದಾರೋ ಅಂತಹ ನಾಯಕರಿಗೆ ಮೊದಲು ಪ್ರಾಶಸ್ತ್ಯ ನೀಡಿ ಎಂದಿದ್ದಾರೆ, ಅದರಂತೆ ನಡೆಯುತ್ತೇವೆ ಅಂತಾ ಹೇಳಿದರು.


ಕೊರೊನಾ ಸಮಯದಲ್ಲಿ ಜನರ ಕಷ್ಟಗಳಿಗೆ ಸ್ಪಂದಿಸಿ, ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಜನರ ಸೇವೆಗೆ ಕಳುಹಿಸಿ ಜೀವ ಒತ್ತೆ ಇಟ್ಟು ಪಕ್ಷ ಕಟ್ಟಿದ್ದೇವೆ. ಸ್ವಾತಂತ್ರ್ಯ ಅಮೃತ ಮಹೋತ್ಸವ, ಮೇಕೆದಾಟು ಪಾದಯಾತ್ರೆ ರಾಜ್ಯದ ಇತಿಹಾಸದಲ್ಲಿ ದಾಖಲಾಗುವಂತಹ ಸಂಗತಿಗಳು, ಭಾರತ್‌ ಜೋಡೋ ಯಾತ್ರೆಯ ಸಂದರ್ಭದಲ್ಲಿ ಬದನವಾಳುವಿನಲ್ಲಿ ಸವರ್ಣೀಯರು ಮತ್ತು ದಲಿತರ ಮಧ್ಯೆ ಇದ್ದಂತಹ ಕಂದಕವನ್ನು ಮುಚ್ಚಿದ್ದೇವೆ. ಇದು ಕಾಂಗ್ರೆಸ್‌ ಪಕ್ಷದ ಸಾಧನೆ ಎಂದು ಡಿಕೆಶಿ ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.