ಬೆಂಗಳೂರು: ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ, ಸ್ವಾರ್ಥಕ್ಕಾಗಿ, ಇನ್ನೊಬ್ಬರ ಮನೆಗೆ ಬಿದ್ದ ಬೆಂಕಿಯಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದ ಹಾಗೂ ಬಲವಂತ ಮತಾಂತರಕ್ಕೆ ಸಹಮತಿ - ಸಹಾನುಭೂತಿ ತೋರಿಸುತ್ತಿದ್ದ ಕಾಂಗ್ರೆಸ್‌ ನಾಯಕರಿಗೆ ಈಗ ದಿಕ್ಕು ಕಾಣದಂತಾಗಿದೆ ಎಂದು ಬಿಜೆಪಿ ಟೀಕಿಸಿದೆ. ಮತಾಂತರ ನಿಷೇಧ ವಿಧೇಯಕ(Anti Conversion Bill 2021) ಮಂಡನೆ ವಿಚಾರವಾಗಿ ಟ್ವೀಟ್ ಮಾಡಿದ್ದ ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು ನೀಡಿದೆ.


COMMERCIAL BREAK
SCROLL TO CONTINUE READING

‘ಮತಾಂತರ ನಿಷೇಧ ವಿಧೇಯಕದ ಪ್ರತಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್(DK Shivakumar) ಅವರು ಸದನದಲ್ಲೇ ಹರಿದು ಹಾಕಿದರು. ಇದು ಸಂಸದೀಯ ನಡವಳಿಕೆಯೇ? ಯಾರನ್ನು ಮೆಚ್ಚಿಸುವುದಕ್ಕಾಗಿ ಸದನದಲ್ಲಿ ಈ ರೀತಿಯ ಗೂಂಡಾಗಿರಿ ಪ್ರದರ್ಶನ ಮಾಡುತ್ತೀರಿ? ಆಂಟೋನಿಯೋ ಮೈನೋ ಅವರ ಕೃಪೆ ಗಳಿಸಲು ಹುಟ್ಟಿದ ಧರ್ಮವನ್ನೇ ತುಳಿಯುತ್ತಿದ್ದೀರಾ?’ ಅಂತಾ ಬಿಜೆಪಿ ಪ್ರಶ್ನಿಸಿದೆ.


ಸಂವಿಧಾನ ವಿರೋಧಿ ನಡೆಗಳನ್ನೇಕೆ ಕಾಂಗ್ರೆಸ್‌ ಪ್ರೋತ್ಸಾಹಿಸುತ್ತಿದೆ?: ಬಿಜೆಪಿ ಪ್ರಶ್ನೆ


‘ಬಲವಂತದ ಮತಾಂತರದ ತಡೆಗೆ ಈಗಾಗಲೇ ಕಾನೂನುಗಳಿರುವುದು ನಿಜ. ಆದರೂ ಬಲವಂತದ ಮತಾಂತರ(Anti Conversion) ನಡೆಯುತ್ತಿದೆ. ಹೀಗಾಗಿ ಕಾನೂನನ್ನು ಮತ್ತಷ್ಟು ಬಲಿಷ್ಠಗೊಳಿಸಿದರೆ ನಿಮಗೆ ಏನು ಸಮಸ್ಯೆ? ಮತಾಂತರಕ್ಕೆ ನೀವು ಏಕೆ ಪ್ರೋತ್ಸಾಹ ನೀಡುತ್ತಿದ್ದೀರಿ? ಮತ ಹೆಚ್ಚುತ್ತದೆ ಎಂಬ ದುರಾಸೆಯೇ?’ ಅಂತಾ ಕಾಂಗ್ರೆಸ್ ಗೆ ಬಿಜೆಪಿ ಪ್ರಶ್ನಿಸಿದೆ.


Anti Conversion Bill 2021: ಭಾರೀ ವಿರೋಧದ ನಡುವೆಯೇ ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ


BJP Karnataka) ಪ್ರಶ್ನಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.